Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Public TV
Last updated: November 26, 2024 5:18 pm
Public TV
Share
3 Min Read
poor seeds copy
SHARE

– ವಿಜಯನಗರಕ್ಕೆ ಮೊದಲ ಸ್ಥಾನ

ಕೊಪ್ಪಳ: ಮುಂಗಾರು, ಹಿಂಗಾರು ಸಮಯದಲ್ಲಿ ಬಿತ್ತನೆ ಮಾಡುವ ರೈತರಿಗೆ ಕಂಪನಿಗಳು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಈ ರೀತಿಯ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಂಡುಬಂದಿದೆ. ಈ ಪೈಕಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿರುವ ಅಂಶ ಬೆಳಕಿಗೆ ಬಂದಿದೆ.

ಹಿಂದುಳಿದ ಜಿಲ್ಲೆಗಳು ಎಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಮಳೆಯನ್ನು ಆಧಾರಿಸಿ ರೈತರು ಬೆಳೆ ಬೆಳೆಯಲು ಮುಂದಾಗುತ್ತಾರೆ.ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ರೈತರನ್ನು ಗುರಿ ಮಾಡಿಕೊಂಡಿರುವ ಕೆಲ ಬೀಜದ ಕಂಪನಿಗಳು ನಕಲಿ, ಕಳಪೆ ಗುಣಮಟ್ಟದ ಬೀಜಗಳನ್ನು ನೀಡಿ, ರೈತರನ್ನು ಯಾಮಾರಿಸುವ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಅದನ್ನು ತಡೆಯಬೇಕು ಎನ್ನುವ ಉದ್ದೇಶದಿಂದ ಆಯಾ ಜಿಲ್ಲೆಗಳ ಕೃಷಿ ಇಲಾಖೆಯ ಕೃಷಿ ಜಾಗೃತ ದಳದ ಅಧಿಕಾರಿಗಳು ಬೀಜದ ಅಂಗಡಿಗಳ ಮೇಲೆ ದಾಳಿ ನಡೆಸಿ, ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರೀಕ್ಷೆಗೆ ಕಳುಹಿಸಿದ ಬೀಜಗಳಲ್ಲಿ ಅಧಿಕ ಸಂಖ್ಯೆಯ ಕಳಪೆ ಗುಣಮಟ್ಟದ ಬೀಜಗಳು ಇರುವುದು ಗಮನಾರ್ಹ ವಿಷಯವಾಗಿದೆ.

7 ಜಿಲ್ಲೆಗಳಲ್ಲಿ 1,963 ಮಾದರಿಗಳ ಸಂಗ್ರಹ:
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಬೀಜಗಳ ಮಾರಾಟದ ದಂಧೆ ಜೋರಾಗಿಯೇ ನಡೆಯುತ್ತಿದೆ. ನಾಟಿ ಮಾಡಿದ ಬೀಜಗಳು ಮೊಳಕೆಯಾಗದೆ ಇರುವುದು, ಬೆಳೆದಿರುವ ಬೆಳೆ ಹೂ ಬಿಡದೇ ಇರುವುದು ಹಾಗೂ ಕಾಳು ಕಟ್ಟದೆ ಇರುವ ಕಾರಣಕ್ಕೆ ಈ ಭಾಗದ ಲಕ್ಷಾಂತರ ರೈತರು ನಷ್ಟವನ್ನು ಅನುಭವಿ ಸಿದ್ದಾರೆ.

ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪ್ರಸಕ್ತ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳನ್ನು ಸೇರಿಕೊಂಡು ಕೃಷಿ ಜಾಗೃತ ದಳದ ಅಧಿಕಾರಿಗಳು 1,963 ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಕೇಂದ್ರಕ್ಕೆ ಗುಣಮಟ್ಟ ಪರೀಕ್ಷೆಗಾಗಿ ಕಳುಹಿಸಿ ಕೊಟ್ಟಿದ್ದಾರೆ.

ಇದರಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು 1,919 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ 63 ಕಂಪನಿಗಳ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಬಿತ್ತನೆಗೆ ಯೋಗ್ಯವಲ್ಲ ಎನ್ನುವ ಅಂಶ ತಿಳಿದುಬಂದಿದೆ. ಇನ್ನೂಳಿದ 44 ಮಾದರಿಗಳು ಅಧಿಕಾರಿಗಳು ಸರಿಯಾಗಿ ಸಂಗ್ರಹ ಮಾಡಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷಾ ಕೇಂದ್ರದಲ್ಲಿ ತಿರಸ್ಕೃತಗೊಂಡಿವೆ.

ಪರೀಕ್ಷಾ ಕೇಂದ್ರದಲ್ಲಿ ಬೀಜಗಳ ಪರೀಕ್ಷೆ ನಡೆಸಿದ ವೇಳೆ ವಿಜಯನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅಂದರೆ 30 ಕಂಪನಿಗಳ ಬೀಜಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ 13 ಕಂಪನಿಗಳ ಬೀಜಗಳು ಕಳಪೆಯಾಗಿದ್ದು, ಎರಡನೇ ಸ್ಥಾನದಲ್ಲಿ ಇದೆ.

ಜಿಲ್ಲಾವಾರು ಬೀಜಗಳ ಸಂಗ್ರಹ:
ಕೊಪ್ಪಳ: ಒಟ್ಟು ಬೀಜಗಳು 287, ತಿರಸ್ಕೃತ ಬೀಜಗಳು 00, ಪರೀಕ್ಷಿಸಿದ ಬೀಜಗಳು 287, ಕಳಪೆ ಬೀಜ ಕಂಪನಿಗಳು 13
ರಾಯಚೂರು: ಒಟ್ಟು ಬೀಜಗಳು 242, ತಿರಸ್ಕೃತ ಬೀಜಗಳು 12, ಪರೀಕ್ಷಿಸಿದ ಬೀಜಗಳು 230, ಕಳಪೆ ಬೀಜ ಕಂಪನಿಗಳು 04
ಬಳ್ಳಾರಿ: ಒಟ್ಟು ಬೀಜಗಳು 359, ತಿರಸ್ಕೃತ ಬೀಜಗಳು 01, ಪರೀಕ್ಷಿಸಿದ ಬೀಜಗಳು 358, ಕಳಪೆ ಬೀಜ ಕಂಪನಿಗಳು 06
ವಿಜಯನಗರ: ಒಟ್ಟು ಬೀಜಗಳು 390, ತಿರಸ್ಕೃತ ಬೀಜಗಳು 08, ಪರೀಕ್ಷಿಸಿದ ಬೀಜಗಳು 382, ಕಳಪೆ ಬೀಜ ಕಂಪನಿಗಳು 30
ಕಲಬುರಗಿ: ಒಟ್ಟು ಬೀಜಗಳು 251, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 246, ಕಳಪೆ ಬೀಜ ಕಂಪನಿಗಳು 01
ಯಾದಗಿರಿ: ಒಟ್ಟು ಬೀಜಗಳು 146, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 141, ಕಳಪೆ ಬೀಜ ಕಂಪನಿಗಳು 03
ಬೀದರ್: ಒಟ್ಟು ಬೀಜಗಳು 288, ತಿರಸ್ಕೃತ ಬೀಜಗಳು 13, ಪರೀಕ್ಷಿಸಿದ ಬೀಜಗಳು 275, ಕಳಪೆ ಬೀಜ ಕಂಪನಿಗಳು 06.ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

TAGGED:farmersKoppalPoor Quality SeedsSeeds Companyಕಲ್ಯಾಣ ಕರ್ನಾಟಕಕಳಪೆ ಬೀಜಬೀಜದ ಕಂಪನಿಗಳು
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
6 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
7 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
7 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
7 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
7 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?