Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಡ್ಡೂರು ಆಂಗ್ಲ ಸರ್ಕಾರಿ ತರಗತಿ ಉದ್ಘಾಟನೆ – ಶಾಲೆಯ ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಝಕಾರಿಯಾ ಜೋಕಟ್ಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಅಡ್ಡೂರು ಆಂಗ್ಲ ಸರ್ಕಾರಿ ತರಗತಿ ಉದ್ಘಾಟನೆ – ಶಾಲೆಯ ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಝಕಾರಿಯಾ ಜೋಕಟ್ಟೆ

Dakshina Kannada

ಅಡ್ಡೂರು ಆಂಗ್ಲ ಸರ್ಕಾರಿ ತರಗತಿ ಉದ್ಘಾಟನೆ – ಶಾಲೆಯ ನೆಲಮಹಡಿ ನಿರ್ಮಾಣದ ಕೊಡುಗೆ ನೀಡಿದ ಝಕಾರಿಯಾ ಜೋಕಟ್ಟೆ

Public TV
Last updated: June 24, 2025 4:33 pm
Public TV
Share
3 Min Read
Addur School
SHARE

– ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಇಲ್ಲ, ಅಡ್ಡೂರು ಶಾಲೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಭರತ್ ಶೆಟ್ಟಿ

ಅಡ್ಡೂರು: ಅಡ್ಡೂರಿನ (Addur) ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಯನ್ನು ಸೇರ್ಪಡೆಗೊಳಿಸುವ ಉದ್ಘಾಟನಾ ಸಮಾರಂಭ ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ (Bharath Shetty) ಉಪಸ್ಥಿತಿಯಲ್ಲಿ ನೆರವೇರಿತು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿಯವರು, ಊರಿನ ಅಭಿವೃದ್ಧಿ ವಿದ್ಯೆಗೆ ನೀಡುವ ಮಹತ್ವದ ಮೇಲೆ ನಿರ್ಧಾರವಾಗುತ್ತದೆ. ಅಭಿವೃದ್ಧಿಯ ಕೆಲಸದಲ್ಲಿ ರಾಜಕೀಯ ನಾವು ಮಾಡಲ್ಲ. ಸರ್ಕಾರಿ ಶಾಲೆಯ ಉದ್ಧಾರಕ್ಕೆ ನನ್ನ ಕೈಲಾದ ಸಹಾಯ ಸಹಕಾರ ಖಂಡಿತವಾಗಿಯೂ ಮಾಡುವೆ. ರಾಜಕೀಯವನ್ನು ಶಾಲೆಯ ವಠಾರದಿಂದ ಹೊರಗಿಟ್ಟು ಬಂದರೆ ಖಂಡಿತ ಶಾಲೆ ಅಭಿವೃದ್ಧಿಯಾಗುತ್ತದೆ. ಅಡ್ಡೂರು ಶಾಲೆಯ ಹಳೆವಿದ್ಯಾರ್ಥಿಗಳು, ಕೊಡುಗೈ ದಾನಿಗಳ ಕಾಳಜಿ, ಮುತುವರ್ಜಿ ಶ್ಲಾಘನೀಯ ಎಂದರು. ಇದನ್ನೂ ಓದಿ: ಚಾ.ನಗರ ಜಿಲ್ಲೆಯಲ್ಲಿ ಇದೆಂಥಾ ಘಟನೆ?- ಮುಖ್ಯ ಅಡುಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕಕ್ಕೆ ಅಸಮಾಧಾನ

