ಬೆಂಗಳೂರು: ಸರ್ಕಾರದ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುತ್ತೇವೆ ಅಂತ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bomai) ಘೋಷಣೆ ಮಾಡಿದ್ದಾರೆ.
ವಿಧಾನ ಪರಿಷತ್ (Vidhana Parshat) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಕೇಳಿದರು. ಗುತ್ತಿಗೆ ಆಧಾರದಲ್ಲಿ ಆಗೋ ನೇಮಕಾತಿ ಮೀಸಲಾತಿ ಜಾರಿ ಮಾಡಿ. ಕೇವಲ ಸರ್ಕಾರ ಹುದ್ದೆಗೆ ಮಾತ್ರ ಮೀಸಲಾತಿ ಜಾರಿ ಮಾಡಿದರೆ ಸಾಲದು. ಸರ್ಕಾರಿ ಇಲಾಖೆಗೆ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಎಲ್ಲಾ ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಆಗಿದೆ. ಹೊಸ ನೇಮಕಾತಿಯಲ್ಲಿ ಮೀಸಲಾತಿ ಕೊಟ್ಟೆ ಕೊಡುತ್ತೇವೆ. ಎಲ್ಲಾ ನೇಮಕಾತಿಯಲ್ಲಿ ಸಂವಿಧಾನದ ಪ್ರಕಾರ ಮೀಸಲಾತಿ ಕೊಡ್ತೀವಿ. ಇದರಲ್ಲಿ ಎರಡು ಮಾತಿಲ್ಲ ಎಂದರು. ಇದನ್ನೂ ಓದಿ: ಅತ್ಯಂತ ಕೆಳಮಟ್ಟದ ಕೆಲಸ ಮಾಡಿ ಕ್ಷಮೆ ಕೇಳೋದರಲ್ಲಿ ಅರ್ಥವಿಲ್ಲ- ಅಶ್ವಥ್ ವಿರುದ್ಧ ಸಿದ್ದರಾಮಯ್ಯ ಕಿಡಿ
ಗುತ್ತಿಗೆ ಆಧಾರದಲ್ಲಿ ನೇಮಕ ಮಾಡೋರಿಗೂ ಮೀಸಲಾತಿ ಪಾಲನೆ ಮಾಡಬೇಕು ಅಂತ ಆದೇಶ ಮಾಡ್ತೀವಿ. ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡೋದು ಔಟ್ ಸೋರ್ಸ್ ನಿಂದ ಆಗುತ್ತದೆ. ಹೀಗಿದ್ರು ಇನ್ನು ಮುಂದೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳೋರಿಗೆ ಮೀಸಲಾತಿ ನಿಯಮ ಪಾಲನೆ ಮಾಡಲು ಸೂಚನೆ ನೀಡುತ್ತೇನೆ ಅಂತ ಸ್ಪಷ್ಟಪಡಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k