Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತಿಥಿ ಉಪನ್ಯಾಸಕರ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟು ಹೆಚ್ಚಿಸಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅತಿಥಿ ಉಪನ್ಯಾಸಕರ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟು ಹೆಚ್ಚಿಸಿ: ಸಿದ್ದರಾಮಯ್ಯ

Bengaluru City

ಅತಿಥಿ ಉಪನ್ಯಾಸಕರ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟು ಹೆಚ್ಚಿಸಿ: ಸಿದ್ದರಾಮಯ್ಯ

Public TV
Last updated: January 1, 2022 5:42 pm
Public TV
Share
3 Min Read
SIDDRAMAIHA
SHARE

-ಅತಿಥಿ ಉಪನ್ಯಾಸಕರನ್ನು ನಿಂದಿಸುವುದು ಅಮಾನವೀಯ ನಡವಳಿಕೆ

ಬೆಂಗಳೂರು: ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಇಟ್ಟಿರುವ ಬೇಡಿಕೆಗಳು ದುಬಾರಿಯಾದುವೇನಲ್ಲ. ಅವರು ಕೇಳುತ್ತಿರುವುದಿಷ್ಟೆ, ತಾವು ಮಾಡುತ್ತಿರುವ ಸೇವೆಗೆ ಕನಿಷ್ಟ ಭದ್ರತೆ ನೀಡಿ, ವರ್ಷದ ಎಲ್ಲ ತಿಂಗಳು ಸಂಬಳ ನೀಡಿ ಮತ್ತು ನೀಡುತ್ತಿರುವ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟನ್ನು ಹೆಚ್ಚಿಸಿ ಎಂಬುದಷ್ಟೆ ಅವರ ಬೇಡಿಕೆ ಎಂದು ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಅತಿಥಿ ಉಪನ್ಯಾಸಕರ ಜೊತೆ ಮಾನವೀಯತೆಯಿಂದ ವರ್ತಿಸುವಂತೆ ಒತ್ತಾಯಿಸಿದ್ದಾರೆ.

bdr late teachers

ಪತ್ರದಲ್ಲಿ ಏನಿದೆ:
ರಾಜ್ಯದ 440 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ 14,183 ಉಪನ್ಯಾಸಕರು ಹಲವು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈಗ ನೀಡುತ್ತಿರುವುದಕ್ಕೆ ಗರಿಷ್ಟ ಇನ್ನೂರು ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ನೀಡಿದರೆ ಈ ಸಮಸ್ಯೆ ಬಗೆ ಹರಿಯುತ್ತದೆ. ಆದರೆ ಸರ್ಕಾರ ಅವರ ಬೇಡಿಕೆಗಳ ಕುರಿತು ಕಣ್ಣು, ಕಿವಿಗಳನ್ನು ಮುಚ್ಚಿಕೊಂಡು ಕೂತಿದೆ. ಸರ್ಕಾರದ ಈ ನಿರ್ಲಕ್ಷ್ಯ ಅಮಾನವೀಯವಾದುದು. ಕಳೆದ ಎರಡು ವರ್ಷಗಳಲ್ಲಿ ಪ್ರತಿ ವಸ್ತುಗಳ ಬೆಲೆಯೂ ದುಪ್ಪಟ್ಟಾಗಿದೆ. ಆದ್ದರಿಂದ ಸರ್ಕಾರ ನೀಡುತ್ತಿರುವ ಪುಡಿಗಾಸಿನಲ್ಲಿ ಇವರು ಬದುಕುವುದು ಹೇಗೆ?. ಇದನ್ನೂ ಓದಿ: ಲಾಠಿ ಚಾರ್ಜ್ ಪ್ರಕರಣ ಸಿಐಡಿಗೆ ಒಪ್ಪಿಸುತ್ತೇನೆ: ಆರಗ ಜ್ಞಾನೇಂದ್ರ

ಈ ಉಪನ್ಯಾಸಕರುಗಳು ಎಂ.ಎ, ಎಂ.ಎಸ್ಸಿ, ಎಂ.ಕಾಂ, ಪಿಎಚ್,ಡಿ ಪದವಿ ಪಡೆದಿದ್ದಾರೆ. ಯುಜಿಸಿ ನಡೆಸುವ ಅರ್ಹತಾ ಪರೀಕ್ಷೆಗಳನ್ನು ಪಾಸು ಮಾಡಿದ್ದಾರೆ. ಇವರಿಗೆ ತಿಂಗಳಿಗೆ 11 ರಿಂದ 13 ಸಾವಿರ ರೂಪಾಯಿಗಳನ್ನು ಮಾತ್ರ ಗೌರವಧನವೆಂದು ನೀಡಲಾಗುತ್ತಿದೆ. ಅದೂ ವರ್ಷದಲ್ಲಿ ಕೇವಲ 8 ತಿಂಗಳಿಗೆ ಮಾತ್ರ ನೀಡಲಾಗುತ್ತಿದೆ. ಈ ಸಂಬಳವು ಯುಜಿಸಿ ಸಂಬಳ ಪಡೆಯುತ್ತಿರುವ ಉಪನ್ಯಾಸಕರ ಸಂಬಳದ ಹತ್ತನೇ ಒಂದು ಮತ್ತು ಇಪ್ಪತ್ತನೆ ಒಂದು ಭಾಗವೂ ಅಲ್ಲ. ಈ ಅತಿಥಿ ಉಪನ್ಯಾಸಕರು ಕೂಡ ಯುಜಿಸಿ ಸಂಬಳ ಪಡೆಯುವ ಉಪನ್ಯಾಸಕರಷ್ಟೆ ಪರಿಣಾಮಕಾರಿಯಾಗಿ ಪಾಠ-ಪ್ರವಚನಗಳನ್ನು ಮಾಡುತ್ತಾರೆ. ಆದರೂ ಅತಿ ಕಡಿಮೆ ಗೌರವಧನ ಪಡೆಯುತ್ತಾರೆ. ಹಾಗಾಗಿಯೆ ಇದನ್ನು ಕೆಲವರು ಶೋಷಣೆ ಎಂದು ಕರೆದಿದ್ದಾರೆ.

ತಮ್ಮನ್ನು ಸರ್ಕಾರ ಶೋಷಣೆ ಮಾಡುತ್ತಿದೆ ಎಂಬ ಅತಿಥಿ ಉಪನ್ಯಾಸಕರ ಮಾತಿಗೆ ಸಚಿವರೊಬ್ಬರು ಕೆರಳಿ ಪ್ರತಿಭಟನಾಕಾರರನ್ನು ನಿಂದಿಸಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರದ ನಿಲುವು ಖಂಡನೀಯವಾದುದು. ಎನ್‍ಇಪಿ ಜಾರಿಗೆ ತಂದ ಮೊದಲ ರಾಜ್ಯ, ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹಾಕಿಕೊಂಡಿದ್ದೇವೆ ಇತ್ಯಾದಿ ಹೇಳಿಕೊಂಡು ಕಳಪೆ ಯಂತ್ರೋಪಕರಣಗಳನ್ನು ಅಳವಡಿಸಲು ಸಾವಿರಾರು ಕೋಟಿ ಖರ್ಚು ಮಾಡುತ್ತಿರುವ ಸರ್ಕಾರ, ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿ ಎಂದು ಕೇಳುವ ಅತಿಥಿ ಉಪನ್ಯಾಸಕರನ್ನು ನಿಂದಿಸುವುದು, ಹಂಗಿಸುವುದು ಅಮಾನವೀಯ ನಡವಳಿಕೆಯಾಗುತ್ತದೆ. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಶ್ರೀರಾಮುಲು

ಯಂತ್ರಗಳು ಮನುಷ್ಯರಿಗೆ ಸಾಮಾಜಿಕ ಶಿಕ್ಷಣವನ್ನು ಕಲಿಸಲಾರವು. ಮನುಷ್ಯತ್ವವನ್ನು ಹೇಳಿಕೊಡಲಾರವು. ಈ ಕೆಲಸವನ್ನು ಅನ್ನ ತಿನ್ನುವ ಮನುಷ್ಯರೆ ಮಾಡಬೇಕು. ಅತಿಥಿ ಉಪನ್ಯಾಸಕರು ತರಗತಿಗಳನ್ನು ತೆಗೆದುಕೊಳ್ಳದ ಕಾರಣದಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದೆ ಕಾರಿಡಾರುಗಳಲ್ಲಿ ಓಡಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಸರ್ಕಾರಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡು ವಿದ್ಯಾರ್ಥಿಯೊಬ್ಬ ಜೀವನ್ಮರಣದ ಸ್ಥಿತಿಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದಾನೆಂದು ವೈದ್ಯರೊಬ್ಬರು ಇಂದು ಹೇಳುತ್ತಿದ್ದರು.

ಸರ್ಕಾರ ಕೂಡಲೇ ಗಮನ ಹರಿಸಿ ಆ ವಿದ್ಯಾರ್ಥಿಗೆ ಉತ್ತಮ ಚಿಕಿತ್ಸೆ ಕೊಡಿಸಿ ಗಾರೆ ಕೆಲಸ ಮಾಡುವ ಬಡ ಕೂಲಿಕಾರನ ಮಗನನ್ನು ಉಳಿಸಿಕೊಡಬೇಕೆಂದು ಒತ್ತಾಯಿಸುತ್ತೇನೆ. ಸಮರ್ಪಕ ಸಂಬಳವಿಲ್ಲದೆ ಕೋವಿಡ್ ಸಂದರ್ಭದಲ್ಲಿ ಅನೇಕ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಯಿಲೆಗಳಿಗೆ ಚಿಕಿತ್ಸೆ ಪಡೆದುಕೊಳ್ಳಲಾಗದೆ ಅಸುನೀಗಿದ್ದಾರೆ. ಹಾಗಾಗಿ ಸರ್ಕಾರ ಇವರನ್ನು ಇನ್ನಷ್ಟು ಶೋಷಣೆ ಮಾಡದೆ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ಬಗೆಹರಿಸಿ ಅವರುಗಳು ತರಗತಿಗಳನ್ನು ತೆಗೆದುಕೊಳ್ಳುವಂತೆ ಮಾಡಬೇಕೆಂದು ಆಗ್ರಹಿಸುತ್ತೇನೆ.

TAGGED:basavarj bommaiguest lecturersiddaramaiahಅತಿಥಿ ಉಪನ್ಯಾಸಕರುಬಸವರಾಜ ಬೊಮ್ಮಾಯಿಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 23-12-2025

Public TV
By Public TV
16 minutes ago
MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
9 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
9 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
10 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
10 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?