Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Bellary

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Public TV
Last updated: November 26, 2024 5:18 pm
Public TV
Share
3 Min Read
poor seeds copy
SHARE

– ವಿಜಯನಗರಕ್ಕೆ ಮೊದಲ ಸ್ಥಾನ

ಕೊಪ್ಪಳ: ಮುಂಗಾರು, ಹಿಂಗಾರು ಸಮಯದಲ್ಲಿ ಬಿತ್ತನೆ ಮಾಡುವ ರೈತರಿಗೆ ಕಂಪನಿಗಳು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಈ ರೀತಿಯ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಂಡುಬಂದಿದೆ. ಈ ಪೈಕಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿರುವ ಅಂಶ ಬೆಳಕಿಗೆ ಬಂದಿದೆ.

ಹಿಂದುಳಿದ ಜಿಲ್ಲೆಗಳು ಎಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಮಳೆಯನ್ನು ಆಧಾರಿಸಿ ರೈತರು ಬೆಳೆ ಬೆಳೆಯಲು ಮುಂದಾಗುತ್ತಾರೆ.ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ರೈತರನ್ನು ಗುರಿ ಮಾಡಿಕೊಂಡಿರುವ ಕೆಲ ಬೀಜದ ಕಂಪನಿಗಳು ನಕಲಿ, ಕಳಪೆ ಗುಣಮಟ್ಟದ ಬೀಜಗಳನ್ನು ನೀಡಿ, ರೈತರನ್ನು ಯಾಮಾರಿಸುವ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಅದನ್ನು ತಡೆಯಬೇಕು ಎನ್ನುವ ಉದ್ದೇಶದಿಂದ ಆಯಾ ಜಿಲ್ಲೆಗಳ ಕೃಷಿ ಇಲಾಖೆಯ ಕೃಷಿ ಜಾಗೃತ ದಳದ ಅಧಿಕಾರಿಗಳು ಬೀಜದ ಅಂಗಡಿಗಳ ಮೇಲೆ ದಾಳಿ ನಡೆಸಿ, ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರೀಕ್ಷೆಗೆ ಕಳುಹಿಸಿದ ಬೀಜಗಳಲ್ಲಿ ಅಧಿಕ ಸಂಖ್ಯೆಯ ಕಳಪೆ ಗುಣಮಟ್ಟದ ಬೀಜಗಳು ಇರುವುದು ಗಮನಾರ್ಹ ವಿಷಯವಾಗಿದೆ.

7 ಜಿಲ್ಲೆಗಳಲ್ಲಿ 1,963 ಮಾದರಿಗಳ ಸಂಗ್ರಹ:
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಬೀಜಗಳ ಮಾರಾಟದ ದಂಧೆ ಜೋರಾಗಿಯೇ ನಡೆಯುತ್ತಿದೆ. ನಾಟಿ ಮಾಡಿದ ಬೀಜಗಳು ಮೊಳಕೆಯಾಗದೆ ಇರುವುದು, ಬೆಳೆದಿರುವ ಬೆಳೆ ಹೂ ಬಿಡದೇ ಇರುವುದು ಹಾಗೂ ಕಾಳು ಕಟ್ಟದೆ ಇರುವ ಕಾರಣಕ್ಕೆ ಈ ಭಾಗದ ಲಕ್ಷಾಂತರ ರೈತರು ನಷ್ಟವನ್ನು ಅನುಭವಿ ಸಿದ್ದಾರೆ.

ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪ್ರಸಕ್ತ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳನ್ನು ಸೇರಿಕೊಂಡು ಕೃಷಿ ಜಾಗೃತ ದಳದ ಅಧಿಕಾರಿಗಳು 1,963 ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಕೇಂದ್ರಕ್ಕೆ ಗುಣಮಟ್ಟ ಪರೀಕ್ಷೆಗಾಗಿ ಕಳುಹಿಸಿ ಕೊಟ್ಟಿದ್ದಾರೆ.

ಇದರಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು 1,919 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ 63 ಕಂಪನಿಗಳ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಬಿತ್ತನೆಗೆ ಯೋಗ್ಯವಲ್ಲ ಎನ್ನುವ ಅಂಶ ತಿಳಿದುಬಂದಿದೆ. ಇನ್ನೂಳಿದ 44 ಮಾದರಿಗಳು ಅಧಿಕಾರಿಗಳು ಸರಿಯಾಗಿ ಸಂಗ್ರಹ ಮಾಡಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷಾ ಕೇಂದ್ರದಲ್ಲಿ ತಿರಸ್ಕೃತಗೊಂಡಿವೆ.

ಪರೀಕ್ಷಾ ಕೇಂದ್ರದಲ್ಲಿ ಬೀಜಗಳ ಪರೀಕ್ಷೆ ನಡೆಸಿದ ವೇಳೆ ವಿಜಯನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅಂದರೆ 30 ಕಂಪನಿಗಳ ಬೀಜಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ 13 ಕಂಪನಿಗಳ ಬೀಜಗಳು ಕಳಪೆಯಾಗಿದ್ದು, ಎರಡನೇ ಸ್ಥಾನದಲ್ಲಿ ಇದೆ.

ಜಿಲ್ಲಾವಾರು ಬೀಜಗಳ ಸಂಗ್ರಹ:
ಕೊಪ್ಪಳ: ಒಟ್ಟು ಬೀಜಗಳು 287, ತಿರಸ್ಕೃತ ಬೀಜಗಳು 00, ಪರೀಕ್ಷಿಸಿದ ಬೀಜಗಳು 287, ಕಳಪೆ ಬೀಜ ಕಂಪನಿಗಳು 13
ರಾಯಚೂರು: ಒಟ್ಟು ಬೀಜಗಳು 242, ತಿರಸ್ಕೃತ ಬೀಜಗಳು 12, ಪರೀಕ್ಷಿಸಿದ ಬೀಜಗಳು 230, ಕಳಪೆ ಬೀಜ ಕಂಪನಿಗಳು 04
ಬಳ್ಳಾರಿ: ಒಟ್ಟು ಬೀಜಗಳು 359, ತಿರಸ್ಕೃತ ಬೀಜಗಳು 01, ಪರೀಕ್ಷಿಸಿದ ಬೀಜಗಳು 358, ಕಳಪೆ ಬೀಜ ಕಂಪನಿಗಳು 06
ವಿಜಯನಗರ: ಒಟ್ಟು ಬೀಜಗಳು 390, ತಿರಸ್ಕೃತ ಬೀಜಗಳು 08, ಪರೀಕ್ಷಿಸಿದ ಬೀಜಗಳು 382, ಕಳಪೆ ಬೀಜ ಕಂಪನಿಗಳು 30
ಕಲಬುರಗಿ: ಒಟ್ಟು ಬೀಜಗಳು 251, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 246, ಕಳಪೆ ಬೀಜ ಕಂಪನಿಗಳು 01
ಯಾದಗಿರಿ: ಒಟ್ಟು ಬೀಜಗಳು 146, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 141, ಕಳಪೆ ಬೀಜ ಕಂಪನಿಗಳು 03
ಬೀದರ್: ಒಟ್ಟು ಬೀಜಗಳು 288, ತಿರಸ್ಕೃತ ಬೀಜಗಳು 13, ಪರೀಕ್ಷಿಸಿದ ಬೀಜಗಳು 275, ಕಳಪೆ ಬೀಜ ಕಂಪನಿಗಳು 06.ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

TAGGED:farmersKoppalPoor Quality SeedsSeeds Companyಕಲ್ಯಾಣ ಕರ್ನಾಟಕಕಳಪೆ ಬೀಜಬೀಜದ ಕಂಪನಿಗಳು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
4 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
4 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
4 hours ago
Weather
Districts

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್

Public TV
By Public TV
5 hours ago
siddu bommai
Bagalkot

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ

Public TV
By Public TV
6 hours ago
Boeing 787 air india dreamliner
Latest

ಮೇ 31 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?