Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ: ಆರ್. ಲತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ: ಆರ್. ಲತಾ

Chikkaballapur

ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ: ಆರ್. ಲತಾ

Public TV
Last updated: March 3, 2022 5:37 pm
Public TV
Share
3 Min Read
chikkaballapur dc 1
SHARE

ಚಿಕ್ಕಬಳ್ಳಾಪುರ: ಸಕಾಲ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತೊಮ್ಮೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಹೇಳಿದರು.

ನಿಗದಿತ ಕಾಲಮಿತಿಯೊಳಗೆ ಸಾರ್ವಜನಿಕ ಅರ್ಜಿಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಕಾಲ ಯೋಜನೆ 2022ರ ಫೆಬ್ರವರಿ ತಿಂಗಳ ಪ್ರಗತಿಯ ಅಂಕಿ ಅಂಶಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ 2022ರ ಫೆಬ್ರವರಿ ತಿಂಗಳಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಕಳೆದ ಜನವರಿ ಮಾಹೆಯಲ್ಲಿಯೂ ಸಹ ಪ್ರಥಮ ಸ್ಥಾನಗಳಿಸಿ ಉತ್ತಮ ಸಾಧನೆ ಮಾಡಿತ್ತು ಎಂದು ತಿಳಿಸಿದ್ದಾರೆ.

sakala

ಈ ಕುರಿತು ಅವರು ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಫೆಬ್ರವರಿ ಮಾಹೆಯಲ್ಲಿ ಒಟ್ಟು 83,034 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಈ ಪೈಕಿ 74,968 ಅರ್ಜಿಗಳನ್ನು ಸಕಾಲ ನಿಯಮಗಳನ್ವಯ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ. 4,347 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕøತಗೊಂಡಿವೆ. ಇನ್ನೂ 6,522 ಅರ್ಜಿಗಳು ವಿಲೇವಾರಿಯಾಗುವುದು ಬಾಕಿಯಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದು ತಪ್ಪುತ್ತದೆ. ಜೊತೆಗೆ ಆಡಳಿತವೂ ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ. ಸಕಾಲ ಯೋಜನೆ ಅನುಷ್ಠಾನದಲ್ಲಿ ಫೆಬ್ರವರಿ ಮಾಹೆಯಲ್ಲೂ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದುಕೊಂಡಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

ಸಕಾಲ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಯಾವಾಗಲೂ ಮುಂಚೂಣಿಯಲ್ಲಿದ್ದು, ಸದರಿ ಯೋಜನೆ ಆರಂಭವಾದಾಗಿನಿಂದ (2012 ರಿಂದ) ಈ ವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಜಿಲ್ಲೆಯು ರಾಜ್ಯದಲ್ಲಿಯೇ 48 ಬಾರಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲಾಡಳಿತದ ಪಾರದರ್ಶಕ, ಯುಕ್ತ, ತ್ವರಿತ ಆಡಳಿತಕ್ಕೆ ಹಾಗೂ ಸರ್ಕಾರದ ಎಲ್ಲಾ ಯೋಜನೆಗಳ ದಕ್ಷ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಕಾಲ ಯೋಜನೆಯಡಿ ಅರ್ಜಿಗಳ ವಿಲೇವಾರಿ ಕುರಿತಂತೆ ರಾಜ್ಯ ಸರ್ಕಾರ ಪ್ರತಿ ತಿಂಗಳು ರ್ಯಾಂಕಿಂಗ್ ಪಟ್ಟಿ ಪ್ರಕಟಿಸುತ್ತದೆ. ಜಿಲ್ಲೆಗಳ ಸಾಧನೆಗೆ ಅನುಗುಣವಾಗಿ ಸ್ಥಾನ ನೀಡಲಾಗುತ್ತದೆ. ಕಾಲ ಮಿತಿಯಲ್ಲಿ ಕಡತ ವಿಲೇವಾರಿಯಾಗಬೇಕು ಹಾಗೂ ನಾಗರೀಕರು ಸರ್ಕಾರಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಕಾಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರದ ಸೇವೆಗಳು ಲಭ್ಯವಾಗಲಿವೆ ಎಂದರು.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈ ವರೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಒಟ್ಟು 21,81,415 ಅರ್ಜಿಗಳನ್ನು ಸ್ವೀಕರಿಸಿ 21,51,254 ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಈ ಪೈಕಿ 48 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನ ಗಳಿಸಿದೆ. ಒಟ್ಟಾರೆ 48 ಬಾರಿ (ಮಾಹೆ) ರಾಜ್ಯ ದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಡಳಿತ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಮಾನ್ಯ ಸಕಾಲ ಸಚಿವರಿಂದ ಪ್ರಶಂಸೆ ಪಡೆದಿರುವ ಕೀರ್ತಿಯು ಜಿಲ್ಲೆಗೆ ಸಲ್ಲುತ್ತದೆ. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಯೋಜನೆಗಳ ಅನುಷ್ಟಾನ ಹಾಗೂ ಸೇವೆ ನೀಡುವಲ್ಲಿ ಸಹಕಾರಿಯಾಗಿ ನಿಂತಿದೆ. ಈ ಅಭೂತಪೂರ್ವ ಸಾಧನೆಗೆ ಸಹಕಾರ ನೀಡಿದ ಹಾಗೂ ಅಹರ್ನಿಶಿ ಶ್ರಮಿಸಿದ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆಗಳು.

ಮುಂದಿನ ದಿನಗಳಲ್ಲಿಯೂ ತಾವೆಲ್ಲರೂ ತಮ್ಮ ಕಾರ್ಯ ವೈಖರಿಯನ್ನು ಹೀಗೆಯೇ ಯಶಸ್ವಿಯಾಗಿ ನಿರ್ವಹಿಸಿ ಪ್ರಥಮ ಸ್ಥಾನವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಈ ಸಾಧನೆಗೆ ಕೈಜೋಡಿಸಿದ ಜಿಲ್ಲೆಯ ಸಮಸ್ತ ಜನತೆಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಕೃತಜ್ಞತೆಯನ್ನು ತಿಳಿಸಿದರು.

TAGGED:chikkaballapurDCR.Lathasakala yojanaಆರ್.ಲತಾಚಿಕ್ಕಬಳ್ಳಾಪುರಜಿಲ್ಲಾಧಿಕಾರಿಪ್ರಥಮ ಸ್ಥಾನಸಕಾಲ ಯೋಜನೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
5 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?