ಬಾಗಲಕೋಟೆ: ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ (Meghraj Gudatti) ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ (National Flag) ಮತ್ತು ಚಂದ್ರಯಾನ-3 (Chandrayaan-3) ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ನಾನು ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ ಮೂಲಕ ಇಸ್ರೋ ವಿಜ್ಞಾನಿಗಳಿಗೆ (ISRO Scientist) ಗೌರವ ಸಲ್ಲಿಸಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ. ಇದನ್ನೂ ಓದಿ: ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಲ ವಾಂತಿ ವಶ – ಇಬ್ಬರು ಅರೆಸ್ಟ್
ದೇಶದಲ್ಲೇ ಪ್ರಖ್ಯಾತಿ ಹಾಗೂ ಪ್ರಸಿದ್ದಿಯನ್ನು ಪಡೆದಿರುವ ಇಳಕಲ್ ಸೀರೆಯ (Ilkal Saree) ಮೇಲೆ ಮೇಘರಾಜ್ ಅವರು ಕಲಾ ನೈಪುಣ್ಯ ಪ್ರದರ್ಶಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಅಯೋಧ್ಯೆಯ ರಾಮಮಂದಿರದ (Ram mandir) ಅಡಿಗಲ್ಲು ಹಾಕುವಾಗ ಸೀರೆಯಲ್ಲಿ ರಾಮಮಂದಿರದ ನೀಲನಕ್ಷೆಯನ್ನು ಬಿಡಿಸಿ ಅಭಿಮಾನ ಮೆರೆದಿದ್ದರು.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಕೊನೆಯ ಜೇಮ್ಸ್ (James) ಚಿತ್ರಕ್ಕೆ ವಿಶೇಷ ಶುಭಾಶಯಗಳನ್ನು ಕೋರಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದ್ದರು. ಅಲ್ಲದೇ ಕಾಂತಾರ (Kantara) ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗಲಿ ಎಂದು ಸೀರೆಯಲ್ಲಿ ಶುಭ ಕೋರಿದ್ದರು.
Web Stories