Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

Badlapur Encounter | ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? – ಪ್ರಕರಣ ಟೈಮ್‌ಲೈನ್ ಕೊಡುವಂತೆ ʻಹೈʼಸೂಚನೆ!

Public TV
Last updated: September 25, 2024 10:55 pm
Public TV
Share
3 Min Read
Badlapur sexual assault accused Akshay Shinde opens fire at police shot dead
SHARE

ಮುಂಬೈ: ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಎನ್‌ಕೌಂಟರ್‌ (Badlapur Encounter) ಆಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬದ್ಲಾಪುರ ಪ್ರಕರಣದ 24 ವರ್ಷದ ಆರೋಪಿ ಅಕ್ಷಯ್ ಶಿಂಧೆಯ (Akshay Shinde) ಕಸ್ಟಡಿ ಸಾವಿಗೆ ಕಾರಣವಾದ ಸನ್ನಿವೇಶಗಳ ಅಂಶಗಳ ಕುರಿತು ಪೊಲೀಸರಿಗೆ ಕಠಿಣ ಪ್ರಶ್ನೆಗಳನ್ನು ಕೇಳಿದೆ.

ನಕಲಿ ಎನ್‌ಕೌಂಟರ್‌ನಲ್ಲಿ ತಮ್ಮ ಮಗನನ್ನು ಹತ್ಯೆ ಮಾಡಲಾಗಿದ್ದು, ವಿಶೇಷ ತನಿಖಾ ತಂಡದಿಂದ ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಆರೋಪಿ ಅಕ್ಷಯ್ ಶಿಂಧೆಯ ತಂದೆ ಸಲ್ಲಿಸಿರುವ ಅರ್ಜಿಯನ್ನು ಬಾಂಬೆ ಹೈಕೋರ್ಟ್ (Bombay High Court) ಬುಧವಾರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಬಿಜೆಪಿ ಅನೈತಿಕ ರಾಜಕೀಯ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಕೇಜ್ರಿವಾಲ್ ಐದು ಪ್ರಶ್ನೆ

Badlapur

ಬದ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ ಸ್ವಚ್ಛತಾ ಕಾರ್ಮಿಕನಾಗಿದ್ದ ಅಕ್ಷಯ್ ಶಿಂಧೆ, ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಂಧಿತನಾಗಿದ್ದ. ಆತನನ್ನು ಸೋಮವಾರ ತಲೋಜಾ ಜೈಲಿಗೆ ಕರೆದೊಯ್ಯುವಾಗ, ಪೊಲೀಸರೊಬ್ಬರ ಪಿಸ್ತೂಲು ಕಿತ್ತುಕೊಂಡು ಗುಂಡು ಹಾರಿಸಿದ್ದ. ಘಟನೆಯಲ್ಲಿ ಸಹಾಯಕ ಇನ್‌ಸ್ಪೆಕ್ಟರ್ ಒಬ್ಬರು ಗಾಯಗೊಂಡಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ನಡೆಸಿದ ದಾಳಿಯಲ್ಲಿ ಅಕ್ಷಯ್ ಶಿಂಧೆ ಸತ್ತುಹೋಗಿದ್ದ.

BOMBAY HIGHCOURT

ಅಣ್ಣಾ ಶಿಂಧೆ ಪರ ವಕೀಲರ ವಾದ ಏನು?
ಘಟನೆ ನಡೆದ ಹಿಂದಿನ ದಿನವಷ್ಟೇ ಆರೋಪಿಯನ್ನು ಆತನ ಪೋಷಕರು ಭೇಟಿ ಮಾಡಿದ್ದರು. ಪೊಲೀಸರು ಹೇಳುವಂತೆ ಅಂತಹ ಕೃತ್ಯ ಎಸಗುವ ಯಾವುದೇ ಮಾನಸಿಕ ಬದಲಾವಣೆ ಆತನಲ್ಲಿ ಕಂಡುಬಂದಿರಲಿಲ್ಲ ಎಂದು ಅರ್ಜಿದಾರ ಅಣ್ಣಾ ಶಿಂಧೆ ಅವರ ಪರ ವಕೀಲರು, ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠದ ಎದುರು ವಾದಿಸಿದರು. ಇದನ್ನೂ ಓದಿ: ಭಾಷಣದ ವೇಳೆ ಯಡವಟ್ಟು – ಕಾಶ್ಮೀರಿ ಪಂಡಿತರಿಗೆ ಬದಲಾಗಿ ʻಪಾಕ್‌ ಆಕ್ರಮಿತ ಕಾಶ್ಮೀರʼದಿಂದ ಬಂದ ನಿರಾಶ್ರಿತರು ಎಂದ ರಾಗಾ

