Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸೂಚನೆ: ಬೊಮ್ಮಾಯಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನಕ್ಕೆ ಸೂಚನೆ: ಬೊಮ್ಮಾಯಿ

Public TV
Last updated: May 17, 2022 10:35 pm
Public TV
Share
3 Min Read
Basavaraj Bommai 6
SHARE

ಬೆಂಗಳೂರು: ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳು ಸಕಾಲಿಕವಾಗಿ ಅನುಷ್ಠಾನಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

2022-23ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತವನ್ನು ಚುರುಕುಗೊಳಿಸುವುದು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತಂತೆ ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿದರು.

Basavaraj Bommai

ಬಜೆಟ್‍ನಲ್ಲಿನ ಕಾರ್ಯಕ್ರಮಗಳ ಶೀಘ್ರ ಅನುಷ್ಠಾನ, ಯೋಜನೆಗಳ ಜಾರಿಗೆ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ರೈತರಿಗೆ, ಎಸ್‍ಸಿಎಸ್‍ಟಿ, ಓಬಿಸಿ ಸೇರಿದಂತೆ ಜನರಿಗೆ ನೇರವಾಗಿ ಡಿಬಿಟಿ ಮೂಲಕ ಆರ್ಥಿಕ ನೆರವು ನೀಡುವ ಕಾರ್ಯಕ್ರಮಗಳನ್ನು ಜೂನ್ ತಿಂಗಳೊಳಗೆ ಪ್ರಾರಂಭಿಸುವ ಸೂಚನೆ ನೀಡಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಕಾರ್ಯಕ್ರಮಗಳು ಮುಟ್ಟಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ ಎಂದರು.

bommai budget rupee

ಬಜೆಟ್ ಕಾರ್ಯಕ್ರಮಗಳಲ್ಲಿ ಆರ್ಥಿಕ ಅಭಿವೃದ್ಧಿಗೆ ನೀಡುವ ಯೋಜನೆಗಳಿಗೆ ಭೂ ಸ್ವಾಧೀನ, ಟೆಂಡರ್ ಪ್ರಕ್ರಿಯೆಗಳು ಶೀಘ್ರದಲ್ಲಿ ಮುಗಿಸಬೇಕು. ಆಡಳಿತಕ್ಕೆ ವೇಗ ತಂದು, ದಕ್ಷತೆಯಿಂದ ಕೆಲಸಗಳಾಗಬೇಕು. ಜನಸಾಮಾನ್ಯರಿಗೆ ಸರ್ಕಾರದ ಕಾರ್ಯಕ್ರಮಗಳಿಗೆ ಲಾಭವಾಗಬೇಕು ಎನ್ನುವ ಉದ್ದೇಶದಿಂದ ಇಂದಿನ ಸಭೆಯನ್ನು ನಡೆಸಲಾಗಿದೆ ಎಂದರು.

Basavaraj Bommai 1 1

ನಿರ್ಣಯ ತೆಗೆದುಕೊಳ್ಳುವ ಹಂತಗಳನ್ನು ಕಡಿಮೆ ಮಾಡುವುದು, ಆಡಳಿತಾತ್ಮಕ ಪ್ರಕ್ರಿಯೆಗೆ ಹೊಸ ಚಾಲನೆ ನೀಡುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಸಮಿತಿ ತಿಳಿಸಿರುವಂತೆ ಅನುಷ್ಠಾನ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಪರ ಮುಖ್ಯ ಕಾರ್ಯದರ್ಶಿಗಳ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ನಡೆಸಿದ ತುರ್ತು ಸಭೆಯ ಮುಖ್ಯಾಂಶಗಳು:

1. ಬಜೆಟ್‍ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಕೂಡಲೇ ಕ್ರಮ ವಹಿಸಬೇಕು.

2. ನಿಮ್ಮ ಹಂತದಲ್ಲಿ ಕಾರ್ಯಾದೇಶವಾಗಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಹಂತದಲ್ಲಿ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಬೇಕು.

3. ಬಜೆಟ್‍ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಾರ್ಯಾದೇಶದ ಜೊತೆಗೆ ಡಿಪಿಆರ್ ಆಗಬೇಕು. ಅಂದಾಜುಪಟ್ಟಿ, ಟೆಂಡರ್ ಪ್ರಕ್ರಿಯೆ ಭೂ ಸ್ವಾಧೀನ ಪ್ರಕ್ರಿಯೆಗಳು ಕ್ಷಿಪ್ರಗತಿಯಲ್ಲಿ ಆಗಬೇಕು. ಇಲಾಖೆಗಳು ಕಾಲಮಿತಿಯೊಳಗೆ ಅನುಷ್ಠಾನ ಮಾಡಬೇಕು.

4. ಮುಂದುವರೆದ ಕಾರ್ಯಕ್ರಮಗಳು, ಹೊಸ ಘೋಷಣೆಗಳ ವಿಶ್ಲೇಷಣೆ ಅಗತ್ಯ. ಇಲಾಖೆ ಮುಖ್ಯಸ್ಥರಿಗೆ ಈ ಬಗ್ಗೆ ಸ್ಪಷ್ಟತೆ ಇರಬೇಕು.

5. ಕಾನೂನು ತಿದ್ದುಪಡಿಗಳನ್ನು ಪರಿಗಣಿಸಬೇಕು. ಹೊಸ ಕಾನೂನುಗಳನ್ನು ಅಧ್ಯಯನ ಮಾಡಿ ಅನುಷ್ಠಾನಕ್ಕೆ ತರಬೇಕು.

