Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ

Bengaluru City

ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ ಅನುಷ್ಠಾನ

Public TV
Last updated: July 26, 2022 12:00 pm
Public TV
Share
3 Min Read
govt school 2
SHARE

ಬೆಂಗಳೂರು: ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹೊಸ ಪ್ಲ್ಯಾನ್ ಮಾಡಿದೆ. ಸರ್ಕಾರಿ ಅಧಿಕಾರಿಗಳಿಗೆ ಸರ್ಕಾರಿ ಶಾಲಾ-ಕಾಲೇಜುಗಳ ಗುಣಮಟ್ಟದ ಶಿಕ್ಷಣ ಹೆಚ್ಚಿಸುವ ಜವಾಬ್ದಾರಿಯನ್ನ ಶಿಕ್ಷಣ ಇಲಾಖೆ ನೀಡಿದೆ.

ಸರ್ಕಾರಿ ಶಾಲಾ-ಕಾಲೇಜುಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ದತ್ತು ಕಾರ್ಯಕ್ರಮ ತಮ್ಮ ಭಾಗದ ಸರ್ಕಾರಿ ಶಾಲಾ-ಕಾಲೇಜುಗಳನ್ನ ಅಧಿಕಾರಿಗಳು ದತ್ತು ಪಡೆದು ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸುವ ಕಾರ್ಯಕ್ರಮ ಇದಾಗಿದೆ. ರಾಜ್ಯ, ಜಿಲ್ಲಾಮಟ್ಟದಿಂದ ತಾಲೂಕು ಮಟ್ಟದ ಎಲ್ಲ ಹಂತದ ಅಧಿಕಾರಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದೇ ಶೈಕ್ಷಣಿಕ ದತ್ತು ಕಾರ್ಯಕ್ರಮವಾಗಿದೆ. ಇದನ್ನೂ ಓದಿ: ಇತ್ತೀಚೆಗೆ ನಡೆಯುತ್ತಿರುವ ಕ್ಷುಲ್ಲಕ ಚರ್ಚೆ ನನ್ನನ್ನು ತಲೆ ತಗ್ಗಿಸುವಂತೆ ಮಾಡುತ್ತಿದೆ: ಮಸ್ಕ್ 

govt school 1 1

ಏನಿದು ಶೈಕ್ಷಣಿಕ ದತ್ತು ಕಾರ್ಯಕ್ರಮ?
ಶಾಲಾ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಸರ್ಕಾರದ ಎಲ್ಲ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಒಂದು ಸರ್ಕಾರಿ, ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ-ಪೂರ್ವ ಕಾಲೇಜನ್ನು ದತ್ತು ಪಡೆಯುವುದು.

ತಮ್ಮ ಕೆಲಸದ ಸ್ಥಳದಲ್ಲಿ ಸ್ಥಳೀಯವಾಗಿ ಇರುವ ಶಾಲಾ-ಕಾಲೇಜುಗಳನ್ನು ದತ್ತು ಪಡೆಯುವುದು. ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ, ಕಾಲೇಜಿಗೆ ತಿಂಗಳಿಗೆ ಕನಿಷ್ಟ ಒಂದು ಅಥವಾ ಎರಡು ಬಾರಿ ಭೇಟಿ ನೀಡುವುದು. ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ, ಸಲಹೆ, ಮಾರ್ಗದರ್ಶನ ನೀಡುವುದು.

govt school 4

ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸುವುದು, ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಗಳನ್ನು ನಿಗದಿಪಡಿಸಿಕೊಂಡು, ಅವುಗಳನ್ನು ಸಾಧಿಸಲು ಪ್ರೇರಣೆ ನೀಡುವುದು, ಅಧಿಕಾರಿಗಳು ತಮ್ಮ ವೃತ್ತಿಯ ಬಗ್ಗೆ ಮಾಹಿತಿ, ಅನುಭವಗಳನ್ನು ಹಂಚಿಕೊಳ್ಳುವುದು.

ಪ್ರಾಂಶುಪಾಲರು, ಶಿಕ್ಷಕರ ಜೊತೆ ಸಂವಾದ ನಡೆಸಿ, ಶಾಲೆ ಕೈಗೊಳ್ಳುತ್ತಿರುವ ಉತ್ತಮ ಕಾರ್ಯಗಳ ಮಾಹಿತಿ ಪಡೆದು, ಅಗತ್ಯವಾದ ಮಾರ್ಗದರ್ಶನ, ಪ್ರೇರಣೆ ನೀಡುವುದು. ಶಾಲೆ, ಕಾಲೇಜಿನ ಕುಂದು-ಕೊರತೆಗಳನ್ನು ಸಾವಧಾನದಿಂದ ಆಲಿಸಿ, ಗಮನಿಸಿ, ಅವುಗಳ ನಿವಾರಣೆಗೆ ಸರ್ಕಾರ ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಪ್ರೇಮಿಗಳು, ದಾನಿಗಳ ನೆರವಿನಿಂದ ಅಗತ್ಯ ಕ್ರಮ ಕೈಗೊಳ್ಳುವುದು.