ಹಾಲಿ ಪ್ರಕರಣದಲ್ಲಿ ಯಾರು ಅಪರಾಧಿ ಎಂದು ಪೊಲೀಸರೇ ನಿರ್ಧರಿಸುತ್ತಿದ್ದಾರೆ. ಕಾನೂನಿನ ನಿಯಮ ಪಾಲನೆಯಾಗಬೇಕಿತ್ತು. ಇಂತಹ ಎನ್‌ಕೌಂಟರ್ ನಡೆಸಲು ಪೊಲೀಸರಿಗೆ ಉತ್ತೇಜನ ನೀಡುವುದು ಕೆಟ್ಟ ಉದಾಹರಣೆ. ಶಿಂಧೆ ಸಾವಿನ ಕುರಿತು ಕೋರ್ಟ್ ನಿಗಾವಣೆಯಲ್ಲಿ ತನಿಖೆ ನಡೆಯಬೇಕು ಎಂದು ವಕೀಲರು ಪ್ರಬಲ ವಾದ ಮಂಡನೆ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು – ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮೋದಿ ಆಗ್ರಹ

Court

ಸಾವಿಗೆ ಕಾರಣ ಏನು ಎಂದು ಕೋರ್ಟ್ ಪ್ರಶ್ನಿಸಿದಾಗ, ಎಡ ತೊಡೆಯ ಬಳಿ ಗುಂಡೇಟಿನ ಗಾಯವಾಗಿರುವುದು ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ಪೊಲೀಸರಿಂದ ಶಿಂಧೆ ಕಸಿದುಕೊಂಡ ಪಿಸ್ತೂಲನ್ನು ಎರಡು ರೀತಿಗಳಲ್ಲಿ ಅನ್‌ಲಾಕ್ ಮಾಡಿರಬಹುದು. ಮೇಲಿನ ಭಾಗವನ್ನು ಎಳೆದ ಆರೋಪಿ, ಸ್ಲೈಡರ್ ಎಳೆದಿರಬಹುದು. ಆಗ ಅದು ತೆರೆದುಕೊಂಡಾಗ ಗುಂಡು ಹಾರಿಸಿರಬಹುದು ಎಂದು ವಕೀಲರು ಹೇಳಿದರು. ಇದನ್ನೂ ಓದಿ: ಯುಪಿ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!

ಉಳಿದ ಎರಡು ಗುಂಡುಗಳು ಎಲ್ಲಿ?
ಆದರೆ ಇದರಿಂದ ಕೋರ್ಟ್ ತೃಪ್ತವಾಗಲಿಲ್ಲ. ಇದನ್ನು ನಂಬಲಿಕ್ಕಷ್ಟೇ ಕಷ್ಟವಾಗುತ್ತದೆ. ಪಾಪ್‌ ಕಡೆಗೆ ಸ್ಲೈಡರ್ ಎಳೆಯಲು ಸಾಕಷ್ಟು ಶಕ್ತಿ ಬೇಕು. ಪರಿಣತಿ ಇಲ್ಲದ ವ್ಯಕ್ತಿಯು ತರಬೇತಿ ಹೊಂದದ ಹೊರತು ಪಿಸ್ತೂಲಿನಿಂದ ಗುಂಡು ಹಾರಿಸಲಾರ. ರಿವಾಲ್ವರ್ ವಿಭಿನ್ನ. ನಿಮ್ಮ ಪ್ರಕಾರ, ಆತ ಮೂರು ಬುಲೆಟ್‌ಗಳನ್ನು ಹಾರಿಸಿದ್ದಾನೆ. ಒಂದು ಮಾತ್ರವೇ ಪೊಲೀಸ್ ಅಧಿಕಾರಿಗೆ ತಗುಲಿದೆ. ಹಾಗಾದರೆ ಉಳಿದ ಎರಡು ಗುಂಡುಗಳು ಎಲ್ಲಿ? ಎಂದು ಕೋರ್ಟ್ ಪ್ರಶ್ನಿಸಿತು.

