Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತಿಥಿ ಉಪನ್ಯಾಸಕರ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟು ಹೆಚ್ಚಿಸಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅತಿಥಿ ಉಪನ್ಯಾಸಕರ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟು ಹೆಚ್ಚಿಸಿ: ಸಿದ್ದರಾಮಯ್ಯ

Bengaluru City

ಅತಿಥಿ ಉಪನ್ಯಾಸಕರ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟು ಹೆಚ್ಚಿಸಿ: ಸಿದ್ದರಾಮಯ್ಯ

Public TV
Last updated: January 1, 2022 5:42 pm
Public TV
Share
3 Min Read
SIDDRAMAIHA
SHARE

-ಅತಿಥಿ ಉಪನ್ಯಾಸಕರನ್ನು ನಿಂದಿಸುವುದು ಅಮಾನವೀಯ ನಡವಳಿಕೆ

ಬೆಂಗಳೂರು: ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಇಟ್ಟಿರುವ ಬೇಡಿಕೆಗಳು ದುಬಾರಿಯಾದುವೇನಲ್ಲ. ಅವರು ಕೇಳುತ್ತಿರುವುದಿಷ್ಟೆ, ತಾವು ಮಾಡುತ್ತಿರುವ ಸೇವೆಗೆ ಕನಿಷ್ಟ ಭದ್ರತೆ ನೀಡಿ, ವರ್ಷದ ಎಲ್ಲ ತಿಂಗಳು ಸಂಬಳ ನೀಡಿ ಮತ್ತು ನೀಡುತ್ತಿರುವ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟನ್ನು ಹೆಚ್ಚಿಸಿ ಎಂಬುದಷ್ಟೆ ಅವರ ಬೇಡಿಕೆ ಎಂದು ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಅತಿಥಿ ಉಪನ್ಯಾಸಕರ ಜೊತೆ ಮಾನವೀಯತೆಯಿಂದ ವರ್ತಿಸುವಂತೆ ಒತ್ತಾಯಿಸಿದ್ದಾರೆ.

bdr late teachers

ಪತ್ರದಲ್ಲಿ ಏನಿದೆ:
ರಾಜ್ಯದ 440 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ 14,183 ಉಪನ್ಯಾಸಕರು ಹಲವು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈಗ ನೀಡುತ್ತಿರುವುದಕ್ಕೆ ಗರಿಷ್ಟ ಇನ್ನೂರು ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ನೀಡಿದರೆ ಈ ಸಮಸ್ಯೆ ಬಗೆ ಹರಿಯುತ್ತದೆ. ಆದರೆ ಸರ್ಕಾರ ಅವರ ಬೇಡಿಕೆಗಳ ಕುರಿತು ಕಣ್ಣು, ಕಿವಿಗಳನ್ನು ಮುಚ್ಚಿಕೊಂಡು ಕೂತಿದೆ. ಸರ್ಕಾರದ ಈ ನಿರ್ಲಕ್ಷ್ಯ ಅಮಾನವೀಯವಾದುದು. ಕಳೆದ ಎರಡು ವರ್ಷಗಳಲ್ಲಿ ಪ್ರತಿ ವಸ್ತುಗಳ ಬೆಲೆಯೂ ದುಪ್ಪಟ್ಟಾಗಿದೆ. ಆದ್ದರಿಂದ ಸರ್ಕಾರ ನೀಡುತ್ತಿರುವ ಪುಡಿಗಾಸಿನಲ್ಲಿ ಇವರು ಬದುಕುವುದು ಹೇಗೆ?. ಇದನ್ನೂ ಓದಿ: ಲಾಠಿ ಚಾರ್ಜ್ ಪ್ರಕರಣ ಸಿಐಡಿಗೆ ಒಪ್ಪಿಸುತ್ತೇನೆ: ಆರಗ ಜ್ಞಾನೇಂದ್ರ

ಈ ಉಪನ್ಯಾಸಕರುಗಳು ಎಂ.ಎ, ಎಂ.ಎಸ್ಸಿ, ಎಂ.ಕಾಂ, ಪಿಎಚ್,ಡಿ ಪದವಿ ಪಡೆದಿದ್ದಾರೆ. ಯುಜಿಸಿ ನಡೆಸುವ ಅರ್ಹತಾ ಪರೀಕ್ಷೆಗಳನ್ನು ಪಾಸು ಮಾಡಿದ್ದಾರೆ. ಇವರಿಗೆ ತಿಂಗಳಿಗೆ 11 ರಿಂದ 13 ಸಾವಿರ ರೂಪಾಯಿಗಳನ್ನು ಮಾತ್ರ ಗೌರವಧನವೆಂದು ನೀಡಲಾಗುತ್ತಿದೆ. ಅದೂ ವರ್ಷದಲ್ಲಿ ಕೇವಲ 8 ತಿಂಗಳಿಗೆ ಮಾತ್ರ ನೀಡಲಾಗುತ್ತಿದೆ. ಈ ಸಂಬಳವು ಯುಜಿಸಿ ಸಂಬಳ ಪಡೆಯುತ್ತಿರುವ ಉಪನ್ಯಾಸಕರ ಸಂಬಳದ ಹತ್ತನೇ ಒಂದು ಮತ್ತು ಇಪ್ಪತ್ತನೆ ಒಂದು ಭಾಗವೂ ಅಲ್ಲ. ಈ ಅತಿಥಿ ಉಪನ್ಯಾಸಕರು ಕೂಡ ಯುಜಿಸಿ ಸಂಬಳ ಪಡೆಯುವ ಉಪನ್ಯಾಸಕರಷ್ಟೆ ಪರಿಣಾಮಕಾರಿಯಾಗಿ ಪಾಠ-ಪ್ರವಚನಗಳನ್ನು ಮಾಡುತ್ತಾರೆ. ಆದರೂ ಅತಿ ಕಡಿಮೆ ಗೌರವಧನ ಪಡೆಯುತ್ತಾರೆ. ಹಾಗಾಗಿಯೆ ಇದನ್ನು ಕೆಲವರು ಶೋಷಣೆ ಎಂದು ಕರೆದಿದ್ದಾರೆ.

