ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ದಂಧೆಕೋರರ ಅಟ್ಟಹಾಸ ಪ್ರಕರಣ – ನೊಂದ ಮಹಿಳೆಗೆ ಸಿಎಂ ಕಚೇರಿಯಿಂದ ನೆರವು

Public TV
2 Min Read
HDK 1

ಬೆಂಗಳೂರು: ನಗರದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಮಹಿಳೆ ಮೇಲೆ ನಡೆಸಿದ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಸಿಎಂ ಕಚೇರಿ ಸಿಬ್ಬಂದಿ, ಮಹಿಳೆಯ ನೆರವಿಗೆ ಧಾವಿಸಿದೆ.

ಇಂದು ಬೆಳಗ್ಗೆ ಮೀಟರ್ ಬಡ್ಡಿ ದಂಧೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕೃತ್ಯವನ್ನು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಬಗ್ಗೆ ಸಿಎಂ ಕಚೇರಿ ಸಿಬ್ಬಂದಿ ಪಬ್ಲಿಕ್ ಟಿವಿಗೆ ಕರೆ ಮಾಡಿ ಮಹಿಳೆಯ ಮೊಬೈಲ್ ಪಡೆದಿದ್ದಾರೆ. ಕೂಡಲೇ ಮಹಿಳೆಗೆ ಕರೆ ಮಾಡಿ ನಾವಿದ್ದೀವಿ ಎಂದು ಧೈರ್ಯ ತುಂಬಿದ್ದಾರೆ. ಅಲ್ಲದೇ 11 ಗಂಟೆಗೆ ಸಿಎಂ ಗೃಹ ಕಚೇರಿಗೆ ಬರುವಂತೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಅಂತ ಹೇಳಿದ್ದಾರೆ.

METER BADDI copy

ಅಲೋಕ್ ಕುಮಾರ್ ಸಮ್ಮುಖದಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿರುವ ಸಿಎಂ ಕುಮಾರಸ್ವಾಮಿ ಅವರು ಬಡ್ಡಿ ದಂಧೆ ಕೋರರ ವಿರುದ್ಧ ಕ್ರಮಕೈಗೊಳ್ಳುವ ಸೂಚನೆ ನೀಡಿದ್ದಾರೆ. ಖುದ್ದು ಕುಮಾರಸ್ವಾಮಿ ಅವರೇ ಮಹಿಳೆಯ ಸಮಸ್ಯೆಯನ್ನು ಆಲಿಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ನಡೆದಿದ್ದೇನು?
ಮೀಟರ್ ಬಡ್ಡಿ ಗ್ಯಾಂಗ್ ಬಡ್ಡಿ ದುಡ್ಡುಕೊಡಲಿಲ್ಲ ಅಂತ ಮಹಿಳೆಯನ್ನು ಮನೆಯಲ್ಲಿಯೇ ಕೂಡಿ ಹಾಕಿ ತಂದೆ ಮುಂದೆನೇ ಲೈಂಗಿಕ ಕಿರುಕುಳ ನೀಡಿದ್ದರು. ಮತ್ತಿಕೆರೆ Public Tv IMPACT copy 1ನಿವಾಸಿ ಮಹಿಳೆಯೊಬ್ಬರು ಕಳೆದ ಜನವರಿಯಲ್ಲಿ ಅದೇ ಏರಿಯಾದ ಪ್ರಕಾಶ್ ಮತ್ತು ವೇದಾಂತ್ ಬಳಿಯಿಂದ 1 ಲಕ್ಷ ರೂ. ಹಣವನ್ನು ಪಡೆದಿದ್ದರು. ಹಾಗೆಯೇ ಲಟ್ಟೆ ಗೊಲ್ಲಹಳ್ಳಿ ನಿವಾಸಿ ನಾರಾಯಣಪ್ಪ ಎಂಬವರಿಂದ 2 ಲಕ್ಷ ರೂ. ಹಣ ಪಡೆದಿದ್ದರು. ತಿಂಗಳ ಬಡ್ಡಿಕೂಡ ಕೊಡುತ್ತಿದ್ದರು. ಪ್ರಕಾಶ್ ಮತ್ತು ವೇದಾಂತ್ ಬಳಿ ಪಡೆದ ಹಣಕ್ಕೆ ತಿಂಗಳು ಕಳೆದಂತೆ 30 % ಬಡ್ಡಿ ಜಾಸ್ತಿ ಮಾಡುತ್ತಾ ಹೋಗಿದ್ದಾರೆ. ಪರಿಣಾಮ 1 ಲಕ್ಷ ಹಣಕ್ಕೆ ಎಂಟು ತಿಂಗಳ ಬಡ್ಡಿಯೆಲ್ಲಾ ಸೇರಿಸಿ 12 ಲಕ್ಷ ರೂ. ಆಗಿದೆ. ಅಷ್ಟೇ ಅಲ್ಲದೇ ನಾರಾಯಣಪ್ಪ ಬಳಿ ಪಡೆದ 1 ಲಕ್ಷ ಹಣಕ್ಕೆ 8 ತಿಂಗಳಿಗೆ ಲೆಕ್ಕ ಇಲ್ಲದೇ 28 ಲಕ್ಷ ಆಗಿದೆ ಕೊಡಿ ಅಂತ ಲಟ್ಟೆಗೊಲ್ಲಹಳ್ಳಿಯ ಮನೆವೊಂದರಲ್ಲಿ ಮಹಿಳೆಯನ್ನ ಕೂಡಿ ಹಾಕಿ ತಂದೆಯ ಮುಂದೆನೇ ಸೀರೆ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದರು.

