ನವದೆಹಲಿ: ರಷ್ಯಾದ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್ ರಾಜಧಾನಿ ಕೀವ್ ಅನ್ನು ಈಗಿಂದೀಗಲೇ ತೊರೆಯಿರಿ ಎಂದು ಭಾರತ ಮೂಲದ ನಾಗರಿಕರಿಗೆ ರಾಯಭಾರಿ ಕಚೇರಿ ತಿಳಿಸಿದೆ.
ಉಕ್ರೇನ್ ರಾಜಧಾನಿಯಲ್ಲಿರುವ ಭಾರತೀಯ ಮೂಲದವರು ಈ ಕೂಡಲೇ ಕೀವ್ ಅನ್ನು ತೊರೆಯಿರಿ. ರೈಲು ಅಥವಾ ಇನ್ನಿತರ ಲಭ್ಯ ಸಾರಿಗೆ ವ್ಯವಸ್ಥೆ ಮೂಲಕ ರಾಜಧಾನಿಯಿಂದ ಹೊರಡಿ ಎಂದು ಉಕ್ರೇನ್ನಲ್ಲಿರುವ ಭಾರತ ರಾಯಭಾರಿ ಕಚೇರಿ ಟ್ವೀಟ್ ಮಾಡಿ ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ
- Advertisement 2
- Advertisement 3
ಕೀವ್ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾ ಸೇನಾ ವಾಹನಗಳಿರುವ ಉಪಗ್ರಹ ಚಿತ್ರಗಳು ಬಿಡುಗಡೆಯಾದ ಕೆಲವೇ ಗಂಟೆಗಳ ನಂತರ ಈ ಸಲಹೆಯನ್ನು ಪೋಸ್ಟ್ ಮಾಡಲಾಗಿದೆ. ಯುಎಸ್ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಚಿತ್ರಗಳಲ್ಲಿ ನೂರಾರು ಟ್ಯಾಂಕ್ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಮತ್ತು ಲಾಜಿಸ್ಟಿಕ್ ವಾಹನಗಳಿವೆ. ಕೀವ್ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಹೆಚ್ಚಿನ ದಾಳಿಯಾಗಿ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ.
- Advertisement 4
Advisory to Indians in Kyiv
All Indian nationals including students are advised to leave Kyiv urgently today. Preferably by available trains or through any other means available.
— India in Ukraine (@IndiainUkraine) March 1, 2022
ಯುದ್ಧಪೀಡಿತ ರಾಷ್ಟ್ರ ಉಕ್ರೇನ್ನಲ್ಲಿ 16,000 ವಿದ್ಯಾರ್ಥಿಗಳು ಸಿಲುಕಿದ್ದಾರೆ. ಉಕ್ರೇನ್ ಬಂಕರ್ಗಳು, ಮೆಟ್ರೋ ನಿಲ್ದಾಣಗಳು, ಬಾಂಬ್ ಸೆಲ್ಟರ್ಗಳಲ್ಲಿ ಅಡಗಿರುವ ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೇಡಿಕೆ ಇಡುತ್ತಿರುವ ಫೋಟೋ, ವೀಡಿಯೋಗಳನ್ನು ಶೇರ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್ಗೆ ಸಿದ್ಧಳಿದ್ದೇನೆ: ಮಾಡೆಲ್
ಇದುವರೆಗೆ 8,000 ಭಾರತೀಯರನ್ನು ಉಕ್ರೇನ್ನಿಂದ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಉಕ್ರೇನ್ನ ಪೂರ್ವ ಭಾಗಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ.