Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿಯಂದು ಎಣ್ಣೆ ಸ್ನಾನ ಯಾಕೆ ಮಾಡುತ್ತಾರೆ? ಮಹತ್ವ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೀಪಾವಳಿಯಂದು ಎಣ್ಣೆ ಸ್ನಾನ ಯಾಕೆ ಮಾಡುತ್ತಾರೆ? ಮಹತ್ವ ಏನು?

Bengaluru City

ದೀಪಾವಳಿಯಂದು ಎಣ್ಣೆ ಸ್ನಾನ ಯಾಕೆ ಮಾಡುತ್ತಾರೆ? ಮಹತ್ವ ಏನು?

Public TV
Last updated: November 14, 2020 7:10 am
Public TV
Share
4 Min Read
oil Bath
SHARE

ದೀಪಾವಳಿಯನ್ನು ಒಟ್ಟು ಮೂರು ದಿನ ಆಚರಿಸಲಾಗುತ್ತದೆ. ಮೊದಲ ದಿನ ಮನೆಯರೆಲ್ಲರೂ ಎಣ್ಣೆ ಸ್ನಾನ ಮಾಡಲೇಬೇಕು. ದೀಪಾವಳಿಯ ಮೊದಲ ದಿನ ನರಕ ಚರ್ತುದಶಿಯನ್ನು ಕೆಲವು ಭಾಗಗಳಲ್ಲಿ ನೀರು ತುಂಬುವ ಹಬ್ಬ ಅಂತಲೂ ಕರೆಯುತ್ತಾರೆ. ಮನೆಯ ಎಲ್ಲ ಪಾತ್ರೆಗಳಲ್ಲಿ ಅಂದು ಮಡಿಯಿಂದ ನೀರು ತುಂಬಲಾಗುತ್ತದೆ.

ಎಣ್ಣೆ ಸ್ನಾನ ಮಾಡುವ ಮಂದಿಗೆ ಯಾಕೆ ಈ ದಿನ ಎಣ್ಣೆ ಸ್ನಾನ ಮಾಡಲಾಗುತ್ತದೆ? ಬೇರೆ ಹಬ್ಬದ ದಿನದಂದು ಯಾಕೆ ಎಣ್ಣೆ ಸ್ನಾನ ಇಲ್ಲ ಎನ್ನುವ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಪುರಾಣ ಕಥೆಯಲ್ಲಿ ಸಿಗುತ್ತದೆ.

deepavali garuda 4

ಪೌರಾಣಿಕ ಕಥೆಯ ಪ್ರಕಾರ ಮಹಾವಿಷ್ಣುಭಕ್ತ, ದಾನಶೂರ ದೈತ್ಯರಾಜ ಬಲಿ ಚಕ್ರವರ್ತಿ ಪ್ರಜೆಗಳನ್ನು ಅತ್ಯಂತ ಯೋಗಕ್ಷೇಮದಿಂದ ನೋಡಿಕೊಳ್ಳುತ್ತಿರುತ್ತಾನೆ. ರಾಕ್ಷಸ ರಾಜನಾದರೂ ದಾನ ಧರ್ಮದಿಂದ ಹೆಸರುವಾಸಿಯಾಗಿದ್ದ ಬಲಿ ಮಹಾರಾಜನಿಗೆ ತನ್ನ ರೀತಿಯಲ್ಲಿ ಬೇರೆ ಯಾರು ಪ್ರಜೆಗಳನ್ನು ನೋಡಿಕೊಳ್ಳುವುದಿಲ್ಲ ಎಂಬ ಅಹಂಕಾರ ಬರುತ್ತದೆ. ಈತನನ್ನು ಹೇಗಾದರೂ ಮಾಡಿ ಸಂಹಾರ ಮಾಡಬೇಕೆಂದು ದೇವತೆಗಳು ವಿಷ್ಣುವಿನ ಮೊರೆ ಹೋಗುತ್ತಾರೆ.