CM HDK 1

ಇತ್ತ ಪ್ರಕಾಶ್ ಮತ್ತು ವೇದಾಂತ್, ಮಗನನ್ನ ಕಿಡ್ನಾಪ್ ಮಾಡ್ತೀವಿ ಅಂತ ಮೊಬೈಲಿನಲ್ಲಿ ಮೆಸೇಜ್ ಹಾಕಿ ಮನಬಂದಂತೆ ಏಕ ವಚನದಲ್ಲಿ ಬೈದಿದ್ದರು. ಮಗ ದೀಪಕ್ ಯಾವ ಕಾಲೇಜಿಗೆ ಹೋಗುವುದು ಗೊತ್ತು. ಸುಮ್ಮನೆ ಅವನ ಭವಿಷ್ಯ ಹಾಳುಮಾಡಬೇಡಿ ಮರ್ಯಾದೆಯಿಂದ ಸೆಟ್ಲ್‍ಮೆಂಟ್ ಮಾಡಿ. ನೀವು ಎಲ್ಲಿದ್ದರೂ ಬಿಡಲ್ಲ ನಮ್ಮದು 12 ಲಕ್ಷ ರೂ. ಕೊಡಬೇಕು ಎಂದಿದ್ದರು. ಅಲ್ಲದೇ ಪ್ರಕಾಶ್ ಮತ್ತು ವೇದಾಂತ್, ನನ್ನ ಪತಿಗೆ ಕಾಲ್ ಮಾಡಿ ಕೆಟ್ಟದಾಗಿ ಬೈದಿದ್ದಾರೆ ಎಂದು ನೊಂದ ಮಹಿಳೆ ದೂರಿದ್ದರು.

ವೇದಾಂತ್ ಹಾಗೂ ಪ್ರಕಾಶ್ ವಿರುದ್ಧ ನೊಂದ ಮಹಿಳೆ ಮತ್ತು ಪತಿ ಸೋಲದೇವನಹಳ್ಳಿ ಮತ್ತು ಕೊಡಿಗೇಹಳ್ಳಿ ದೂರು ದಾಖಲಿಸಿದ್ದಾರೆ. ಆದರೆ ಯಾವುದೇ ಕ್ರಮ ಜರುಗಿಸಿಲ್ಲ ಅಂತ ಅವರು ತಮ್ಮ ಅಳಲು ತೋಡಿಕೊಂಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Alok kumar

https://www.youtube.com/watch?v=iEYZexISgIo

Share This Article
Leave a Comment

Leave a Reply

Your email address will not be published. Required fields are marked *