Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯ ಎಸೆತದಲ್ಲಿ ಭಾರತಕ್ಕೆ ಏಷ್ಯಾಕಪ್ – ಥ್ರಿಲ್ಲಿಂಗ್ 4 ಓವರ್ ಹೀಗಿತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊನೆಯ ಎಸೆತದಲ್ಲಿ ಭಾರತಕ್ಕೆ ಏಷ್ಯಾಕಪ್ – ಥ್ರಿಲ್ಲಿಂಗ್ 4 ಓವರ್ ಹೀಗಿತ್ತು

Latest

ಕೊನೆಯ ಎಸೆತದಲ್ಲಿ ಭಾರತಕ್ಕೆ ಏಷ್ಯಾಕಪ್ – ಥ್ರಿಲ್ಲಿಂಗ್ 4 ಓವರ್ ಹೀಗಿತ್ತು

Public TV
Last updated: September 29, 2018 2:21 am
Public TV
Share
3 Min Read
asia cup final idnia win
SHARE

ದುಬೈ: ಥ್ರಿಲ್ಲಿಂಗ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 3 ವಿಕೆಟ್ ಗಳ ಜಯವನ್ನು ಗಳಿಸಿ ಟೀಂ ಇಂಡಿಯಾ 7ನೇ ಬಾರಿ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ.

223 ರನ್ ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾಗೆ ಕೊನೆಯ 28 ಎಸೆತದಲ್ಲಿ 26 ರನ್ ಗಳಿಸಬೇಕಿತ್ತು. ಈ ಸಂದರ್ಭದಲ್ಲಿ ಭುವನೇಶ್ವರ್ ಕುಮಾರ್ ಸಿಕ್ಸರ್ ಅಟ್ಟಿ ರನ್ ಅಂತರವನ್ನು ಸ್ವಲ್ಪ ಕಡಿಮೆ ಮಾಡಿದರು. 47ನೇ ಓವರ್ ನಲ್ಲಿ 5 ರನ್ ಬಂದಿದ್ದರೆ, 48ನೇ ಓವರ್ ನ ಎರಡನೇ ಎಸೆತದಲ್ಲಿ ಜಡೇಜಾ ಔಟಾದರು. ಈ ವೇಳೆ ಮತ್ತೆ ಕ್ರೀಸಿಗೆ ಗಾಯಗೊಂಡು ಹೊರ ನಡೆದಿದ್ದ ಕೇದಾರ್ ಜಾದವ್ ಆಗಮಿಸಿದರು. ಈ ಓವರ್ ನಲ್ಲಿ ಕೇವಲ 4 ರನ್ ಬಂತು.

ಕೊನೆಯ 12 ಎಸೆತದಲ್ಲಿ 9 ರನ್ ಗಳಿಸಬೇಕಾದ ಅನಿವಾರ್ಯತೆ. ಮುಸ್ತಫೀಜುರ್ ಎಸೆದ ಮೊದಲ ಎಸೆತದಲ್ಲಿ ಭುವನೇಶ್ವರ್ ಔಟ್ ಆದರು. ಈ ಓವರ್ ನ ಮೂರು ಎಸೆತದಲ್ಲಿ ರನ್ ಗಳಿಸುವ ಅವಕಾಶವಿದ್ದರೂ ಕೇದಾರ್ ಜಾದವ್ ಯಾವುದೇ ರನ್ ಗಳಿಸಲಿಲ್ಲ. ಕೊನೆಯ ಬಾಲಿನಲ್ಲಿ 2 ರನ್ ಓಡಿದ ಪರಿಣಾಮ ಕೊನೆಯ ಓವರ್ ನಲ್ಲಿ 6 ರನ್ ಬೇಕಿತ್ತು.

