ಸೇನಾ ವಾಹನದ ಮೇಲೆ ಬಿದ್ದ ಬಂಡೆ – ಇಬ್ಬರು ಯೋಧರು ಸಾವು

Public TV
1 Min Read
Lieutenant Colonel Soldier

ಶ್ರೀನಗರ: ಪೂರ್ವ ಲಡಾಖ್‌ನಲ್ಲಿ ಸೇನಾ ವಾಹನದ ಮೇಲೆ ಬಂಡೆಯೊಂದು ಉರುಳಿ ಬಿದ್ದ ಪರಿಣಾಮ ಇಬ್ಬರ ಯೋಧರು ಸಾವಿಗೀಡಾಗಿರುವ ಘಟನೆ ನಡೆದಿದೆ.

ಮೃತ ಸೈನಿಕರಲ್ಲಿ ಒಬ್ಬರು ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿದ್ದರು. ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಡಾಖ್‌ನಲ್ಲಿ ಸೇನಾ ಬೆಂಗಾವಲು ಪಡೆಯ ವಾಹನವೊಂದರ ಮೇಲೆ ಬಂಡೆಯೊಂದು ಬಿದ್ದು, ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮತ್ತು ಲ್ಯಾನ್ಸ್-ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.

ಇಂದು ಬೆಳಗ್ಗೆ ಲಡಾಖ್‌ನ ಡರ್ಬುಕ್‌ನಿಂದ ಚೊಂಗ್ತಾಶ್‌ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿದ್ದಾಗ ವಾಹನವು ಬಂಡೆಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ಯೋಧ ಸ್ಥಳದಲ್ಲೇ ಸಾವನ್ನಪ್ಪಿದರು. ಇಬ್ಬರು ಪ್ರಮುಖ ಶ್ರೇಣಿಯ ಅಧಿಕಾರಿಗಳು ಮತ್ತು ಒಬ್ಬರು ಕ್ಯಾಪ್ಟನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Share This Article