ದೇವತೆಗಳಿಗೆ ಅಭಯನ ನೀಡಿದ ವಿಷ್ಣು ವಾಮನನ (ಬಾಲಕ) ರೂಪದಲ್ಲಿ ಬಲಿ ಮಹಾರಾಜನ ಬಳಿ ಬರುತ್ತಾನೆ. ವಾಮನ ಮಹಾರಾಜನ ಬಳಿ,”ತನ್ನ ಮೂರು ಹೆಜ್ಜೆ ಊರುವಷ್ಟು ಭೂಮಿಯನ್ನು ದಾನವಾಗಿ ನೀಡಬೇಹುದೇ?” ಎಂದು ಕೇಳುತ್ತಾನೆ. ಇದನ್ನೂ ಓದಿ: ದೀಪಾವಳಿಯ ದೀಪಾರಾಧನೆ-ಮನೆಯ ಮುಂಭಾಗ ಇರಿಸುವ ದೀಪಗಳೆಷ್ಟಿರಬೇಕು?

ಪ್ರಜಾಪರಿಪಾಲನೆಯಲ್ಲಿ ಯಶಸ್ವಿಕಂಡಿರುವ ನನಗೆ ಈ ಪುಟ್ಟ ಬಾಲಕನ ಬೇಡಿಕೆಯನ್ನು ಈಡೇರಿಸುವ ಯೋಗ್ಯತೆ ನನಗಿಲ್ವಾ ಎಂಬ ಅಹಂಕಾರದಿಂದ ಬಲೀಂದ್ರ ಮಹಾರಾಜ ವಾಮನನಿಗೆ,”ನೀನು ಕೇಳಿದ ಮೂರು ಹೆಜ್ಜೆ ಊರುವಷ್ಟು ಜಾಗ ನೀಡುತ್ತೇನೆ” ಎಂದು ವಚನವನ್ನು ಕೊಡುತ್ತಾನೆ.

MNG DEEPAVALI 1 9

ಸ್ಥಳವನ್ನು ದಾನ ಪಡೆಯುವಾಗ ವಾಮನಮೂರ್ತಿ ಆಕಾಶದ ಉದ್ದಕ್ಕೂ ಬೆಳೆಯುತ್ತಾನೆ. ಒಂದು ಪಾದವನ್ನು ಭೂಮಿ ಮೇಲೆ, ಮತ್ತೊಂದು ಪಾದವನ್ನು ಆಕಾಶದ ಮೇಲೆ ಇರಿಸುತ್ತಾನೆ. ಇನ್ನೊಂದು ಪಾದ ಇಡಲು ಜಾಗ ಕಾಣುತ್ತಿಲ್ಲ ಎಲ್ಲಿ ಇಡಬೇಕು ಎಂದು ಕೇಳಿದಾಗ ಬಲಿ ಚಕ್ರವರ್ತಿಗೆ ಜ್ಞಾನೋದಯವಾಗಿ ನನ್ನ ತಲೆ ಮೇಲೆ ಇಡು ಎಂದು ಹೇಳುತ್ತಾನೆ. ಇದನ್ನೂ ಓದಿ: ದೀಪಾವಳಿ ಸಂಭ್ರಮಕ್ಕೆ ಜೊತೆಯಾಗಲಿದೆ ಪರಿಸರ ಸ್ನೇಹಿ ಹಸಿರು ಪಟಾಕಿ

ನನ್ನ ತಲೆ ಮೇಲೆ ನಿಮ್ಮ ಪಾದ ಇಡುವ ಮೂಲಕ ನನ್ನಲ್ಲಿರುವ ಅಹಂಕಾರವೆಲ್ಲ ನಾಶವಾಗಲಿ ಎಂದು ವಾಮನನ ಬಳಿ ಬಲಿ ಕ್ಷಮೆ ಕೇಳುತ್ತಾನೆ. ಶ್ರೀಮನ್ನಾರಾಯಣ ತನ್ನ ಪಾದವನ್ನು ಬಲೀಂದ್ರ ಮಹಾರಾಜನ ಮೇಲೆ ಇರಿಸಿ ಪಾತಾಳಕ್ಕೆ ಕಳುಹಿಸುತ್ತಾನೆ. ಇದನ್ನೂ ಓದಿ: ದೀಪಾವಳಿಗೆ ರುಚಿ ರುಚಿಯಾದ ಕುಂಬಳಕಾಯಿ ಇಡ್ಲಿ ಮಾಡೋದು ಹೇಗೆ?