team india asia cup

ಕೊನೆಯ ಓವರ್ ಎಸೆಯಲು ಬಂದವರು ಮಹಮದುಲ್ಲಾ. ಮೊದಲ ಎಸೆತದಲ್ಲಿ 1 ರನ್ ಬಂದರೆ, ಎರಡನೇ ಎಸೆತದಲ್ಲಿ ಕೇದಾರ್ ಜಾದವ್ 1 ರನ್ ಹೊಡೆದರು. ಮೂರನೇ ಎಸೆತದಲ್ಲಿ ಕುಲದೀಪ್ ಯಾದವ್ 2 ರನ್ ಹೊಡೆದರು. ಕೊನೆಗೆ ಮೂರು ಎಸೆತದಲ್ಲಿ 2 ರನ್ ಗಳಿಸಬೇಕಾದ ಒತ್ತಡ. ನಾಲ್ಕನೇಯ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. 5ನೇ ಎಸೆತದ ವೇಳೆ ಕುಲದೀಪ್ ಯಾದವ್  ಒಂದು ರನ್ ಓಡಿದರು. ಈ ವೇಳೆ ರನ್ ಔಟ್ ಆಗುವ ಅವಕಾಶ ಇತ್ತು. ಕೊನೆಯ ಒಂದು ಎಸೆತದಲ್ಲಿ 1 ರನ್ ಗಳಿಸಬೇಕಿತ್ತು. ಈ ವೇಳೆ ಕೇದಾರ್ ಜಾದವ್ ಕೊನೆಯ ಎಸೆತವನ್ನು ಫೈನ್ ಲೆಗ್ ಕಡೆಗೆ ತಿರುಗಿಸಿ ಒಂದು ರನ್ ಗಳಿಸುವ ಮೂಲಕ ಭಾರತಕ್ಕೆ ಜಯವನ್ನು ತಂದುಕೊಟ್ಟರು.

36.5 ಓವರ್ ವೇಳೆ 160 ರನ್ ಗಳಿಸಿದ್ದಾಗ ಧೋನಿ ಓಟಾದಾಗ ಭಾರತ ಸೋಲುತ್ತಾ ಎನ್ನುವ ಪ್ರಶ್ನೆ ಮೂಡಿತ್ತು. ಆದರೆ ರವಿಂದ್ರ ಜಡೇಜಾ ಮತ್ತು ಭುವನೇಶ್ವರ್ ಕುಮಾರ್ 6ನೇ ವಿಕೆಟ್ ಗೆ 45  ರನ್ ಗಳ ಜೊತೆಯಾಟವಾಡಿ ತಂಡವನ್ನು ಗೆಲುವಿನ ಸಮೀಪ ತಂದಿಟ್ಟಿದ್ದರು.

kedhar jadhav

ಯಾರು ಎಷ್ಟು ರನ್?
ರೋಹಿತ್ ಶರ್ಮಾ 48, ಶಿಖರ್ ಧವನ್ 15, ದಿನೇಶ್ ಕಾರ್ತಿಕ್ 37, ಧೋನಿ 36, ಕೇದಾರ್ ಜಾಧವ್ ಔಟಾಗದೇ 23, ರವೀಂದ್ರ ಜಡೇಜಾ 23, ಭುವನೇಶ್ವರ್ ಕುಮಾರ್ 21 ರನ್ ಗಳಿಸಿದರು.

