ನವದೆಹಲಿ: ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ವಿರುದ್ಧ ಮಾನಹಾನಿಕರ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಹಿನ್ನೆಲೆ ದೆಹಲಿ ಹೈಕೋರ್ಟ್ (Delhi High Court) ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಮನೀಶ್ ಸಿಸೋಡಿಯಾ (Manish Sisodia), ಸಂಜಯ್ ಸಿಂಗ್ ಮತ್ತು ಇತರ ಎಎಪಿ (AAP) ನಾಯಕರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ರವೀಂದರ್ ದುಡೇಜಾ ಅವರನ್ನೊಳಗೊಂಡ ವಿಭಾಗೀಯ ಪೀಠವು ನೋಟಿಸ್ಗೆ ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ ನೀಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 4ಕ್ಕೆ ನಿಗದಿಪಡಿಸಿತು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ – ಟ್ಯಾಕ್ಸಿ, ಆಟೋ ದರಗಳ ಹೆಚ್ಚಳಕ್ಕೆ ಆಗ್ರಹಿಸಿ 3 ದಿನ ಮುಷ್ಕರ
ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸಾರ್ವಜನಿಕ ಹೇಳಿಕೆಗಳು, ಸಂಪಾದಿತ ವೀಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ನ್ಯಾಯಾಧೀಶರು ಮತ್ತು ನ್ಯಾಯಾಂಗವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿ ನ್ಯಾಯಮೂರ್ತಿ ಶರ್ಮಾ (Justice Swarana Kanta Sharma) ಮೇ 14 ರಂದು ಕೇಜ್ರಿವಾಲ್, ಸಿಸೋಡಿಯಾ, ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್, ವಿನಯ್ ಮಿಶ್ರಾ ಮತ್ತು ಇತರರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಆರಂಭಿಸಿದ್ದರು. ಇದನ್ನೂ ಓದಿ: ಜನರ ಹಣದಲ್ಲಿ ಮೋಜು-ಮಸ್ತಿ ಮಾಡಲು ಕಾಂಗ್ರೆಸ್ನಿಂದ ಸಮಾವೇಶ: ನಿಖಿಲ್ ಕುಮಾರಸ್ವಾಮಿ
ದೆಹಲಿಯ ಮಾಜಿ ಮುಖ್ಯಮಂತ್ರಿ ತಮ್ಮ ಕಾನೂನು ಪರಿಹಾರಗಳನ್ನು ಅನುಸರಿಸುವ ಬದಲು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯೋಜಿತ ಅಪಪ್ರಚಾರ ಅಭಿಯಾನವನ್ನು ಆಯೋಜಿಸಿದ್ದಾರೆ ಎಂದು ನ್ಯಾಯಮೂರ್ತಿ ಶರ್ಮಾ ಪ್ರತಿಪಾದಿಸಿದ್ದರು. ವಾರಣಾಸಿಯ ಶಿಕ್ಷಣ ಸಂಸ್ಥೆಯಲ್ಲಿ ಅವರು ನೀಡಿದ ಭಾಷಣದ ದಾರಿತಪ್ಪಿಸುವ ‘ಸಂಪಾದಿತ’ ವೀಡಿಯೋವನ್ನು ಪೋಸ್ಟ್ ಮಾಡುವ ಮೂಲಕ ಅವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಉತ್ತರಾಖಂಡ ಮಾಜಿ ಸಿಎಂ ಭುವನ್ ಚಂದ್ರ ಖಂಡೂರಿ ನಿಧನ

