Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಹೆಚ್ಚಿದ ಆಗ್ರಹ – ರಸ್ತೆ ತಡೆ, ಟೈರ್ ಸುಟ್ಟು ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಹೆಚ್ಚಿದ ಆಗ್ರಹ – ರಸ್ತೆ ತಡೆ, ಟೈರ್ ಸುಟ್ಟು ಪ್ರತಿಭಟನೆ

Chamarajanagar

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಹೆಚ್ಚಿದ ಆಗ್ರಹ – ರಸ್ತೆ ತಡೆ, ಟೈರ್ ಸುಟ್ಟು ಪ್ರತಿಭಟನೆ

Public TV
Last updated: April 6, 2025 8:25 pm
Public TV
Share
3 Min Read
Bandipur Protest
SHARE

ಚಾಮರಾಜನಗರ: ಬಂಡೀಪುರದಲ್ಲಿ(Bandipura) ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸುವ ಪ್ರಯತ್ನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಂಡೀಪುರ ಉಳಿಸಿ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ನಡೆದ ನಮ್ಮ ನಡಿಗೆ ಬಂಡೀಪುರದ ಕಡೆಗೆ ಪಾದಯಾತ್ರೆ ಸಾಕ್ಷಿಯಾಯಿತು.

Bandipur Protest 1

ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು(TamilNadu, ಕೇರಳ(Kerala) ರಾಜ್ಯಗಳಿಗೆ 2 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಇಲ್ಲಿ ವಾಹನಗಳಿಗೆ ಸಿಲುಕಿ ವನ್ಯಜೀವಿಗಳು ಸಾವನ್ನಪ್ಪುತ್ತಿದ್ದ ಹಿನ್ನೆಲೆಯಲ್ಲಿ 2009ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕೆಲವು ಮಾಫಿಯಾಗಳಿಗೆ ಇದರಿಂದ ಭಾರೀ ಹೊಡೆತ ಬಿದ್ದಿದೆ. ಕೇರಳ ಸರ್ಕಾರವಂತೂ ಇಲ್ಲಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಲೇ ಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

ಇದೀಗ ವಯನಾಡು ಸಂಸದೆ ಪ್ರಿಯಾಂಕಾ ವಾದ್ರಾ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ವಯನಾಡ್‌ನಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶವೊಂದರಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸಹ ರಾತ್ರಿ ಸಂಚಾರ ನಿಷೇಧ ತೆರವು ಮಾಡುವ ಬಗ್ಗೆ ಭರವಸೆ ನೀಡಿದ್ದರು.

ಇತ್ತೀಚಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಡನೆ ಸಭೆಯನ್ನು ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ರಾಜಕೀಯ ಹಿತಾಸಕ್ತಿಗೋಸ್ಕರ ನಿಷೇಧ ತೆರವುಗೊಳಿಸುವ ಆತಂಕ ಎದುರಾಗಿರುವುದರಿಂದ ಬೀದಿಗಿಳಿದು ಬಂಡೀಪುರ ಉಳಿಸಿ ಅಭಿಯಾನ ನಡೆಸುತ್ತಿದ್ದಾರೆ. ಇದನ್ನೂ ಓದಿ: Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ

ಇಂದು ನಮ್ಮ ನಡಿಗೆ ಬಂಡೀಪುರದ ಕಡೆಗೆ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ನಡೆಯಿತು. ಗುಂಡ್ಲುಪೇಟೆ ತಾಲೂಕು ಕಗ್ಗಳದ ಹುಂಡಿಯಿಂದ ಮದ್ದೂರು ಚೆಕ್‌ಪೋಸ್ಟ್‌ವರೆಗೆ ನಡೆದ ಪಾದಯಾತ್ರೆಯಲ್ಲಿ ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು, ರೈತರು, ಐಟಿ-ಬಿಟಿ ನೌಕರರು, ನಿವೃತ್ತ ಅರಣ್ಯಾಧಿಕಾರಿಗಳು ಹೀಗೆ ಎಲ್ಲಾ ವರ್ಗದ ನೂರಾರು ಮಂದಿ ಭಾಗವಹಿಸಿದ್ದರು. ಕೇರಳದ ಪರಿಸರವಾದಿಗಳು ಸಹ ಈ ಅಭಿಯಾನದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು. ಇದನ್ನೂ ಓದಿ: ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

ಪಾದಯಾತ್ರೆ ಬಳಿಕ ಮದ್ದೂರು ಚೆಕ್‌ಪೋಸ್ಟ್ ಬಳಿ ನಡೆದ ಸಮಾವೇಶದ ಸ್ಥಳಕ್ಕೆ ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಭೇಟಿ ನೀಡಿದ್ದರು. ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಯಾರು ಸಹ ಆತಂಕಪಡುವ ಅಗತ್ಯ ಇಲ್ಲ ಎಂಬ ಭರವಸೆಯ ಮಾತುಗಳನ್ನಾಡಿದರು.

