ರಾಯಚೂರು: ಮಹಾರಾಷ್ಟ್ರದ (Maharashtra) ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿಗೆ (Krishna River) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರಾಯಚೂರಿನ ದೇವದುರ್ಗ (Devadurga) ತಾಲೂಕಿನ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದ್ದು, ಸದ್ಯ ಐಸಿಯುಲ್ಲಿದೆ – ಯತ್ನಾಳ್
ನಾರಾಯಣಪುರ ಜಲಾಶಯದಿಂದ ಹರಿದು ಬರುತ್ತಿರುವ ನೀರಿನಿಂದ ಕೃಷ್ಣಾ ನದಿ ತೀರದ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಸದ್ಯ ಜಲಾಶಯದಿಂದ 25 ಗೇಟ್ಗಳ ಮೂಲಕ 75 ಸಾವಿರ ಕ್ಯುಸೆಕ್ ಹೊರಹರಿವು ಇದೆ.
ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೆ ಹೂವಿನಹೆಡಗಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಸೇತುವೆ ಮುಳುಗಡೆಯಾದರೆ ದೇವದುರ್ಗದಿಂದ ಯಾದಗಿರಿ, ಕಲಬುರಗಿ ಸಂಪರ್ಕ ಕಡಿತವಾಗುತ್ತದೆ. ನಾರಾಯಣಪುರ ಜಲಾಶಯಕ್ಕೆ ಸದ್ಯ 75,000 ಕ್ಯುಸೆಕ್ ಒಳಹರಿವು ಇದ್ದು, ಜನರಿಗೆ ನದಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