Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಧಾರಣಾ ಕ್ರಮವಾಗಿ ‘ಅರ್ಜಿ ಸಲ್ಲಿಕೆಯೊಂದಿಗೆ ಪರಿಶೀಲನೆ’ ವ್ಯವಸ್ಥೆ ಜಾರಿ – ವಾಟ್ಸಪ್ ಸಂದೇಶಕ್ಕೆ ಮೊಬೈಲ್ ಆ್ಯಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುಧಾರಣಾ ಕ್ರಮವಾಗಿ ‘ಅರ್ಜಿ ಸಲ್ಲಿಕೆಯೊಂದಿಗೆ ಪರಿಶೀಲನೆ’ ವ್ಯವಸ್ಥೆ ಜಾರಿ – ವಾಟ್ಸಪ್ ಸಂದೇಶಕ್ಕೆ ಮೊಬೈಲ್ ಆ್ಯಪ್

Bengaluru City

ಸುಧಾರಣಾ ಕ್ರಮವಾಗಿ ‘ಅರ್ಜಿ ಸಲ್ಲಿಕೆಯೊಂದಿಗೆ ಪರಿಶೀಲನೆ’ ವ್ಯವಸ್ಥೆ ಜಾರಿ – ವಾಟ್ಸಪ್ ಸಂದೇಶಕ್ಕೆ ಮೊಬೈಲ್ ಆ್ಯಪ್

Public TV
Last updated: January 9, 2024 10:53 pm
Public TV
Share
3 Min Read
KEA
SHARE

– ಜನವರಿ 10ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಾಮಾನ್ಯ ಪ್ರವೇಶ ಪರೀಕ್ಷೆ (KCET-24) ನಡೆಸುವ ದಿನಾಂಕವನ್ನು ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಆ ಪ್ರಕಾರ ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮುಂಚೆ ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್ 21ರಂದು ಎನ್‌ಡಿಎ (NDA) ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ ಕೆಸಿಇಟಿ ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ. ವೃತ್ತಿಪರ ಕೋರ್ಸುಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅದಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಕೆಸಿಇಟಿ-240 ಪರೀಕ್ಷೆ ತೆಗೆದುಕೊಳ್ಳುವುದಕ್ಕಾಗಿ ಜನವರಿ 10ರಿಂದ (ಬುಧವಾರ) ಫೆಬ್ರವರಿ 10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ

ಮೆಡಿಕಲ್ / ಡೆಂಟಲ್ / ಆಯುಷ್ / ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೇರಲು ಆಸಕ್ತಿ ಇರುವ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಯುಜಿನೀಟ್-2024 ಫಲಿತಾಂಶಗಳ ಪ್ರಕಟಣೆಯ ನಂತರ ಕೆಇಎನಲ್ಲಿ ನೋಂದಾಯಿಸಲಾಗಿರುವ ಅಭ್ಯರ್ಥಿಗಳಿಗೆ ನೀಟ್ ಸ್ಕೋರ್ ಮತ್ತು ರೋಲ್ ನಂಬರ್ ದಾಖಲಿಸಲು ಇಂಟರ್‌ಫೇಸ್ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್ ಜಾಥಾ; ಗೋಡೆ ಬರಹ ಮಾಡುತ್ತಾ ಸವಾರಿಯ ಸಾಹಸ

ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು ‘ಅರ್ಜಿ ಹಾಗೂ ಪರಿಶೀಲನೆ’ ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಲು ಈ ಮುಂಚೆ ಹಿಡಿಯುತ್ತಿದ್ದ ಹೆಚ್ಚಿನ ಸಮಯ ಉಳಿತಾಯವಾಗುತ್ತದೆ ಎಂದು ವಿವರಿಸಲಾಗಿದೆ. ಇದನ್ನೂ ಓದಿ: 2023ರ ಅರ್ಜುನ ಪ್ರಶಸ್ತಿ ಪಡೆದ ಕೈಗಳಿಲ್ಲದ ಬಿಲ್ಲುಗಾರ್ತಿ ಶೀತಲ್ ದೇವಿ – ಸಾಧನೆಗಳೇನು?