ಆರೋಪಿಯ ಮೊಣಕಾಲಿನ ಕೆಳಗೆ ಗುಂಡು ಹಾರಿಸಬಹುದಿತ್ತು ಎಂದು ಕೋರ್ಟ್ ಹೇಳಿದಾಗ, ಆತನಿಗೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿಗೆ ಅಷ್ಟೆಲ್ಲಾ ಆಲೋಚನೆ ಮಾಡುವಷ್ಟು ಸಮಯ ಇರಲಿಲ್ಲ ಎಂದು ಸರ್ಕಾರಿ ಪರ ವಕೀಲರು ಪ್ರತಿಕ್ರಿಯಿಸಿದರು. ಆರೋಪಿಯ ಮೇಲೆ ಪೊಲೀಸರು ಬಲ ಪ್ರಯೋಗಿಸಿಲ್ಲ ಎಂದು ನಾವು ನಂಬುವುದು ಹೇಗೆ? ಎಂದು ಕೋರ್ಟ್ ಪ್ರಶ್ನಿಸಿತು. ಅಲ್ಲದೇ ಆತ ಭಾರಿ ತೂಕದ ಆಸಾಮಿಯಂತೇನೂ ಕಾಣಿಸುವುದಿಲ್ಲ. ಇದನ್ನು ಎನ್‌ಕೌಂಟರ್ ಎಂದು ಕರೆಯಲು ಸಾಧ್ಯವಿಲ್ಲ. ಇದು ಎನ್‌ಕೌಂಟರ್ ಅಲ್ಲ ಎಂದು ಹೇಳಿತು.

ಮುಂದುವರಿದು, ಅಕ್ಷಯ್ ಶಿಂಧೆ ಸಾವಿಗೆ ಕಾರಣವಾದ ಸಂಪೂರ್ಣ ಟೈಮ್‌ಲೈನ್‌ನಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಕೋರ್ಟ್‌ ಗಮನಿಸಿದೆ. ಘಟನೆಯ ಸಮಯದಲ್ಲಿ ಪೊಲೀಸ್ ವ್ಯಾನ್‌ನಲ್ಲಿದ್ದ ಎಲ್ಲಾ ಐದು ಜನರ ದೂರವಾಣಿ ಕರೆ ದಾಖಲೆಗಳನ್ನು ಕೇಳಿದೆ. ಶಿಂಧೆ ಬ್ಯಾರಕ್‌ನಿಂದ ಹೊರಬಂದು ವ್ಯಾನ್‌ಗೆ ಪ್ರವೇಶಿಸಿದಾಗಿನಿಂದ ಅವರ ದೇಹವನ್ನು ಆಸ್ಪತ್ರೆಗೆ ತಲುಪುವವರೆಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ತಾಕೀತು ಮಾಡಿದೆ.

TAGGED:Akshay ShindeBadlapurBombay High CourtCCTV ClipsencounterTimeline
Share This Article
Facebook Whatsapp Whatsapp Telegram

Cinema Updates

ganesh
‘ಜೇಮ್ಸ್’ ಡೈರೆಕ್ಟರ್ ಚೇತನ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್
1 minute ago
Madenuru Manu
ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌
22 minutes ago
salman khan 1 1
ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ
44 minutes ago
SURIYA VIJAY DEVARAKONDA
ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?
1 hour ago

You Might Also Like

PM Modi 1
Latest

ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಕುದಿಯುತ್ತಲೇ ಇರುತ್ತೆ – ಪಾಕ್‌ಗೆ ಮೋದಿ ಖಡಕ್‌ ಸಂದೇಶ

Public TV
By Public TV
3 minutes ago
dk shivakumar 1 2
Bengaluru City

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ – ಹಠ ಸಾಧಿಸಿ ಗೆದ್ದ ಡಿಕೆಶಿ

Public TV
By Public TV
20 minutes ago
Prahlad Joshi 1
Districts

ಕಾಂಗ್ರೆಸ್‌ನವರೇ ಪರಮೇಶ್ವರ್ ಮೇಲೆ ಕ್ರಮ ಆಗ್ಬೇಕು ಅಂತಾ ಇಡಿಗೆ ಮಾಹಿತಿ ನೀಡಿದ್ದು: ಪ್ರಹ್ಲಾದ್ ಜೋಶಿ

Public TV
By Public TV
33 minutes ago
V Somanna
Bagalkot

ಸಿದ್ದರಾಮಯ್ಯ ನಾವೆಲ್ಲ ಒಂದೇ ಟೀಂನಲ್ಲಿ ಇದ್ದವರು, ಈಗ ಮರೆವು ಜಾಸ್ತಿಯಾಗಿದೆ: ಸೋಮಣ್ಣ

Public TV
By Public TV
55 minutes ago
Haryana Youtuber Arrest For Spying Pakistan Jyothi Malhotra
Court

ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

Public TV
By Public TV
57 minutes ago
H.D Revanna
Districts

ದೈವ ಶಕ್ತಿ ಇರೋವರೆಗೆ ಯಾರು ನನ್ನನ್ನು ಕಾಡೋಕೆ ಆಗಲ್ಲ: ಹೆಚ್.ಡಿ ರೇವಣ್ಣ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?