ಹಾಸನ: ತಲೆಗೆ ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜ.31 ರಂದು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾವಲುಹೊಸೂರು ಗ್ರಾಮದ ಬಳಿ ನಡೆದಿದೆ.
ಕಾವಲುಹೊಸೂರು ಗ್ರಾಮದ ನಿವಾಸಿಯಾದ ಆನಂದ್ ಕುಮಾರ್ (42) ಕೊಲೆಯಾಗಿದ್ದ ವ್ಯಕ್ತಿ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆಗೆ ಸುಪಾರಿ ನೀಡಿದ್ದ ಪತ್ನಿ, ಆಕೆಯ ಪ್ರಿಯಕರ ಹಾಗೂ ಇಬ್ಬರು ಹಂತಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಶಾಲಾ, ಕಾಲೇಜುಗಳ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ: ಬಿ.ಸಿ. ನಾಗೇಶ್
ಪತ್ನಿ ಸುನಿತಾ ಹಾಗೂ ಪ್ರಿಯಕರ ನವೀನ್ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಬೆಂಗಳೂರಿನ ಇಬ್ಬರು ಹಂತಕರಿಗೆ ಸುಪಾರಿ ನೀಡಿದ್ದರು.