Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೆಹಲಿಗೆ ಡ್ರಗ್ ರಾಕೆಟ್‌ ಹಿಂದೆ ದುಬೈ, ಲಂಡನ್ ನಂಟು – ದುಬೈನಲ್ಲಿರುವ ಭಾರತೀಯನಿಂದಲೇ ಡ್ರಗ್ ಮಾಫಿಯಾ

Public TV
Last updated: October 5, 2024 12:33 pm
Public TV
Share
2 Min Read
delhi police
SHARE

ನವದೆಹಲಿ: 5,000 ಕೋಟಿ ರೂ.ಗಳ ಡ್ರಗ್ಸ್ (Drugs) ದಂಧೆಯ ಬೆನ್ನು ಬಿದ್ದು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ (Delhi Police) ತಂಡಕ್ಕೆ ಲಂಡನ್ ಮತ್ತು ದುಬೈ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಜಾಲದ ಮಾಹಿತಿ ಲಭ್ಯವಾಗಿದೆ. ದಂಧೆಯ ಹಿಂದಿರುವ ಆರೋಪಿ ತುಷಾರ್ ಗೋಯಲ್ ಸೇರಿದಂತೆ ಇತರೆ ಆರೋಪಿಗಳ ಪ್ರಾಥಮಿಕ ವಿಚಾರಣೆಯ ಬಳಿಕ ಈ ಮಾಹಿತಿ ಸ್ಪಷ್ಟವಾಗಿದೆ.

ಪ್ರಕರಣದಲ್ಲಿ ದಕ್ಷಿಣ ದೆಹಲಿಯ ಸರೋಜಿನಿ ನಗರದ ನಿವಾಸಿ ವೀರೇಂದ್ರ ಬಸೋಯಾ ಹೆಸರು ಪ್ರಮುಖವಾಗಿ ಕೇಳಿ ಬಂದಿದೆ. ಬಸೋಯಾ ದುಬೈನಿಂದ ಬೃಹತ್ ಡ್ರಗ್ ಸಿಂಡಿಕೇಟ್ ನಡೆಸುತ್ತಿದ್ದಾನೆ ಎನ್ನಲಾಗಿದೆ. ಕಳೆದ ವರ್ಷ ಪುಣೆ ಪೊಲೀಸರು 3,000 ಕೋಟಿ ರೂಪಾಯಿ ಮೌಲ್ಯದ ‘ಮಿಯಾಂವ್ ಮಿಯಾಂವ್’ ಡ್ರಗ್ಸ್ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲೂ ಬಸೋಯಾ ಹೆಸರು ಕೇಳಿಬಂದಿತ್ತು. ಇದನ್ನೂ ಓದಿ: ದಲಿತ ಶಿಕ್ಷಕ ಸೇರಿ ನಾಲ್ವರ ಭೀಕರ ಹತ್ಯೆ ಕೇಸ್; ಆರೋಪಿಗೆ ಗುಂಡೇಟು‌

COCAINE DRUGS

ಪುಣೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಂಧನದಿಂದ ಪಾರಾಗಲು ಬಸೋಯಾ ದೆಹಲಿಯಿಂದ ದುಬೈಗೆ ಪರಾರಿಯಾಗಿದ್ದ. ದೆಹಲಿ ಪ್ರಕರಣದ ಆರೋಪಿ ತುಷಾರ್ ಗೋಯಲ್ ಜೊತೆ ಬಸೋಯಾ ಅವರ ನಿಕಟ ಸಂಬಂಧ ಹೊಂದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಬಸೋಯಾ ಅವರು ತಮ್ಮ ಡೀಲ್‌ಗಳಲ್ಲಿ ಪ್ರತಿ ವಿತರಣೆಗೆ 4 ಕೋಟಿ ರೂ.ಗಳನ್ನು ಗೋಯಲ್‌ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ದೆಹಲಿ ಪೊಲೀಸ್ ವಿಶೇಷ ಕೋಶವು ಮುಂಬೈ, ಪುಣೆ ಮತ್ತು ಇತರ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡ್ರಗ್ ಮಾಫಿಯಾಗಳನ್ನು ಈ ಪ್ರಕಣದ ವ್ಯಾಪ್ತಿಗೆ ಸೇರಿಸಲು ತನ್ನ ತನಿಖೆಯನ್ನು ವಿಸ್ತರಿಸಿದೆ. ಎಲ್ಲರೂ ಸಾಮಾನ್ಯವಾಗಿ ಒಂದೇ ಸಿಂಡಿಕೇಟ್‌ಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ. ದಕ್ಷಿಣ ದೆಹಲಿಯಲ್ಲಿ ನಡೆಸಿದ ದಾಳಿಯಲ್ಲಿ 5,600 ಕೋಟಿ ರೂಪಾಯಿ ಮೌಲ್ಯದ 500 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡ ನಂತರ ತುಷಾರ್ ಗೋಯಲ್ ಅವರನ್ನು ಅ.2 ರಂದು ಬಂಧಿಸಲಾಯಿತು. ಇದನ್ನೂ ಓದಿ: ಈರುಳ್ಳಿ, ಬೆಳ್ಳುಳ್ಳಿ ಆಯ್ತು – ಈಗ ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ

