Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಗೂ `ಸಾರಿಗೆ’ ಸೊಪ್ಪು ಹಾಕಿದ ಸರ್ಕಾರ – ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊನೆಗೂ `ಸಾರಿಗೆ’ ಸೊಪ್ಪು ಹಾಕಿದ ಸರ್ಕಾರ – ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

Bengaluru City

ಕೊನೆಗೂ `ಸಾರಿಗೆ’ ಸೊಪ್ಪು ಹಾಕಿದ ಸರ್ಕಾರ – ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

Public TV
Last updated: December 29, 2024 10:05 pm
Public TV
Share
3 Min Read
KSRTC 2
SHARE

– ಸಂಕ್ರಾಂತಿ ಬಳಿಕ ಮಾತುಕತೆ ಈಡೇರಿಸುವುದಾಗಿ ಸರ್ಕಾರ ಭರವಸೆ

ಬೆಂಗಳೂರು: ಡಿ.31ರಂದು ನಡೆಯಬೇಕಿದ್ದ ಅನಿರ್ದಿಷ್ಟಾವಧಿ `ಸಾರಿಗೆ’ ಮುಷ್ಕರಕ್ಕೆ ಕೊನೆಗೂ ಸರ್ಕಾರ `ಸೊಪ್ಪು’ ಹಾಕಿದೆ. ಸಕ್ರಾಂತಿ ಬಳಿಕ ಚರ್ಚಿಸಿ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರಿಂದ ಮುಷ್ಕರ ಮುಂದೂಡಿಕೆಯಾಗಿದೆ.

ಮಂಗಳವಾರ ನಡೆಯಬೇಕಿದ್ದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರವನ್ನು ಮುಂದೂಡಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಜಂಟಿ ಕ್ರಿಯಾ ಸಮಿತಿಯಿಂದ ಆದೇಶ ಪ್ರಕಟಿಸಿದೆ. ಮುಷ್ಕರಕ್ಕೆ ಬೆಂಬಲ ನೀಡಿದ್ದ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಆದೇಶ ಪ್ರಕಟಿಸಲಾಗಿದೆ. ಸಭೆಗೂ ಮುನ್ನ ವೇತನ ಪರಿಷ್ಕರಣೆಗೆ ಸಿಎಂ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಹೇಳಿದ್ದರು.

ಇತ್ತೀಚೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಾರಿಗೆ ಇಲಾಖೆಗಳ ಸ್ಥಿತಿಗತಿ ಕುರಿತು ಸಭೆ ನಡೆದಿತ್ತು. ಈ ಸಭೆಯಲ್ಲಿ ಸಾರಿಗೆ ಇಲಾಖೆಗೆ 3,650 ಕೋಟಿ ರೂ. ಹೊರೆಯಾಗುತ್ತಿದೆ ಎಂದು ಸಾರಿಗೆ ಅಧಿಕಾರಿಗಳು ಅಳಲು ತೋಡಿಕೊಂಡಿದ್ದರು. ನಷ್ಟ ಪರಿಹಾರಕ್ಕೆ ಶೇ.15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಅದರಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ ಮಾಡಲಾಗಿತ್ತು. ಆದರೆ 15% ಪ್ರಮಾಣದಲ್ಲಿ ದರ ಪರಿಷ್ಕರಣೆಯಾದರೂ ನಿಗಮಗಳು ಇನ್ನೂ 1,800 ಕೋಟಿ ನಷ್ಟ ಅನುಭವಿಸುತ್ತವೆ ಎಂಬ ಮಾಹಿತಿ ಅಧಿಕಾರಿಗಳು ನೀಡಿದ್ದರು.

ರಾಜ್ಯದಲ್ಲಿರುವ ಬಸ್‌ಗಳೆಷ್ಟು?
* ರಾಜ್ಯದ ಸಾರಿಗೆ ಇಲಾಖೆಯಲ್ಲಿರೋ ಒಟ್ಟು ಬಸ್‌ಗಳ ಸಂಖ್ಯೆ -24,000
* ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಖ್ಯೆ- 8,116
* ಬಿಎಂಟಿಸಿ ಬಸ್ ಗಳ ಸಂಖ್ಯೆ-6,688
* ವಾಯುವ್ಯ ಕರ್ನಾಟಕ ಬಸ್ ಗಳ ಸಂಖ್ಯೆ- 4,858
* ಕಲ್ಯಾಣ ಕರ್ನಾಟಕ ಬಸ್ ಗಳ ಸಂಖ್ಯೆ-4,327

