Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿ ದಸರಾಕ್ಕೆ ವೈಭವೋಪೇತ ಚಾಲನೆ – ಕಣ್ಮನ ಸೆಳೆದ ಕರಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಡಿಕೇರಿ ದಸರಾಕ್ಕೆ ವೈಭವೋಪೇತ ಚಾಲನೆ – ಕಣ್ಮನ ಸೆಳೆದ ಕರಗ

Districts

ಮಡಿಕೇರಿ ದಸರಾಕ್ಕೆ ವೈಭವೋಪೇತ ಚಾಲನೆ – ಕಣ್ಮನ ಸೆಳೆದ ಕರಗ

Public TV
Last updated: October 3, 2024 9:28 pm
Public TV
Share
2 Min Read
madikeri dasara
SHARE

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ (Madikeri Dasara) ಇಂದಿನಿಂದ ಚಾಲನೆ ಸಿಕ್ಕಿದೆ. ಒಂಬತ್ತು ದಿನಗಳ ದಸರಾ ಉತ್ಸವ ಇಂದು ಕರಗ ಹೊರುವ ಮೂಲಕ ಪ್ರಾರಂಭಗೊಂಡಿದ್ದು, ಮುಂದಿನ ಒಂದು ವಾರಗಳ ಕಾಲ ನಗರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಜನರನ್ನು ರಂಜಿಸಲಿವೆ. ದಸರಾ ಪ್ರಯುಕ್ತ ಮಂಜಿನ ನಗರಿ ನವವಧುವಿನಂತೆ ಸಿಂಗಾರಗೊಂಡಿದ್ದು ಇಡೀ ನಗರವೇ ಹೊಸ ಕಳೆಯೊಂದಿಗೆ ಕಂಗೊಳಿಸುತ್ತಿದೆ.

ಎಲ್ಲೆಡೆ ಈಗ ನಾಡ ಹಬ್ಬ ದಸರಾ ಸಂಭ್ರಮ ಶುರುವಾಗಿದೆ. ಜಗತ್ ಪ್ರಸಿದ್ಧ ಮೈಸೂರು ದಸರಾಕ್ಕೆ (Mysuru Dasara) ಇಂದು ವಿದ್ಯುಕ್ತ ಚಾಲನೆ ಸಿಕ್ಕಿದ್ದು, ಇತ್ತ ಐತಿಹಾಸಿಕ ಮಡಿಕೇರಿ ದಸರಾಕ್ಕೂ ಚಾಲನೆ ನೀಡಲಾಗಿದೆ. ನೂರಾರು ವರ್ಷಗಳ ಇತಿಹಾಸವುಳ್ಳ ಮಂಜಿನ ನಗರಿ ಮಡಿಕೇರಿ ದಸರಾ ಇಂದು ನಗರದ ನಾಲ್ಕು ಶಕ್ತಿದೇವತೆಗಳ ಕರಗಾಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಲಭಿಸಿದೆ. ನಗರದ ಪಂಪಿನ ಕೆರೆಬಳಿಯಲ್ಲಿ ನಾಲ್ಕೂ ಕರಗಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಮಡಿಕೇರಿ ಶಾಸಕ ಮಂಥರ್ ಗೌಡ (Manthar Gowda) ಜಿಲ್ಲಾಧಿಕಾರಿ ವೆಂಕಟರಾಜು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಕರಗ ಹೊರುವ ಮೂಲಕ ದಸರಾ ಪ್ರಾರಂಭಗೊಂಡಿದ್ದು ನಾಳೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳು ಕಲಾಸಕ್ತರ ಮನತಣಿಸಲು ಸಿದ್ಧವಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಶರನ್ನವರಾತ್ರಿ ಅದ್ಧೂರಿ ಆಚರಣೆ; ಗೌಳಿ ಸಮಾಜದಿಂದ ಅಂಬಾಭವಾನಿ ಮೆರವಣಿಗೆ