ಗೋಯಲ್ ಅವರನ್ನು ಇತರ ಮೂವರೊಂದಿಗೆ ಬಂಧಿಸಲಾಯಿತು. ಹಿಮಾಂಶು ಕುಮಾರ್ ಮತ್ತು ದೆಹಲಿಯ ಔರಂಗಜೇಬ್ ಸಿದ್ದಿಕಿ ಮತ್ತು ಭರತ್ ಕುಮಾರ್ ಜೈನ್ ಅವರನ್ನು ಬೃಹತ್ ಮಾದಕವಸ್ತು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಪೊಲೀಸರ ಪ್ರಕಾರ, ಕೊಕೇನ್ ಅನ್ನು ವಿವಿಧ ರಾಜ್ಯಗಳಿಂದ ರಸ್ತೆ ಮೂಲಕ ದೆಹಲಿಗೆ ಕಳ್ಳಸಾಗಣೆ ಮಾಡಲಾಗಿದ್ದು, ಗಾಂಜಾ ಥಾಯ್ಲೆಂಡ್‌ನ ಫುಕೆಟ್‌ನಿಂದ ಹುಟ್ಟಿಕೊಂಡಿದೆ. ಆರೋಪಿಗಳು ಕಾನೂನು ಜಾರಿ ಸಂಸ್ಥೆಗಳಿಂದ ತಪ್ಪಿಸಿಕೊಳ್ಳಲು ಕ್ರಿಪ್ಟೋಕರೆನ್ಸಿಯನ್ನು ಬಳಸಿದ್ದಾರೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟಾನ್ಸಸ್ (ಎನ್‌ಡಿಪಿಎಸ್) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

TAGGED:cocaineDelhi Policedrugdubaiಕೊಕೇನ್ಡ್ರಗ್ದುಬೈದೆಹಲಿ ಪೊಲೀಸರು
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
7 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Mangaluru Student Suicide copy
Crime

ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Public TV
By Public TV
6 minutes ago
Apache helicopters 2
Latest

ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

Public TV
By Public TV
18 minutes ago
Khandre
Kalaburagi

ವಿಮಾನ ದುರಂತ: ವಿಮಾನಯಾನ ಸಚಿವರ ರಾಜೀನಾಮೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

Public TV
By Public TV
21 minutes ago
MB Patil 2
Bengaluru City

ಜಾತಿಗಣತಿಗೆ 10 ವರ್ಷ ಆಗಿದ್ದಕ್ಕೆ ಹೊಸ ಜಾತಿಗಣತಿ: ಎಂ.ಬಿ ಪಾಟೀಲ್

Public TV
By Public TV
31 minutes ago
M.B Patil Tamannaah Bhatia
Bengaluru City

ಮೈಸೂರು ಸ್ಯಾಂಡಲ್ ಸೋಪ್ ಬ್ಯುಸಿನೆಸ್ ಹೆಚ್ಚಿಸಲು ತಮನ್ನಾ ಆಯ್ಕೆ: ಎಂ.ಬಿ ಪಾಟೀಲ್

Public TV
By Public TV
35 minutes ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?