Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ

Bengaluru City

ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ

Public TV
Last updated: December 30, 2023 9:35 pm
Public TV
Share
3 Min Read
DK Shivakumar 6
SHARE

ಬೆಂಗಳೂರು: ನಿಗಮ ಮಂಡಳಿಗಳಲ್ಲಿ (Corporation Board) ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಂಗಳೂರಿನ (Bengaluru) ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡಾ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿರುತ್ತಾರೆ. ಅದಕ್ಕಾಗಿ ಎಲ್ಲರ ಜೊತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನಿಗಮ ಮಂಡಳಿ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು. ಇದನ್ನೂ ಓದಿ: ನೆಲದ ಕಾನೂನು ಎಲ್ಲರಿಗೂ ಒಂದೆ: ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಈಶ್ವರ್ ಖಂಡ್ರೆ ಪ್ರತಿಕ್ರಿಯೆ

ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು. ಅವರ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ. ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಸಂಸದರು ಭಾಗವಹಿಸಲು ಆಹ್ವಾನ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌: ಹೆಚ್‌ಡಿಕೆ ವ್ಯಂಗ್ಯ

ಜನವರಿ 10ರ ಪಕ್ಷದ ಸಭೆ ಬಗ್ಗೆ ಕೇಳಿದಾಗ, ಲೋಕಸಭೆ ಚುನಾವಣೆ (Lok Sabha Election) ಸಿದ್ಧತೆ ವಿಚಾರವಾಗಿ ಜನವರಿ 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜೊತೆ ಸಭೆ ಮಾಡುತ್ತೇವೆ. ಜ.4ರಂದು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಭೆ ಇದೆ. ಚುನಾವಣೆ ಅಭ್ಯರ್ಥಿ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚೆ ಮಾಡಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆಗೆ ಬಿಜೆಪಿಯವರು (BJP) ಆಗ್ರಹಿಸಿರಬಹುದು. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚುಕಮ್ಮಿ ಆಗಿರುತ್ತದೆ. ಅದೇನು ವಿಚಾರ ಎಂದು ನೋಡುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

ಇನ್ನೂ ಅಲ್ಪಸಂಖ್ಯಾತ ಸಮುದಾಯಕ್ಕೆ 1,000 ಕೋಟಿ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಮ್ಮನ್ನು ರಾಮನಗರಕ್ಕೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿ ಪ್ರವಾಹ ಪರಿಸ್ಥಿತಿ ಬಂದ ಪ್ರದೇಶದ ಸ್ಥಿತಿಗತಿ ಹೇಗಿದೆ ಎಂದು ಬಂದು ನೋಡಿ. ಅವರು ಹೇಗೆ ಬದುಕುತ್ತಿದ್ದಾರೆ ಎಂಬುದೇ ಆಶ್ಚರ್ಯ. ಜನರ ಬದುಕು ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ. 224 ಕ್ಷೇತ್ರಗಳಿಗೆ ಈ ಅನುದಾನ ಹಂಚಿದರೆ ಎಷ್ಟು ಸಿಗುತ್ತದೆ. ಹಳ್ಳಿಗಳಲ್ಲಿ ನರೇಗಾ ಯೋಜನೆ ಅವಕಾಶವಿದೆ. ಆದರೆ ಈ ಸಮುದಾಯ ಹೆಚ್ಚಾಗಿ ನಗರ ಪ್ರದೇಶದಲ್ಲಿ ವಾಸವಿದ್ದಾರೆ. ಹೀಗಾಗಿ ಅವರಿಗೆ ಹೆಚ್ಚು ಅವಕಾಶ ಇಲ್ಲ. ಅವರ ಪ್ರದೇಶ ಸ್ವಚ್ಛ ಮಾಡಿ, ಬದುಕು ಬದಲಿಸಬೇಕು ಎಂದು ಸಿಎಂ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರ ಓಲೈಕೆ ರಾಜಕಾರಣ ಎಂಬ ಟೀಕೆ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಟೀಕೆ ಮಾಡುತ್ತಿರಲಿ. ನಾವು ಬಡವರ ಪರ ಕೆಲಸ ಮಾಡುತ್ತಿರುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

TAGGED:bengalurucongressCorporation BoardDK ShivakumarLok Sabha electionಕಾಂಗ್ರೆಸ್ಡಿಕೆ ಶಿವಕುಮಾರ್ನಿಗಮ ಮಂಡಳಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
5 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
7 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
14 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
17 minutes ago
Mallikarjun kharge
Bengaluru City

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Public TV
By Public TV
1 hour ago
suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?