ತಲೆ ಮೇಲೆ ಕಾಲನ್ನು ಇಡುವ ಮುನ್ನ ವಾಮನ ಬಳಿ ಬಲಿ, ನನ್ನ ಮಕ್ಕಳಂತೆ ನಾನು ಪ್ರಜೆಗಳನ್ನು ನೋಡಿದ್ದೇನೆ. ಹೀಗಾಗಿ ಪ್ರಜೆಗಳನ್ನು ನೋಡಲು ಅವಕಾಶ ನೀಡಬೇಕೆಂದು ಪ್ರಾರ್ಥನೆ ಮಾಡಿಕೊಳ್ಳುತ್ತಾನೆ. ಈ ಪ್ರಾರ್ಥನೆ ಸ್ವೀಕರಿಸಿದ ವಾಮನ ಅಸ್ತು ಎಂದು ಹೇಳಿ ತಲೆಯ ಮೇಲಿಟ್ಟು ಬಲಿ ಚಕ್ರವರ್ತಿಯನ್ನು ಪಾತಾಳಕ್ಕೆ ತುಳಿದುಬಿಡುತ್ತಾನೆ. ಇದನ್ನೂ ಓದಿ:  ದೀಪಾವಳಿ ಹಬ್ಬದ ಆಚರಣೆ ಹಾಗೂ ಅದರ ಮಹತ್ವ ಏನು?

https://www.youtube.com/watch?v=bdq-b9Difjs&t=182s

ಬಲಿಯ ಭಕ್ತಿಯನ್ನು ಮತ್ತು ದಾನಶೀಲಗುಣವನ್ನು ಮೆಚ್ಚಿದ ವಿಷ್ಣು ಪ್ರತಿವರ್ಷ ಒಂದು ದಿನ ಅವನ ಹೆಸರಿನಲ್ಲಿ ಪೂಜೆ ನಡೆಯುವಂತೆ ವರ ನೀಡುತ್ತಾನೆ. ಅದೇನೆಂದರೆ ಆಶ್ವಯುಜ ಮಾಸದಲ್ಲಿ ಮೂರು ದಿವಸಗಳ ಕಾಲ ನೀನು ಭೂಲೋಕಕ್ಕೆ ಬರಬಹುದು. ಅಲ್ಲಿ ನಿನ್ನನ್ನು ಜನತೆ ಪೂಜೆ ಮಾಡುವರು. ಇದರ ಫಲವಾಗಿಯೇ ದೀಪಾವಳಿ ಸಮಯದಲ್ಲಿ ಎಲ್ಲರೂ ದೀಪ ಹಚ್ಚಿ ಬಲೀಂದ್ರ ಪೂಜೆ ಕೈಗೊಳ್ಳುತ್ತಾರೆ. ಆಶ್ವಯುಜ ಕೃಷ್ಣ ಚತುರ್ದಶಿ, ಅಮಾವಾಸ್ಯೆ ಮತ್ತು ಕಾರ್ತಿಕ ಶುದ್ಧ ಪಾಡ್ಯ. ಇದನ್ನು ಬಲಿರಾಜ್ಯವೆಂದು ಹೇಳುತ್ತಾರೆ. ಆ ರೀತಿ ಆಚರಿಸಲ್ಪಡುವ ಕೊನೆಯ ದಿನವೇ ಬಲಿಪಾಡ್ಯಮಿ. ಈ ಅವಧಿಯಲ್ಲಿ ಬಲಿ ಚಕ್ರವರ್ತಿ ಪಾತಾಳದಿಂದ ಭೂಲೋಕ ಸಂಚಾರಕ್ಕೆ ಬರುತ್ತಾನೆಂಬ ನಂಬಿಕೆಯಲ್ಲಿ ಬಲೀಂದ್ರ ಪೂಜೆ ನಡೆಯುತ್ತದೆ. ಇದನ್ನೂ ಓದಿ: ದೀಪಾವಳಿಯಲ್ಲಿ ಧನಲಕ್ಷ್ಮೀ ಪೂಜೆ ಸಲ್ಲಿಸುವ ವಿಧಾನ ಹೇಗೆ? ಧನಲಕ್ಷ್ಮೀ ಚಕ್ರವನ್ನು ಯಾಕೆ ಬಳಕೆ ಮಾಡ್ತಾರೆ?

