– ಆ.18ರಂದು ಗೇಟ್ ಅಳವಡಿಸಿದ ನಂತರ ಮತ್ತೆ ಭರ್ತಿ ಹಂತದಲ್ಲಿರುವ ಡ್ಯಾಂ
ಕೊಪ್ಪಳ: ಮಲೆನಾಡಿನಲ್ಲಿ ಮತ್ತೆ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ನೀರಿನ ಒಳ ಹರಿವು ಹೆಚ್ಚಾಗಿದೆ. ಇದರಿಂದ ಜನರಲ್ಲಿ ಸಂತಸ ಇಮ್ಮಡಿಯಾಗಿದೆ.
- Advertisement -
ಜಿಲ್ಲೆಯ ಮುನಿರಾಬಾದ್ (Munirabad) ಬಳಿಯಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ನೀರಿನ ಒಳಹರಿವು 34,431 ಕ್ಯೂಸೆಕ್ ನಷ್ಟಿದೆ. ಜಲಾಶಯದಲ್ಲಿ ನೀರಿನ ಮಟ್ಟ 94.324 ಟಿಎಂಸಿ ತಲುಪಿದ್ದು, ಒಟ್ಟು 105.788 ಟಿಎಂಸಿ ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ.ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಇಂದು ಚಾಲನೆ
- Advertisement -
- Advertisement -
ಸದ್ಯ ಜಲಾಶಯ ಭರ್ತಿಗೆ ಕೇವಲ 10 ಟಿಎಂಸಿ ನೀರು ಅವಶ್ಯಕತೆಯಿದೆ. ನೀರಿನ ಹೊರಹರಿವು ಒಟ್ಟು ಹತ್ತು ಸಾವಿರ ಕ್ಯೂಸೆಕ್ ಇದೆ.
- Advertisement -
ಆ.10 ರಂದು ಡ್ಯಾಂನ ಕ್ರಸ್ಟಗೇಟ್ (Crest Gate) ಕೊಚ್ಚಿಕೊಂಡು ಹೋಗಿತ್ತು. ಆ ಸಂದರ್ಭದಲ್ಲಿ ಡ್ಯಾಂ ಕ್ರಸ್ಟಗೇಟ್ ಅಳವಡಿಕೆಗಾಗಿ ಅಪಾರ ಪ್ರಮಾಣದ ನೀರನ್ನು ಹರಿಬಿಡುವ ಅನಿವಾರ್ಯತೆಯಿತ್ತು. ಆ.18 ರಂದು ಜಲಾಶಯಕ್ಕೆ ಸ್ಟಾಪಲಾಗ್ ಗೇಟ್ (Stoplog Gate) ಅಳವಡಿಕೆ ಮಾಡಲಾಗಿತ್ತು. ಗೇಟ್ ಅಳವಡಿಸಿದ ನಂತರ ಮತ್ತೆ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದಿದೆ.ಇದನ್ನೂ ಓದಿ: ಪವಿತ್ರಾ ಗೌಡ ಮನೆಯಲ್ಲಿ ಸೊರಗಿ ಹೋಗಿದ್ದ ಶ್ವಾನಗಳು ದರ್ಶನ್ ಮನೆಗೆ ಶಿಫ್ಟ್