ತಮ್ಮನ್ನು ಸರ್ಕಾರ ಶೋಷಣೆ ಮಾಡುತ್ತಿದೆ ಎಂಬ ಅತಿಥಿ ಉಪನ್ಯಾಸಕರ ಮಾತಿಗೆ ಸಚಿವರೊಬ್ಬರು ಕೆರಳಿ ಪ್ರತಿಭಟನಾಕಾರರನ್ನು ನಿಂದಿಸಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರದ ನಿಲುವು ಖಂಡನೀಯವಾದುದು. ಎನ್‍ಇಪಿ ಜಾರಿಗೆ ತಂದ ಮೊದಲ ರಾಜ್ಯ, ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹಾಕಿಕೊಂಡಿದ್ದೇವೆ ಇತ್ಯಾದಿ ಹೇಳಿಕೊಂಡು ಕಳಪೆ ಯಂತ್ರೋಪಕರಣಗಳನ್ನು ಅಳವಡಿಸಲು ಸಾವಿರಾರು ಕೋಟಿ ಖರ್ಚು ಮಾಡುತ್ತಿರುವ ಸರ್ಕಾರ, ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿ ಎಂದು ಕೇಳುವ ಅತಿಥಿ ಉಪನ್ಯಾಸಕರನ್ನು ನಿಂದಿಸುವುದು, ಹಂಗಿಸುವುದು ಅಮಾನವೀಯ ನಡವಳಿಕೆಯಾಗುತ್ತದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಶ್ರೀರಾಮುಲು

ಯಂತ್ರಗಳು ಮನುಷ್ಯರಿಗೆ ಸಾಮಾಜಿಕ ಶಿಕ್ಷಣವನ್ನು ಕಲಿಸಲಾರವು. ಮನುಷ್ಯತ್ವವನ್ನು ಹೇಳಿಕೊಡಲಾರವು. ಈ ಕೆಲಸವನ್ನು ಅನ್ನ ತಿನ್ನುವ ಮನುಷ್ಯರೆ ಮಾಡಬೇಕು. ಅತಿಥಿ ಉಪನ್ಯಾಸಕರು ತರಗತಿಗಳನ್ನು ತೆಗೆದುಕೊಳ್ಳದ ಕಾರಣದಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದೆ ಕಾರಿಡಾರುಗಳಲ್ಲಿ ಓಡಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಸರ್ಕಾರಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡು ವಿದ್ಯಾರ್ಥಿಯೊಬ್ಬ ಜೀವನ್ಮರಣದ ಸ್ಥಿತಿಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದಾನೆಂದು ವೈದ್ಯರೊಬ್ಬರು ಇಂದು ಹೇಳುತ್ತಿದ್ದರು.

ಸರ್ಕಾರ ಕೂಡಲೇ ಗಮನ ಹರಿಸಿ ಆ ವಿದ್ಯಾರ್ಥಿಗೆ ಉತ್ತಮ ಚಿಕಿತ್ಸೆ ಕೊಡಿಸಿ ಗಾರೆ ಕೆಲಸ ಮಾಡುವ ಬಡ ಕೂಲಿಕಾರನ ಮಗನನ್ನು ಉಳಿಸಿಕೊಡಬೇಕೆಂದು ಒತ್ತಾಯಿಸುತ್ತೇನೆ. ಸಮರ್ಪಕ ಸಂಬಳವಿಲ್ಲದೆ ಕೋವಿಡ್ ಸಂದರ್ಭದಲ್ಲಿ ಅನೇಕ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಯಿಲೆಗಳಿಗೆ ಚಿಕಿತ್ಸೆ ಪಡೆದುಕೊಳ್ಳಲಾಗದೆ ಅಸುನೀಗಿದ್ದಾರೆ. ಹಾಗಾಗಿ ಸರ್ಕಾರ ಇವರನ್ನು ಇನ್ನಷ್ಟು ಶೋಷಣೆ ಮಾಡದೆ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ಬಗೆಹರಿಸಿ ಅವರುಗಳು ತರಗತಿಗಳನ್ನು ತೆಗೆದುಕೊಳ್ಳುವಂತೆ ಮಾಡಬೇಕೆಂದು ಆಗ್ರಹಿಸುತ್ತೇನೆ.

TAGGED:basavarj bommaiguest lecturersiddaramaiahಅತಿಥಿ ಉಪನ್ಯಾಸಕರುಬಸವರಾಜ ಬೊಮ್ಮಾಯಿಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Kalabairaveshwara Temple
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
8 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
17 minutes ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
28 minutes ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
50 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
1 hour ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?