ದೀಪಾವಳಿಯ ದಿನದಂದು ಪ್ರಜೆಗಳನ್ನು ನೋಡಲು ಬಲೀಂದ್ರ ಮಹಾರಾಜ ಬರುತ್ತಾನೆ ಎಂಬ ನಂಬಿಕೆಯಿಂದ ಜನರು ಅಭ್ಯಂಜನ ಸ್ನಾನಾದಿಗಳನ್ನು ಮಾಡಿಕೊಂಡು ಮನೆಯ ಎಲ್ಲ ಪಾತ್ರೆಗಳಲ್ಲಿ ಶುದ್ಧವಾದ ನೀರನ್ನು ತುಂಬಿಸುತ್ತಾರೆ. ಎಣ್ಣೆ ಸ್ನಾನ ಮಾಡುವಾಗ ಸಪ್ತ ಚಿರಂಜೀವಿಗಳ (ಅಶ್ವತ್ಥಾಮ, ಬಲೀಂದ್ರ, ವೇದವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ ಮತ್ತು ಪರಶುರಾಮ) ಹೆಸರು ಹೇಳುತ್ತಾರೆ. ಕಾರಣ ಮನೆಯಲ್ಲಿರುವ ಮಕ್ಕಳು ಮತ್ತು ಕುಟುಂಬದ ಸದಸ್ಯರ ಆರೋಗ್ಯ ಆಯುಷ್ಯ ಚೆನ್ನಾಗಿರಲಿ ಎಂದು ಸ್ನಾನದ ಸಮಯದಲ್ಲಿ ಚಿರಂಜೀವಿಗಳ ಹೆಸರು ಇರುವ ಶ್ಲೋಕವಾದ ಅಶ್ವತ್ಥಾಮೋ ಬಲಿವ್ರ್ಯಾಸೋ ಹನೂಮಾಂಶ್ಚ ವಿಭೀಷಣಃ |. ಕೃಪಃ ಪರಶುರಾಮಶ್ಚ ಸಪ್ತೈತೇ ಚಿರಜೀವಿನಃ || ಹೇಳಲಾಗುತ್ತದೆ.

ಸ್ನಾನ ಮಾಡುವ ಮುನ್ನ ಎಣ್ಣೆಯನ್ನು ಏಳು ಚುಕ್ಕಿಗಳಾಗಿ ನಿಮ್ಮ ಉಂಗುರ ಬೆರಳಿನ ಮೂಲಕ ಇರಿಸಿ. ನಂತರ ಶ್ಲೋಕ ಹೇಳುತ್ತಾ, ಏಳು ಚುಕ್ಕಿಗಳನ್ನು ಉಂಗುರು ಬೆರಳಿನ ಮೂಲಕ ಅಳಿಸಿ, ಎಣ್ಣೆಯನ್ನು ನಿಮ್ಮ ತಲೆಯಲ್ಲಿರುವ ಸುಳಿಗೆ ಹಚ್ಚಿಕೊಂಡು ಸ್ನಾನ ಮಾಡಬೇಕು. ನಂತರ ಮಡಿಯಿಂದ ನಿಮ್ಮ ನಿಮ್ಮ ಕುಲದೇವತೆಗಳನ್ನು ಪ್ರಾರ್ಥನೆ ಮಾಡಬೇಕು. ಭೂಲೋಕದ ಸಂಚಾರಕ್ಕೆ ಬಂದಿರುವ ಬಲೀಂದ್ರನನ್ನು ಆಹ್ವಾನಿಸಬೇಕು.

https://www.facebook.com/publictv/videos/3012367555654021/

ಕಾರ್ತಿಕ ಮಾಸದಲ್ಲಿ ನಿರಂತರವಾಗಿ ಒಂದು ತಿಂಗಳು ದೀಪಾರಾಧನೆ ಮಾಡಬೇಕು. ಒಂದು ತಿಂಗಳ ದೀಪಾರಾಧನೆಯಿಂದ ನಿಮ್ಮ ಅಭಿವೃದ್ಧಿ ಜ್ಯೋತಿಯಂತೆ ಬೆಳಗುತ್ತದೆ. ಪಟಾಕಿ ಹೊಡೆಯುವ ಬದಲು ದೀಪಗಳನ್ನು ಹಚ್ಚಿ, ನಿಮ್ಮ ಅನಕೂಲಕ್ಕೆ ತಕ್ಕಂತೆ ದೀಪಗಳನ್ನು ದಾನ ಮಾಡಬಹುದು

TAGGED:DeepavaliDeepavali PujaDiwaliDiwali 2019holy bathNaraka ChaturdashiPublic TVದೀಪಾವಳಿದೀಪಾವಳಿ 2019ದೀಪಾವಳಿ ಪೂಜೆನರಕ ಚರ್ತುದಶಿಪಬ್ಲಿಕ್ ಟಿವಿಪವಿತ್ರ ಸ್ನಾನ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
1 hour ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
2 hours ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
2 hours ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
3 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
3 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?