-ಈಗಿನ RSS ದೇಶವನ್ನು ಹಾಳು ಮಾಡುವ ಸಂಘಟನೆ
ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಐಟಿ ರೇಡ್ ಬಿಜೆಪಿಯ ಆಂತರಿಕ ಕಿತ್ತಾಟದಿಂದ ಬೆಳಕಿಗೆ ಬಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಾಜಿ ಸಿಎಂ ಬಿಎಸ್ವೈ ಹಾಗೂ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ ಸಂಬಂಧಿಸಿದಂತೆ ಕಲಬುರಗಿ ಏರ್ಪೋರ್ಟ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಟಿ ದಾಳಿ ಬಗ್ಗೆ ನನಗೆ ಯಾವುದೇ ರೀತಿಯ ಪ್ರತಿಕ್ರಿಯೆ ಇಲ್ಲ. ಆದರೆ ಉಪಚುನಾಣೆ ಸಂದರ್ಭದಲ್ಲಿ ಐಟಿ ದಾಳಿ ಸರ್ವೇ ಸಾಮಾನ್ಯ. ಆದರೆ ಬಿಎಸ್ವೈ ಆಪ್ತರ ಮೇಲೆ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ. ಇದರಿಂದ ಅವರ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು. ಇದನ್ನೂ ಓದಿ: ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ರೇಡ್
ಉಪಚುನಾಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರು ಇವರು ನನಗೆ ಹೇಳೋಕೆ? ಅವರ ಯಾವ ಡೊಣ್ಣೆ ನಾಯಕ? ಅವರ ಪರ್ಮಿಷನ್ ತಗೋಂಡು ಅಭ್ಯರ್ಥಿ ಹಾಕಬೇಕಾ? ಎಲ್ಲಿ ಯಾವ ಅಭ್ಯರ್ಥಿ ನಿಲ್ಲಿಸಬೇಕೋ ಅಲ್ಲಿ ನಿಲ್ಲಿಸುತ್ತೇವೆ. ಅವರಿಗೆ ಪರಿಜ್ಞಾನ ಇದ್ದರೆ ನನ್ನ ಪಕ್ಷದ ಅಭ್ಯರ್ಥಿ ಬಗ್ಗೆ ಮಾತನಾಡಬಾರದು ಎಂದು ಕಿಡಿಕಾರಿದರು.
ಆರ್ಎಸ್ಎಸ್ ಕುರಿತು ಎಚ್ಡಿ ದೇವೆಗೌಡರ ಹೇಳಿಕೆ ವಿಚಾರವಾಗಿ, ಸ್ವಾತಂತ್ರ ಪೂರ್ವದ ಆರ್ಎಸ್ಎಸ್ ಬೇರೆ, ಈಗಿನ ಆರ್ಎಸ್ಎಸ್ ಬೇರೆ. ಈಗಿನ ಆರ್ಎಸ್ಎಸ್ ದೇಶವನ್ನು ಹಾಳು ಮಾಡುವ ಸಂಘಟನೆ. ದೇವೆಗೌಡರು ಹೇಳಿದ್ದು ಆರ್ಎಸ್ಎಸ್ ಸ್ವಾತಂತ್ರ ಪೂರ್ವದ ಸಂಘಟನೆ ಬಗ್ಗೆ ಎಂದರು. ಇದನ್ನೂ ಓದಿ: ದಿಢೀರ್ ಆರ್ಎಸ್ಎಸ್ ವಿರುದ್ಧ ಎಚ್ಡಿಕೆ ಮುಗಿಬಿದ್ದಿದ್ದು ಯಾಕೆ?