Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ

Public TV
Last updated: June 6, 2023 10:21 pm
Public TV
Share
2 Min Read
Siddaramaiah 1 2
SHARE

ಬೆಂಗಳೂರು: 5 ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಲು ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

5 ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಖರ್ಚಾಗಲಿದೆ? ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತೀರಿ ಎಂದು ಮಾಧ್ಯಮಗಳು ಈ ಹಿಂದೆ ಹಲವು ಬಾರಿ ಸರ್ಕಾರವನ್ನು ಪ್ರಶ್ನಿಸಿದ್ದವು. ಆದರೆ ಇಂದು ಸಿದ್ದರಾಮಯ್ಯ ಈ ಯೋಜನೆಗೆ ಅಂದಾಜು ವೆಚ್ಚವನ್ನು ತಿಳಿಸಿದ್ದಾರೆ. ಆದರೆ ಇಷ್ಟೊಂದು ಹಣವನ್ನು ಹೇಗೆ ಹೊಂದಾಣಿಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇದನ್ನೂ ಓದಿ: ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

ಟ್ವೀಟ್‌ನಲ್ಲಿ ಏನಿದೆ?
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ.

ಬಿಜೆಪಿ (BJP) ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು.

ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್ (Congress) ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ

TAGGED:bengalurubjpcongressGuaranteeSchemesiddaramaiahtweettwitterಕಾಂಗ್ರೆಸ್ಗ್ಯಾರಂಟಿ ಯೋಜನೆಟ್ವಿಟ್ಟರ್ಟ್ವೀಟ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
13 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
16 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
17 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
17 hours ago

You Might Also Like

Shehbaz Sharif Asif munir
Latest

ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

Public TV
By Public TV
45 seconds ago
HAL
Bengaluru City

ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

Public TV
By Public TV
22 minutes ago
ಸಾಂದರ್ಭಿಕ ಚಿತ್ರ
Latest

ಬಿಎಸ್‌ಎಫ್‌ ಯೋಧರ ಭರ್ಜರಿ ಬೇಟೆ – ಸಾಂಬಾದಲ್ಲಿ 7 ಮಂದಿ ಜೈಶ್‌ ಉಗ್ರರ ಹತ್ಯೆ

Public TV
By Public TV
47 minutes ago
IPL 2025
Cricket

ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ರದ್ದಾಗುತ್ತಾ ಐಪಿಎಲ್‌?- ಅತ್ತ ಪಾಕ್‌ ಸೂಪರ್‌ ಲೀಗ್‌ ದುಬೈಗೆ ಶಿಫ್ಟ್‌

Public TV
By Public TV
1 hour ago
04
Latest

Video | ಪ್ರತೀಕಾರ ಸಮರ – ರಾತ್ರಿಯಿಡೀ ವಾರ್‌ರೂಂನಲ್ಲಿದ್ದು ಕ್ಷಣಕ್ಷಣದ ಮಾಹಿತಿ ಪಡೆದ ಮೋದಿ

Public TV
By Public TV
1 hour ago
Jammu
Latest

ಜಮ್ಮುವಿನಲ್ಲಿ ಅಮಾಯಕರನ್ನ ಟಾರ್ಗೆಟ್‌ ಮಾಡಿದ ʻಪಾಪಿಸ್ತಾನʼ – 10,000 ಮಂದಿ ಸ್ಥಳಾಂತರ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?