Addur School 2

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಉದ್ಯಮಿ, ಶಿಕ್ಷಣ ಪೋಷಕ ಝಕಾರಿಯಾ ಜೋಕಟ್ಟೆ ಮಾತನಾಡಿ, ನಾನು ಅಡ್ಡೂರಿನ ಅಳಿಯ. ನನ್ನ ಪತ್ನಿ, ಮಾವ, ಅತ್ತೆ ಎಲ್ಲರೂ ಅಡ್ಡೂರಿನವರು. ನನ್ನ ಪತ್ನಿಯ ಆಶಯದಂತೆ ನನ್ನ ಮಾವ ಮತ್ತು ಅತ್ತೆಯ ನೆನಪಿಗಾಗಿ ಸುಸಜ್ಜಿತವಾದ ಐದು ತರಗತಿಗಳ ನೆಲಮಹಡಿ ಕಟ್ಟಡದ ಸಂಪೂರ್ಣ ವೆಚ್ಚವನ್ನು ಭರಿಸಲು ನಿರ್ಧರಿಸಿದ್ದೇನೆ ಎಂದು ಘೋಷಿಸಿದರು. ವಿದ್ಯೆಗೆ ಪೋಷಣೆ ನೀಡುವ ಹಲವು ಕಾರ್ಯಕ್ರಮಗಳನ್ನು ನಾವು ಅತ್ಯಂತ ಸಂತೋಷದಿಂದ ಮಾಡುತ್ತಾ ಬಂದಿದ್ದೇವೆ, ಇನ್ನೂ ಮುಂದುವರೆಸುತ್ತೇವೆ. ಅಡ್ಡೂರಿನ ಈ ಶಾಲೆಯಲ್ಲಿ ಉತ್ತಮ ಶಿಕ್ಷಕರ ನೇಮಕವಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ ಓಪನ್ – ವಿಜಯೇಂದ್ರ

Addur School 1

ಅಡ್ಡೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಅನಿವಾಸಿ ಉದ್ಯಮಿ ಹಿದಾಯತ್ ಅಡ್ಡೂರು ಮಾತನಾಡಿ, 1967ರಲ್ಲಿ ಕಡಂಬಾರು ಕುಟುಂಬದವರು ದಾನವಾಗಿ ನೀಡಿದ ಜಾಗದಲ್ಲಿ ಪ್ರಾರಂಭವಾದ ಅಡ್ಡೂರು ಸರ್ಕಾರಿ ಶಾಲೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಪಾಯ ನೀಡಿದೆ. ನಾನೂ ಈ ಶಾಲೆಯ ಹೆಮ್ಮೆಯ ವಿದ್ಯಾರ್ಥಿ. ನಮ್ಮ ನೆಚ್ಚಿನ ಸರ್ಕಾರಿ ಶಾಲೆ ಮುಚ್ಚಿ ಹೋಗದಂತೆ ನೋಡಿಕೊಂಡು, ಆಂಗ್ಲ ಮಾಧ್ಯಮ ಅನುಮತಿಗಾಗಿ ಜಾತಿ ಧರ್ಮ ಭೇದಭಾವವಿಲ್ಲದೆ ಶ್ರಮವಹಿಸಿದ ಅಡ್ಡೂರಿನ ಎಲ್ಲಾ ನಾಗರಿಕರು, ಸ್ಥಳೀಯ ಸಂಘ ಸಂಸ್ಥೆಗಳು, ಅಡ್ಡೂರು ಸೆಂಟ್ರಲ್ ಕಮಿಟಿ, ನಮ್ಮ ಶಾಸಕರಾದ ಭರತ್ ಶೆಟ್ಟಿ, ಶಿಕ್ಷಣ ಸಚಿವ ಮಧುಬಂಗಾರಪ್ಪ ಎಲ್ಲರನ್ನೂ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ ಎಂದರು. ಅಲ್ಲದೇ ಆಂಗ್ಲ ಮಾಧ್ಯಮದ ಕಟ್ಟಡದ ನೆಲ ಮಹಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಹೊತ್ತ ಕೊಡುಗೈ ದಾನಿ ಝಕಾರಿಯ ಜೋಕಟ್ಟೆಯವರಿಗೆ ವಿಶೇಷವಾಗಿ ಧನ್ಯವಾದ ಹೇಳುತ್ತೇನೆ, ನಿಮ್ಮ ಈ ಕೊಡುಗೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿ ಆಗಲಿದೆ ಎಂದರು. ಇದನ್ನೂ ಓದಿ: ಡಿಕೆ ಶಿವಕುಮಾರ್, ಡಿಕೆ ಸುರೇಶ್ ಆಶೀರ್ವಾದ ಇರೋದಕ್ಕೆ ನನಗೆ ಅನುದಾನ ಸಿಗ್ತಿದೆ: ಹೆಚ್‌ಸಿ ಬಾಲಕೃಷ್ಣ

