ಹರಾರೆ: ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ. ಈ ನಡುವೆ ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ನೀರಿಗೆ ಹಾಹಾಕಾರ ತಲೆದೂರಿದೆ. ಹಾಗಾಗಿ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಟೀಂ ಇಂಡಿಯಾ ಆಟಗಾರರು ನೀರನ್ನು ಮಿತವಾಗಿ ಬಳಸುವಂತೆ ಸೂಚಿಸಿದೆ.
ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ಕಳೆದ ಒಂದು ವರ್ಷದಿಂದ ನೀರಿನ ಸಮಸ್ಯೆ ತಲೆದೂರಿದೆ. ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಈ ನಡುವೆ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಜಿಂಬಾಬ್ವೆಯ ಹರಾರೆಯಲ್ಲಿದೆ. ಮೂರು ಏಕದಿನ ಪಂದ್ಯ ಕೂಡ ಹರಾರೆಯಲ್ಲಿ ನಡೆಯುತ್ತಿದೆ. ಇದೀಗ ಅಟಗರರು ಹರಾರೆಯ ಹೋಟೆಲ್ ಒಂದರಲ್ಲಿ ತಂಗಿದ್ದು, ಅಲ್ಲಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು ವೇಸ್ಟ್ ಮಾಡಬೇಡಿ ಎಂದು ಆಟಗಾರರಿಗೆ ಖಡಕ್ ಸೂಚನೆ ನೀಡಿದೆ. ಇದನ್ನೂ ಓದಿ: ಫಿಫಾ ಭಾರತವನ್ನು ಅಮಾನುತು ಮಾಡಿದ್ದು ಯಾಕೆ? – ನಡೆಯುತ್ತಾ ಮಹಿಳಾ ವಿಶ್ವಕಪ್?
ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 18, 20, 22 ರಂದು ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಕನ್ನಡಿಗ ಕೆ.ಎಲ್ ರಾಹುಲ್ ಸಾರಥ್ಯದ ಟೀಂ ಇಂಡಿಯಾ ಹರಾರೆಯಲ್ಲಿ ಅಭ್ಯಾಸ ಆರಂಭಿಸಿದೆ. ಇದನ್ನೂ ಓದಿ: ಮೋದಿ, ಶಾ ಜೊತೆ ಗಂಗೂಲಿ ಚರ್ಚೆ – ರಾಜಕೀಯ ಇನ್ನಿಂಗ್ಸ್ ಆಡ್ತಾರಾ ದಾದಾ?
Live Tv
[brid partner=56869869 player=32851 video=960834 autoplay=true]