ಹೊಸ ಮಾದರಿಯಲ್ಲಿ, ಅಭ್ಯರ್ಥಿಗಳ ವಿವರಗಳನ್ನು, ಅಂದರೆ, ಶಾಲೆಗಳ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ, ಆದಾಯ ಮುಂತಾದ ವಿವರಗಳನ್ನು ಎಸ್‌ಎಟಿ ಹಾಗೂ ಕಂದಾಯ ಇಲಾಖೆಯ ವೆಬ್‌ಸರ್ವೀಸ್ ಮುಖಾಂತರ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಅಭ್ಯರ್ಥಿಗಳು ಪ್ರತ್ಯೇಕವಾಗಿ ದಾಖಲೆಗಳ ಪರಿಶೀಲನೆಗೆ ಭೌತಿಕವಾಗಿ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಪ್ರತಿ ವರ್ಷವೂ ಸುಮಾರು ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ ಪರಿಶೀಲನೆಗಳ ಕಾರ್ಯಗಳು ಈಗ ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ನಡೆಯಲಿವೆ ಎಂದು ತಿಳಿಸಲಾಗಿದೆ. ಹೀಗಾಗಿ, ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ಭರ್ತಿ ಮಾಡಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಸೂಚಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ – ಜ.22ರಂದು ಉತ್ತರ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಪ್ರಾಧಿಕಾರವು ಸುಮಾರು 250ಕ್ಕೂ ಹೆಚ್ಚು ನುರಿತ ಉಪನ್ಯಾಸಕರನ್ನು ಮಾಸ್ಟರ್ ಟ್ರೈನರ್ ಎಂದು ಗುರುತಿಸಿ ಅವರಿಗೆ ಅರ್ಜಿ ಸಲ್ಲಿಸುವ ಬಗ್ಗೆ ತರಬೇತಿಯನ್ನು ಈಗಾಗಲೇ ನೀಡಿದೆ. ಈ ಮಾಸ್ಟರ್ ಟ್ರೈನರ್‌ಗಳು, ಪ್ರತಿ ವಿಜ್ಞಾನ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ಗುರುತಿಸಿ ಅವರಿಗೆ ‘ಕಾಲೇಜು ಟ್ರೈನರ್’ ತರಬೇತಿ ನೀಡಿ ಸಜ್ಜುಗೊಳಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಸಂದೇಹಗಳಿದ್ದಲ್ಲಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿನ ಕಾಲೇಜು ಟ್ರೈನರ್‌ಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ ದೃಢ

ಮೊಬೈಲ್ ಆ್ಯಪ್ ಅಭಿವೃದ್ಧಿ:
ಇದರ ಜೊತೆಗೆ, ಸುಧಾರಣೆಯ ಮತ್ತೊಂದು ಕ್ರಮವಾಗಿ ಕೆಇಎ ಮೊಬೈಲ್ ಆಪ್ ಅಭಿವೃದ್ಧಿಪಡಿಸಿದ್ದು, ಇದನ್ನು ಕೆಇಎ ವೆಬ್‌ಸೈಟ್‌ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಿಂದಾಗಿ ಪರೀಕ್ಷಾ ವೇಳಾಪಟ್ಟಿ, ಸೂಚನೆ, ಅರ್ಜಿ ಪ್ರಕ್ರಿಯೆ ಯಾವ ಹಂತದಲ್ಲಿದೆ ಇತ್ಯಾದಿ ಮಾಹಿತಿಯನ್ನು ವಾಟ್ಸಪ್ ಮೆಸೇಜ್ ಮೂಲಕವೇ ಪಡೆಯಬಹುದು. ಇದು, ಅಭ್ಯರ್ಥಿಗಳು ಪದೇಪದೇ ವೆಬ್‌ಸೈಟ್‌ಗೆ ಹೋಗಿ ಪರಿಶೀಲಿಸಬೇಕಾದ ಅಗತ್ಯವನ್ನು ತಪ್ಪಿಸುತ್ತದೆ. ಶುಲ್ಕ ಪಾವತಿ ಹಾಗೂ ಅರ್ಜಿಗೆ ಸಂಬಂಧಿಸಿದ ವಿವರಗಳು ಅಭ್ಯರ್ಥಿಗಳ ಪೋರ್ಟಲ್‌ನಲ್ಲಿ (ಕ್ಯಾಂಡಿಡೇಟ್ ಪೋರ್ಟಲ್) ಲಭ್ಯವಿರುತ್ತದೆ. ಇದನ್ನೂ ಓದಿ: ದುಡ್ಡು ಇದ್ದವರು ದೇವಸ್ಥಾನ ಕಟ್ಟುತ್ತಾರೆ, ಇಲ್ಲದವರು ಇರುವಲ್ಲೇ ಪೂಜಿಸಿ: ಸಿದ್ದರಾಮಯ್ಯ

TAGGED:bengaluruCETKEAKEA Mobile AppS RAMYAಎಸ್ ರಮ್ಯಾಕೆಇಎಕೆಇಎ ಮೊಬೈಲ್ ಆ್ಯಪ್ಬೆಂಗಳೂರುಸಿಇಟಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
9 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
45 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
58 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
1 hour ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
2 hours ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?