6. ಬಜೆಟ್ ತನ್ನ ಪ್ರಸ್ತುತತೆಯನ್ನು ಕಳೆದುಕೊಳ್ಳಬಾರದು. ಬಜೆಟ್ ಘೋಷಣೆಗಳಿಗೆ ಪ್ರಸ್ತುತತೆ ಹಾಗೂ ಅರ್ಥಪೂರ್ಣತೆ ನೀಡುವುದು ನಮ್ಮ ಮುಖ್ಯ ಉದ್ದೇಶ. ಇದರ ಅರಿವು ನಿಮಗಿರಬೇಕು.

7. ಮಳೆಗಾಲದಲ್ಲಿ ಚಾಲನೆ ನೀಡಬಹುದಾದ ವೆಬ್ ಸೈಟ್, ಡಿಬಿಟಿ ಮುಂತಾದ ಕಾರ್ಯಕ್ರಮಗಳಿಗೆ ಚಾಲನೆ ನೀಡುವುದು.

8. ಅಗಸ್ಟ್ ತಿಂಗಳಿನೊಳಗೆ ಎಲ್ಲಾ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಬೇಕು.

9. ಈ ವರ್ಷ 6500 ಕ್ಕೂ ಹೆಚ್ಚು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಲೆಗಳ ಗುರುತಿಸುವಿಕೆ ಪ್ರಾರಂಭಿಸಿ. ಜೂನ್, ಜುಲೈ ಒಳಗೆ ತಯಾರಿ ನಡೆಸಿ ಅಗಸ್ಟ್‍ನಲ್ಲಿ ಕಾಮಗಾರಿ ಪ್ರಾರಂಭವಾಗಬೇಕು.

10. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೇರಿಸುವ ಕಾರ್ಯಕ್ರಮ, ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಅಗತ್ಯ.

11. ರಸ್ತೆ, ರೈಲು, ಬಂದರು ಮುಂತಾದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದು.

12. ಸಾಮಾಜಿಕ ವಲಯ, ಶಿಕ್ಷಣ, ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಹೇಗೆ ಅನುಷ್ಠಾನ ಮಾಡುವುದು ಎಂದು ಮೈಕ್ರೋ ಮಟ್ಟದಲ್ಲಿ ಯೋಜನೆ ಆಗಬೇಕು.

13. ಗೋಶಾಲೆ, ಪಶು ಚಿಕಿತ್ಸಾಲಯ, ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳ ಕಾರ್ಯಕ್ರಮಗಳು ಅನುಷ್ಠಾನಕ್ಕೆ ತರಲು ಸೂಕ್ತ ಯೋಜನೆ ಅಗತ್ಯ.

14. ಕ್ಯಾನ್ಸರ್ ರೋಗಿಗಳಿಗೆ 10 ಕಿಮೋಥೆರಪಿ ಕೇಂದ್ರಗಳ ಸ್ಥಾಪಿಸುವ ಯೋಜನೆಗೆ ರೂಪುರೇಷೆ ಸಿದ್ಧಪಡಿಸಿ. 16,000 ಸೈಕಲ್ಸ್ ಹೆಚ್ಚಿಸಿರುವ ಬಗ್ಗೆ ರೂಪುರೇಷೆ ಸಿದ್ಧಪಡಿಸಿ.

15. ಒಂದು ತಂಡವಾಗಿ, ಅಡಚಣೆಗಳನ್ನು ನಿವಾರಿಸಿ ಕಾರ್ಯ ನಿರ್ವಹಿಸಬೇಕು. ಅನುದಾನ ಹಾಗೂ ಸಮಯಕ್ಕೆ ಸರಿಯಾದ ನಿರ್ವಹಣೆ ಅತ್ಯವಶ್ಯ.

16. ಕಡತ ವಿಲೇವಾರಿಗೆ ಇಲಾಖೆಗಳಿಗೆ ಗಡುವು ನೀಡಿ. ಸಕಾಲ ಯೋಜನೆಯಡಿ ಕಡತ ವಿಲೇವಾರಿ ಮಾಡುವುದು.

17. ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳು ಪೂರ್ಣಗೊಳ್ಳಬೇಕು.

18. ಯಾವುದೇ ನಿಗಮಗಳಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಬಳಸದೇ ಖಾತೆಗಳಲ್ಲಿ ಇಡಬಾರದು.

Share This Article
Facebook Whatsapp Whatsapp Telegram
Previous Article yazuvendra chahal ವಿರಾಟ್ ಕೊಹ್ಲಿಯ 973 ರನ್ ದಾಖಲೆ ಮುರಿಯುತ್ತೇನೆ: ಯಜುವೇಂದ್ರ ಚಹಲ್
Next Article Seg 3 3 ಬಿಗ್ ಬುಲೆಟಿನ್ 17 May 2022 Part 1

Latest Cinema News

Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National

You Might Also Like

Chikkaballapura Mother Suicide
Chikkaballapur

Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

4 hours ago
siddaramaiah mandya
Latest

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

4 hours ago
POLICE JEEP 1
Bengaluru City

ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

5 hours ago
Chitradurga Hindu Mahaganapathi Shobhayatre
Chitradurga

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ – ಜನಸಾಗರ, ಡಿಜೆ ಸದ್ದಿಗೆ ಯುವ ಸಮೂಹ ಭರ್ಜರಿ ಡ್ಯಾನ್ಸ್

6 hours ago
Mahadeshwara Hills
Chamarajanagar

ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

7 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?