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಎಚ್ ಆರ್, ಬಡವರ ಮನೆಗೆ ಭಗವಂತ ಬಂದAತೆ ಝಕಾರಿಯಾ ಜೋಕಟ್ಟೆಯವರು ಆಂಗ್ಲ ಮಾಧ್ಯಮ ಶಾಲೆಯ ನೆಲಮಹಡಿ ನಿರ್ಮಾಣದ ಜವಾಬ್ದಾರಿ ಹೊತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು. ಅಲ್ಲದೇ ಹಿದಾಯತ್ ಅಡ್ಡೂರು ಮತ್ತು ತಂಡದವರು ನಿರಂತರ, ನಿಸ್ವಾರ್ಥ ಪ್ರಯತ್ನದಿಂದ ಮಾತ್ರವೇ ಇಂದು ಈ ತರಗತಿ ಉದ್ಘಾಟನೆ ಸಾಧ್ಯವಾಗಿದೆ. ವಿದೇಶದಲ್ಲಿದ್ದುಕೊಂಡೇ ಶಿಕ್ಷಣ ಸಚಿವರಿಗೆ, ಸ್ಪೀಕರ್ ಅವರಿಗೆ, ಶಾಸಕರಿಗೆ ಕರೆ ಮಾಡಿ ಅನುಮತಿ ಪತ್ರ ಸಿಗುವವರೆಗೂ ಅಹರ್ನಿಶಿ ಪ್ರಯತ್ನ ಮಾಡಿದ್ದಾರೆ. ಹಾಗೂ ಸ್ಥಳೀಯ ಯುವಕರ ಸಂಸ್ಥೆಗಳಂತೂ ಒಗ್ಗಟ್ಟಾಗಿ ಕೆಲಸ ಮಾಡಿದೆ, ದುಡಿದಿದ್ದಾರೆ. ಇಂತಹ ಉತ್ತಮ ಪೋಷಕರಿರುವ ಈ ಶಿಕ್ಷಣ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: PublicTV Explainer: ಫಾಸ್ಟ್ಯಾಗ್ 3,000 ರೂ. ವಾರ್ಷಿಕ ಪಾಸ್‌ – ನಿಮಗೆ ಲಾಭನಾ, ನಷ್ಟನಾ?

ಅಡ್ಡೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ ಎಂ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ ಇಬ್ರಾಹಿಂ, ಉದ್ಯಮಿ ಶೌಕತ್ ಅಲಿ, ಮಹಮ್ಮದ್ ಅಶ್ರಫ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲೀಲಾವತಿ, ಅಡ್ಡೂರು ಸೆಂಟ್ರಲ್ ಕಮಿಟಿಯ ಅಬ್ದುಲ್ ರಝಾಕ್, ಬಾಲಕೃಷ್ಣ ರಾವ್ ನೂಯಿ, ಶಿಕ್ಷಕಿ ಅಸುರ ಸ್ವಾಗತಿಸಿದರು, ಮುಖ್ಯೋಪಾಧ್ಯಾಯಿ ದೇವಕಿ ಧನ್ಯವಾದ ಸಲ್ಲಿಸಿದರು, ಶಿಕ್ಷಕಿ ನಮೃತಾ ಕಾರ್ಯಕ್ರಮ ನಿರೂಪಿಸಿದರು. ಇದನ್ನೂ ಓದಿ: `ಕೈ’ ಕಂಪನ ಸಂಕಟ: 2 ವರ್ಷ ಗ್ಯಾರಂಟಿ ಪಿರಿಯೆಡ್, ವೇಯ್ಟಿಂಗ್ ಪಿರಿಯೆಡ್ ಮುಗಿತು, ಇನ್ನೇನಿದ್ರೂ ಫೈಟಿಂಗ್ ಪಿರಿಯೆಡ್!

TAGGED:AddurAddur SchoolBharath ShettyMangaluruZakaria Jokatteಅಡ್ಡೂರುಅಡ್ಡೂರು ಆಂಗ್ಲ ಸರ್ಕಾರಿ ಶಾಲೆಝಕಾರಿಯಾ ಜೋಕಟ್ಟೆಭರತ್ ಶೆಟ್ಟಿಮಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
8 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
47 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
57 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
59 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?