ಕೇರಳದವರು ರಾತ್ರಿ ವೇಳೆ ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕೇಳಿದ್ದಾರೆ ಅಷ್ಟೇ. ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರಿಂದ ಯಾವುದೇ ಒತ್ತಡ ಇಲ್ಲ. ಅವರು ಯಾವುದೇ ಪತ್ರವನ್ನು ಬರೆದಿಲ್ಲ. ಯಥಾಸ್ಥಿತಿ ಮುಂದುವರಿಯಲಿ ಎಂಬುದೇ ನನ್ನ ಅಭಿಪ್ರಾಯ ಎನ್ನುವ ಮೂಲಕ ರಾತ್ರಿ ವಾಹನ ಸಂಚಾರ ನಿಷೇಧ ಮುಂದುವರಿಕೆಗೆ ಸಹಮತ ವ್ಯಕ್ತಪಡಿಸಿದರು. ಇದನ್ನೂ ಓದಿ: ಭ್ರಷ್ಟ ಕುಟುಂಬದ ಮಾತು ಕೇಳಿ ನನ್ನನ್ನ ಉಚ್ಚಾಟನೆ ಮಾಡಲಾಗಿದೆ: ಯತ್ನಾಳ್ ನಿಗಿನಿಗಿ ಕೆಂಡ

ಪರಿಸರವಾದಿಗಳ ಹೋರಾಟ ತೀವ್ರ
ಸ್ವಯಂಪ್ರೇರಿತರಾಗಿ ನೂರಾರು ಜನರು ಪಾಲ್ಗೊಳ್ಳುವ ಮೂಲಕ ಬಂಡೀಪುರ ಉಳಿಸಿ ಅಭಿಯಾನ ಸಾರ್ವಜನಿಕ ಚಳವಳಿಯಾಗಿ ರೂಪುಗೊಂಡಿದೆ. ರಾತ್ರಿ ವಾಹನ ಸಂಚಾರ ನಿಷೇಧದ ತೆರವೊಗೊಳಿಸುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡುವವರೆಗೂ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸಲು ಪರಿಸರವಾದಿಗಳು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಅಯ್ಯೋ ವಿಧಿಯೇ… ಕಾಲೇಜಿನಲ್ಲಿ ವಿದಾಯ ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡದಂತೆ ಮನವಿ ಮಾಡಿದರು. ರಸ್ತೆ ತಡೆದು, ಟೈರ್ ಸುಟ್ಟು ಹಾಕಿ ಪ್ರತಿಭಟನೆ ಮಾಡಿದರು. ಕೇರಳ ಸರ್ಕಾರ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ, ಒಂದು ವೇಳೆ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿದರು.

TAGGED:bandipuraChamarajnagargundlupeteprotestಗುಂಡ್ಲುಪೇಟೆಚಾಮರಾಜನಗರಪ್ರತಿಭಟನೆಬಂಡೀಪುರ
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

Yaduveer
Districts

ಮೈಸೂರಲ್ಲಿ ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ ಜಾಗಕ್ಕೆ ತಡೆಯಾಜ್ಞೆ ತಂದ ತಾಯಿ

Public TV
By Public TV
3 minutes ago
CRIME
Bengaluru City

ಬೆಂಗಳೂರಲ್ಲಿ ಕಳ್ಳತನ ಮಾಡಿದವನನ್ನೇ ದರೋಡೆ ಮಾಡಿದ ಗ್ಯಾಂಗ್

Public TV
By Public TV
25 minutes ago
BY Vijayendra
Belgaum

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ: ವಿಜಯೇಂದ್ರ

Public TV
By Public TV
36 minutes ago
Rahul Gandhi
Latest

CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Public TV
By Public TV
36 minutes ago
BASAVARAJ HORATTI
Belgaum

ಸಭಾಪತಿ ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ; ವಿಧಾನ ಪರಿಷತ್ ಕಲಾಪದಲ್ಲಿ ಖಂಡನೆ

Public TV
By Public TV
59 minutes ago
Krishna Byre Gowda
Belgaum

ಭೂ ಪರಿವರ್ತನೆ ನಿಯಮಗಳ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ: ಕೃಷ್ಣ ಬೈರೇಗೌಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?