ಅಧಿಕಾರಿಗಳ ಶಾಲಾ ಭೇಟಿಯು ಸೌಹಾರ್ದಯುತ ಮತ್ತು ಪ್ರೇರಣಾದಾಯಕವಾಗಿ ಇರಬೇಕು. ದತ್ತು ಪಡೆದ ಶಾಲಾ-ಕಾಲೇಜುಗಳಲ್ಲಿ ಶೈಕ್ಷಣಿಕ ಗುಣಮಟ್ಟದ ವೃದ್ಧಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಅಧಿಕಾರಿಗಳು ನಡೆಸಬೇಕು. ದತ್ತು ಪಡೆದವರು ಶಾಲೆಯಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಬಳಕೆ ಆಗುತ್ತಿದೆಯಾ ಎಂದು ಪರಿಶೀಲಿಸಿ ಮುಖ್ಯ ಶಿಕ್ಷಕರಿಗೆ ಸಲಹೆ, ಸೂಚನೆಗಳನ್ನು ಕೊಡಬಹುದು.

SCHOOL UNIFORAM

ವಿದ್ಯಾರ್ಥಿಗಳ ಸಾಮಥ್ರ್ಯ ವೃದ್ಧಿ ಚಟುವಟಿಕೆಗಳಿಗೆ ಶಿಕ್ಷಕರಿಗೆ ಅಗತ್ಯ ಮಾರ್ಗದರ್ಶನ ನೀಡುವುದು. ಕಲಿಕಾ ಪೂರಕ ಚಟುವಟಿಕೆಗಳಿಗೆ ಅಗತ್ಯವಾದ ಸಲಹೆ, ಮಾರ್ಗದರ್ಶನ ನೀಡುವುದು. ಅಕ್ಷರ ದಾಸೋಹದ ಕಾರ್ಯಕ್ರಮವನ್ನ ಸಮರ್ಪಕವಾಗಿ ಅನುಷ್ಠಾನಕ್ಕೆ ಮುಖ್ಯ ಶಿಕ್ಷಕರಿಗೆ ಸಲಹೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು, ಅಪರ ಆಯುಕ್ತರು, ಧಾರವಾಡ, ಅಪರ ಆಯುಕ್ತರು, ಕಲಬುರಗಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಕ್ತ ಸಮನ್ವಯದಿಂದ ರಾಜ್ಯ ವಿಭಾಗ ಹಂತದ ಎಲ್ಲ ಕಛೇರಿಗಳ ಅಧಿಕಾರಿಗಳಿಗೆ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು, ಶೈಕ್ಷಣಿಕ ಕಮತ್ತು ಕಾರ್ಯಕ್ರಮಕ್ಕೆ ಹಂಚಿಕೆ ಮಾಡುವುದು.

ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಪನಿರ್ದೇಶಕರು, ಪದವಿ-ಪೂರ್ವ ಶಿಕ್ಷಣ ಇಲಾಖೆ ಅವರು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಇತರೆ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಜಿಲ್ಲಾ ಹಂತದಲ್ಲಿ ಶೈಕ್ಷಣಿಕ ದತ್ತು ಯೋಜನೆಗೆ ಶಾಲೆಗಳ ಹಂಚಿಕೆಯ ಜವಾಬ್ದಾರಿ ಹೊಂದಿರುವ ನೋಡಲ್ ಅಧಿಕಾರಿಯಾಗಿರುತ್ತಾರೆ. ಇದನ್ನೂ ಓದಿ: ಎಸಿ ರೈಲಿನ ಒಳಗಡೆಯೇ ಛತ್ರಿ ಹಿಡಿದು ಕುಳಿತ ಪ್ರಯಾಣಿಕರು 

govt school
ಸಾಂರ್ಭಿಕ ಚಿತ್ರ

ಈ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಶಾಲೆಗಳ ಹಂಚಿಕೆ, ಅನುಪಾಲನೆ, ಮುಂತಾದ ಸೂಕ್ತ ಕ್ರಮ ಕೈಗೊಳ್ಳುವುದು. ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ಧಿ) ಶೈಕ್ಷಣಿಕ ಮತ್ತು ಕಾರ್ಯಕ್ರಮವು ಸಮರ್ಪಕವಾಗಿ ನಡೆಯುತ್ತಿರುವ ಕುರಿತು ಅವಲೋಕನ ನಡೆಸಿ, ಕಾರ್ಯಕ್ರಮದ ಫಲಶ್ರುತಿಯ ಬಗ್ಗೆ ತ್ರೈಮಾಸಿಕ, ವಾರ್ಷಿಕವಾಗಿ ಒಂದು ವರದಿಯನ್ನು ಸಿದ್ಧಪಡಿಸಿ, ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಇವರ ಮೂಲಕ ಸರ್ಕಾರಕ್ಕೆ ಕಳುಹಿಸುವುದು.

ದತ್ತು ನೀಡುವಲ್ಲಿ ಹೆಚ್ಚು ದಾಖಲಾತಿ ಹೊಂದಿರುವ ಮತ್ತು ಗ್ರಾಮಾಂತರ ಪ್ರದೇಶದ ಶಾಲೆಗಳಿಗೆ ಆದ್ಯತೆ ನೀಡುವುದು. ಶಾಲೆಗಳು ಪುನರಾವರ್ತನೆಯಾಗದಂತೆ ಗಮನಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿರಲಿದೆ.

Live Tv
[brid partner=56869869 player=32851 video=960834 autoplay=true]

TAGGED:Adoption ProgramBangaloregovernment schoolದತ್ತು ಕಾರ್ಯಕ್ರಮಬೆಂಗಳೂರುಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
21 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
28 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
53 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
54 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?