ಸಾಧಾರಣ ಮೊತ್ತ:
ಆರಂಭದಲ್ಲಿ ಉತ್ತಮ ಆರಂಭ ಪಡೆದರೂ ನಂತರ ಭಾರತೀಯ ಬೌಲರ್ ಗಳ ಉತ್ತಮ ಪ್ರದರ್ಶನದಿಂದ ಬಾಂಗ್ಲಾದೇಶ 48.3 ಓವರ್ ಗಳಲ್ಲಿ 222 ರನ್ ಗಳಿಗೆ ಆಲೌಟ್ ಆಗಿತ್ತು. ಒಂದು ಹಂತದಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೇ 120 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ 31 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡ ಪರಿಣಾಮ ಸಾಧಾರಣ ಮೊತ್ತ ಪೇರಿಸಿತ್ತು. ಧೋನಿ ಈ ಪಂದ್ಯದಲ್ಲಿ 2 ಸ್ಟಂಪ್ ಮಾಡಿ ಬಾಂಗ್ಲಾ ರನ್ ಗೆ ಕಡಿವಾಣ ಹಾಕಿದ್ದರು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾ ತಂಡಕ್ಕೆ ಮೊದಲ ವಿಕೆಟ್ ಗೆ ಲಿಟನ್ ದಾಸ್ ಮತ್ತು ಮೆಹಿದಿ ಹಸನ್ ಮಿರಜ್ 20.5 ಓವರ್ ಗಳಲ್ಲಿ 120 ರನ್ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾಕಿದರು. ಮೆಹಿದಿ 32 ರನ್(59 ಎಸೆತ, 3 ಬೌಂಡರಿ) ಗಳಿಸಿದ್ದಾಗ ಕ್ಯಾಚ್ ನೀಡಿ ಔಟಾಗಿದ್ದೆ ತಡ ಬಾಂಗ್ಲಾದ ಕುಸಿತ ಆರಂಭವಾಯಿತು. ನಂತರ ಬಂದ ಇಮ್ರಾಲ್ 2 ರನ್, ಮುಷ್ಫಿಕರ್ ರಹೀಂ 5 ರನ್, ಮೊಹಮ್ಮದ್ ಮಿಥುನ್ 2 ರನ್, ಮೊಹಮ್ಮದುಲ್ಲ 4 ರನ್ ಗಳಿಸಿ ಔಟಾದರು.

DHONI 1

ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ 107 ಎಸೆತದಲ್ಲಿ ಮೊದಲ ಶತಕ ಸಿಡಿಸಿದ ಲಿಟನ್ ದಾಸ್ ಅಂತಿಮವಾಗಿ 121 ರನ್(117 ಎಸೆತ, 12 ಬೌಂಡರಿ, 2 ಸಿಕ್ಸರ್) ಸಿಡಿಸಿ ಔಟಾದರು. ಕುಲ್ದೀಪ್ ಯಾದವ್ ಬೌಲಿಂಗ್ ನಲ್ಲಿ ಧೋನಿ ಸ್ಟಂಪ್ ಮಾಡಿ ಲಿಟನ್ ದಾಸ್ ಅವರನ್ನು ಔಟ್ ಮಾಡಿದರು.

ಮಧ್ಯಮ ಕ್ರಮಾಂಕದಲ್ಲಿ ಸೌಮ್ಯಾ ಸರ್ಕಾರ್ ಸ್ವಲ್ಪ ಪ್ರತಿರೋಧ ತೋರಿದ ಕಾರಣ ಬಾಂಗ್ಲಾ ಮೊತ್ತ 200ರ ಗಡಿ ದಾಟಿತು. ಸೌಮ್ಯಾ ಸರ್ಕಾರ್ 33 ರನ್(45 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿ ಔಟಾದರು. ಕುಲ್ದೀಪ್ ಯಾದವ್ 3 ಪಡೆದು ಮಿಂಚಿದರೆ ಕೇದಾರ್ ಜಾದವ್ 2, ಜಸ್ ಪ್ರೀತ್ ಬುಮ್ರಾ ಮತ್ತು ಚಹಲ್ 1 ವಿಕೆಟ್ ಕಿತ್ತರು.

ಶತಕ ಹೊಡೆದ ಲಿಟನ್ ದಾಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದರೆ, ಶಿಖರ್ ಧವನ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

dhoni kuldeep

TAGGED:asia cupAsia Cup Finalbangladeshcricketindiaಏಷ್ಯಾ ಕಪ್ಕ್ರಿಕೆಟ್ದುಬೈಧೋನಿಪಬ್ಲಿಕ್ ಟಿವಿಬಾಂಗ್ಲಾದೇಶ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
2 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
24 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
42 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
43 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
60 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?