ಬಂದ್‌ಗೆ ಬೆಂಬಲಿಸದ್ದ ಸಂಘಟನೆಗಳು
* ಕೆಎಸ್‌ಆರ್‌ಟಿಸಿ ಸ್ಟಾಫ್ ಆಂಡ್ ವರ್ಕಸ್ ಫೆಡರೇಶನ್
* ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ
* ರಾಜ್ಯ ಸಿಐಟಿಯು
* ಬಿಎಂಎಸ್
* ಪರಿಶಿಷ್ಟ ನೌಕರರ ಸಂಘ
* ಸಾರಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘ
* ರಾಜ್ಯ ಸಾರಿಗೆ ಸಂಸ್ಥೆ ನೌಕರರ ಸಂಘ
* ಅಖಂಡ ಕರ್ನಾಟಕ ರಾಜ್ಯ ಸಾರಿಗೆ ಕಾರ್ಮಿಕ ಮಹಾಮಂಡಳಿ
* ರಾಜ್ಯ ರಸ್ತೆ ಸಾರಿಗೆ ನೌಕಕರ ಕೂಟ
* ಕೆಬಿಎನ್‌ಎನ್ ವರ್ಕರ್ಸ್ ಫೆಡರೇಷನ್
* ಕೆಎಸ್‌ಆರ್‌ಟಿಸಿ ನಿಗಮಗಳ ಎಸ್‌ಸಿ-ಎಸ್‌ಟಿ ನೌಕಕರ ಕ್ಷೇಮಾಭಿವೃದ್ಧಿ ಸಂಘ
* ಕರಾರಸಾಸಂಸ್ಥೆ ಎಸ್ಸಿ,ಎಸ್‌ಟಿ ಅಧಿಕಾರಿಗಳ ಮತ್ತು ನೌಕರರ ಸಮನ್ವಯ ಸಮಿತಿ
* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿಕಲಚೇತನ ನೌಕರರ ಸಂಘ

ಸಾರಿಗೆ ನೌಕರರ ಬೇಡಿಕೆಗಳೇನು?
* 01-01-2020ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸಬೇಕು
* ಸದ್ಯ ನೌಕರರು ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡಬೇಕು
* ಎಲ್ಲಾ ನೌಕರರಿಗೂ ಪ್ರತೀ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ರೂಪಾಯಿ ಜೊತೆಗೆ ಉಚಿತ ಔಷಧಿ ನೀಡಬೇಕು
* ಇಎಸ್‌ಐ ಮಾದರಿಯಲ್ಲಿ ನೌಕರರ ಮೂಲ ವೇತನದ ಶೇ.4.5 ಹಾಗೂ ನೌಕರರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕೊಡುವ ಯೋಜನೆ ರೂಪಿಸಬೇಕು
* ನಿವೃತ್ತ ನೌಕರರು ಮತ್ತು ಅವರ ಪತಿ/ಪತ್ನಿ ಹಾಗೂ ಮಕ್ಕಳಿಗೂ ಆರೋಗ್ಯ ಯೋಜನೆ ನೀಡಬೇಕು
* ನಗದು ರಹಿತ ಆರೋಗ್ಯ ಚಿಕಿತ್ಸೆ ಯೋಜನೆಯನ್ನು ಏಕಕಾಲದಲ್ಲಿ 4 ನಿಗಮಗಳಲ್ಲಿ ಜಾರಿಗೆ ತರಬೇಕು
* ವಿದ್ಯುತ್ ಚಾಲಿತ ಬಸ್ಸುಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿಯನ್ನು ಕೈಬಿಡಬೇಕು
* ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಯೇ ವಿದ್ಯುಚ್ಚಾಲಿತ ಬಸ್ಸುಗಳ ನಿರ್ವಹಣೆ ಮಾಡಬೇಕು
* ಹೊರ ಗುತ್ತಿಗೆ ಆಧಾರದ ಮೇಲೆ ಚಾಲಕ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿಯನ್ನು ಕೈಬಿಡಬೇಕು

ಸರ್ಕಾರ ಏನು ಮಾಡಿದೆ, ಭರವಸೆ ಏನು?
* 2020ರ ಜನವರಿ 1ರಿಂದ 2023ರ ಫೆಬ್ರುವರಿ 28ರ ವರೆಗೆ ಸಂಸ್ಥೆಗಳಿಂದ ನಿವೃತ್ತರಾದ 11,694 ಜನರಿಗೆ ವಿತರಿಸಲು ಸರ್ಕಾರ 224.05 ಕೋಟಿ ಬಿಡುಗಡೆ ಮಾಡಿದೆ.
* ಆರ್‌ಟಿಜಿಎಸ್ ಹಾಗೂ ಚೆಕ್ ಮೂಲಕ ಹಿಂಬಾಕಿ ವಿತರಿಸುವ ಕಾರ್ಯ ನಡೆಯುತ್ತಿದೆ.
* ನಾಲ್ಕೂ ಸಾರಿಗೆ ನಿಗಮಗಳ 1,308 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಯ ಅಂತರ ನಿಗಮ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ
* ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು
* ಸದ್ಯ ಶಕ್ತಿ ಯೋಜನೆಯಿಂದ ನಿಗಮಗಳ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ, ಸರ್ಕಾರದ ಅನುದಾನ ಬರಬೇಕಿದೆ

TAGGED:BMTCKarnataka GovernmentksrtcRamalinga reddysiddaramaiahTransport Employeesಕರ್ನಾಟಕ ಸರ್ಕಾರಕೆಎಸ್‍ಆರ್‍ಟಿಸಿಬಿಎಂಟಿಸಿರಾಮಲಿಂಗಾ ರೆಡ್ಡಿಸಾರಿಗೆ ನೌಕರರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
5 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
6 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
6 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
7 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
7 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?