Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ: ಆರ್. ಲತಾ

Public TV
Last updated: March 3, 2022 5:37 pm
Public TV
Share
3 Min Read
chikkaballapur dc 1
SHARE

ಚಿಕ್ಕಬಳ್ಳಾಪುರ: ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆ 2022ರ ಫೆಬ್ರವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ 2022ರ ಫೆಬ್ರವರಿ ತಿಂಗಳಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಕಳೆದ ಜನವರಿ ಮಾಹೆಯಲ್ಲಿಯೂ ಸಹ ಪ್ರಥಮ ಸ್ಥಾನಗಳಿಸಿ ಉತ್ತಮ ಸಾಧನೆ ಮಾಡಿತ್ತು ಎಂದು ತಿಳಿಸಿದ್ದಾರೆ.

sakala

ಈ ಕುರಿತು ಅವರು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಫೆಬ್ರವರಿ ಮಾಹೆಯಲ್ಲಿ ಒಟ್ಟು 83,034 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಈ ಪೈಕಿ 74,968 ಅರ್ಜಿಗಳನ್ನು ಸಕಾಲ ನಿಯಮಗಳನ್ವಯ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ. 4,347 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕøತಗೊಂಡಿವೆ. ಇನ್ನೂ 6,522 ಅರ್ಜಿಗಳು ವಿಲೇವಾರಿಯಾಗುವುದು ಬಾಕಿಯಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ ಫೆಬ್ರವರಿ ಮಾಹೆಯಲ್ಲೂ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿದ್ದು, ಸದರಿ ಯೋಜನೆ ಆರಂಭವಾದಾಗಿನಿಂದ (2012 ರಿಂದ) ಈ ವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಜಿಲ್ಲೆಯು ರಾಜ್ಯದಲ್ಲಿಯೇ 48 ಬಾರಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲಾಡಳಿತದ ಪಾರದರ್ಶಕ, ಯುಕ್ತ, ತ್ವರಿತ ಆಡಳಿತಕ್ಕೆ ಹಾಗೂ ಸರ್ಕಾರದ ಎಲ್ಲಾ ಯೋಜನೆಗಳ ದಕ್ಷ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಂಕಿಂಗ್ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರೀಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ ಎಂದರು.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈ ವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಒಟ್ಟು 21,81,415 ಅರ್ಜಿಗಳನ್ನು ಸ್ವೀಕರಿಸಿ 21,51,254 ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಈ ಪೈಕಿ 48 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನ ಗಳಿಸಿದೆ. ಒಟ್ಟಾರೆ 48 ಬಾರಿ (ಮಾಹೆ) ರಾಜ್ಯ ದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಡಳಿತ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಮಾನ್ಯ ಸಕಾಲ ಸಚಿವರಿಂದ ಪ್ರಶಂಸೆ ಪಡೆದಿರುವ ಕೀರ್ತಿಯು ಜಿಲ್ಲೆಗೆ ಸಲ್ಲುತ್ತದೆ. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಯೋಜನೆಗಳ ಅನುಷ್ಟಾನ ಹಾಗೂ ಸೇವೆ ನೀಡುವಲ್ಲಿ ಸಹಕಾರಿಯಾಗಿ ನಿಂತಿದೆ. ಈ ಅಭೂತಪೂರ್ವ ಸಾಧನೆಗೆ ಸಹಕಾರ ನೀಡಿದ ಹಾಗೂ ಅಹರ್ನಿಶಿ ಶ್ರಮಿಸಿದ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು.

ಮುಂದಿನ ದಿನಗಳಲ್ಲಿಯೂ ತಾವೆಲ್ಲರೂ ತಮ್ಮ ಕಾರ್ಯ ವೈಖರಿಯನ್ನು ಹೀಗೆಯೇ ಯಶಸ್ವಿಯಾಗಿ ನಿರ್ವಹಿಸಿ ಪ್ರಥಮ ಸ್ಥಾನವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಈ ಸಾಧನೆಗೆ ಕೈಜೋಡಿಸಿದ ಜಿಲ್ಲೆಯ ಸಮಸ್ತ ಜನತೆಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆಯನ್ನು ತಿಳಿಸಿದರು.

TAGGED:chikkaballapurDCR.Lathasakala yojanaಆರ್.ಲತಾಚಿಕ್ಕಬಳ್ಳಾಪುರಜಿಲ್ಲಾಧಿಕಾರಿಪ್ರಥಮ ಸ್ಥಾನಸಕಾಲ ಯೋಜನೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood

You Might Also Like

Marco Rubio
Latest

ಭಾರತ-ಪಾಕ್‌ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ

Public TV
By Public TV
12 seconds ago
G Parameshwar
Bengaluru City

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಪರಂ ಉತ್ತರ ಭಾರೀ ಕುತೂಹಲ

Public TV
By Public TV
16 minutes ago
KRS Dam
Districts

ಭಾರೀ ಮಳೆ; ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಳ – 31,550 ಕ್ಯೂಸೆಕ್‌ ನೀರು ನದಿಗೆ

Public TV
By Public TV
30 minutes ago
Bomb Threat
Crime

ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

Public TV
By Public TV
1 hour ago
Five electrocuted
Latest

ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಅವಘಡ – ಐವರು ಸಾವು

Public TV
By Public TV
2 hours ago
AI ಚಿತ್ರ
Davanagere

ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?