madikeri dasara

ಇಂದು ಸಂಜೆ ಕರಗಗಳಿಗೆ (Karaga) ಪೂಜೆಸಲ್ಲಿಸಿದ ದಸರಾ ಸಮಿತಿ ಸದಸ್ಯರು ದಸರಾ ಯಶಸ್ಸಿಗೆ ದೇವರಿಗೆ ಮೊರೆಯಿಟ್ಟಿದ್ದಾರೆ. ನಗರದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿಮ್ಮ ದೇವಾಲಯಗಳ ಕರಗಗಳನ್ನು ಹೊತ್ತ ವ್ರತದಾರಿಗಳು ನವರಾತ್ರಿಯ ಒಂಬತ್ತು ದಿನಗಳು ನಗರದ ಬೀದಿ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಇದನ್ನೂ ಓದಿ: ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ – ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ಪ್ರತಿಷ್ಠಾಪನೆ

web.whatsapp 23

ಶತಮಾನಗಳ ಹಿಂದೆ ಬರಗಾಲದಿಂದ ಮಡಿಕೇರಿಯಲ್ಲಿ ಭೀಕರ ಕಾಲರಾ ಆವರಿಸಿದ್ದ ಸಂದರ್ಭ ನಗರದ ದೇವತೆಗಳನ್ನು ಕರಗದ ಮೂಲಕ ನಗರದಲ್ಲಿ ಪ್ರದಕ್ಷಿಣೆ ಮಾಡಿ ಪೂಜೆಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ವರ್ಷಕ್ಕೆ ಒಂದು ಬಾರಿ ದಸರಾ ಸಂದರ್ಭದಲ್ಲಿ ಕರಗ ಉತ್ಸವ (Karaga Utsav) ನಡೆಸಲಾಗುತ್ತದೆ. ಮಡಿಕೇರಿಯ ಶಕ್ತಿದೇವತೆಗಳೆಂದು ಕರೆಸಿಕೊಳ್ಳುವ ನಾಲ್ಕೂ ದೇವಿಯರನ್ನು ಆರಾಧಿಸಿ ಜನರು ಪೂಜಿಸುತ್ತಾರೆ. ನಗರದಲ್ಲಿ ಕರಗ ಸಂಚರಿಸುವ ವೇಳೆ ಪ್ರತಿ ಮನೆ ಮುಂದೆಯೂ ಬಣ್ಣ ಬಣ್ಣದ ಚಿತ್ತಾರದ ರಂಗೋಲಿ ಬಿಡಿಸಿ ದೇವರನ್ನು ಸ್ವಾಗತಿಸಲಾಗುತ್ತದೆ. ನಾಡಿಗೆ ಶುಭವಾಗಲಿ ಎಂದು ಹಾರೈಸಿ ಪೂಜೆ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಶಿವಮೊಗ್ಗ ದಸರಾಗೆ ವೈಭವದ ಚಾಲನೆ

ಒಟ್ಟಿನಲ್ಲಿ ನಾಡ ಹಬ್ಬ ಎಂದೇ ಖ್ಯಾತವಾದ ದಸರಾ ಉತ್ಸವಕ್ಕೆ ಇಂದಿನಿಂದ ಚಾಲನೆ ಸಿಕ್ಕಿದೆ. ಶಕ್ತಿದೇವತೆಗಳ ಆರಾಧನೆಗೆ ಹೆಸರಾದ ಈ ನವರಾತ್ರಿ ಉತ್ಸವದ ವೇಳೆ ನಾನಾ ವೈವಿಧ್ಯಮಯ ಕಾರ್ಯಕ್ರಮಗಳು ಜನರನ್ನು ರಂಜಿಸಲಿದ್ದು, ಕೊನೆಯ ದಿನ ಮಡಿಕೇರಿ ದಸರಾದ ವಿಷೇಶ ದಶಮಂಟಪಗಳ ಉತ್ಸವ ಎಲ್ಲರನ್ನು ಬೆರಗುಗೊಳಿಸಲು ಸಜ್ಜಾಗುತ್ತಿದೆ. ಇದನ್ನೂ ಓದಿ: 1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?

TAGGED:Dasarakaraga utsavmadikeriManthar Gowdaಕರಗಮಡಿಕೇರಿಮಡಿಕೇರಿ ದಸರಾಮಂಥರ್ ಗೌಡವೆಂಕಟರಾಜು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
5 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
6 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
6 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
7 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
7 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?