Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

India China Border Rowː ಚೀನಾ ಗಡಿ ಸಂಘರ್ಷ – ಕೇಂದ್ರದ ನಡೆ ಅತ್ಯಂತ ಅಪಾಯಕಾರಿ ಎಂದ ರಾಗಾ

Public TV
Last updated: January 30, 2023 9:21 am
Public TV
Share
2 Min Read
Rahul Gandi
SHARE

ಶ್ರೀನಗರ: ಚೀನಾ ಗಡಿ ಸಂಘರ್ಷ ವಿಚಾರದಲ್ಲಿ (India China Border Row) ಭಾರತ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ವಿಧಾನ ಅತ್ಯಂತ ಅಪಾಯಕಾರಿಯಾಗಿದೆ. ಇದು ಚೀನಾ ತನ್ನ ಆಕ್ರಮಣಕಾರಿ ಕೆಲಸಗಳನ್ನ ಮುಂದುವರಿಸಲು ಆತ್ಮವಿಶ್ವಾಸ ಹೆಚ್ಚಿಸುವಂತೆ ಮಾಡುತ್ತದೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್‌ಗಾಂಧಿ (Rahul Gandhi) ಎಚ್ಚರಿಸಿದ್ದಾರೆ.

India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು - ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

ಚೀನಾ ಗಡಿ ಸಂಘರ್ಷದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ (S Jaishankar) ಸ್ಪಷ್ಟನೆ ನೀಡಿದ ಒಂದು ದಿನದ ನಂತರ ರಾಹುಲ್ ಹಾಂಧಿ ಮತ್ತೊಮ್ಮೆ ಲಡಾಖ್‌ನ (Ladakh) ವಿಷಯ ಪ್ರಸ್ತಾಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗಾಂಧಿ, ಲಡಾಖ್‌ನ ಸುಮಾರು 2 ಸಾವಿರ ಚದರ ಕಿ.ಮೀ ಭಾರತೀಯ ಭೂಭಾಗವು ಚೀನಾದ ವಶದಲ್ಲಿದೆ ಎಂದು ಒತ್ತಿ ಹೇಳಿದ್ದಾರೆ.

India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು - ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

ಚೀನಿಯರು ಭಾರತದ ಯಾವುದೇ ಭೂಪ್ರದೇಶವನ್ನ ವಶಪಡಿಸಿಕೊಂಡಿಲ್ಲ ಅನ್ನೋ ಅನಿಸಿಕೆ ದೇಶಕ್ಕೆ ಇದೆ. ಇದರೊಂದಿಗೆ ಚೀನಿಯರು ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬುದನ್ನ ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ (Government Of India) ಅನುಸರಿಸುತ್ತಿರುವ ವಿಧಾನ ಅತ್ಯಂತ ಅಪಾಯಕಾರಿಯಾಗಿದೆ. ಇದು ಚೀನಾ ತನ್ನ ಆಕ್ರಮಣಕಾರಿ ಕೆಲಸಗಳನ್ನ ಮುಂದುವರಿಸಲು ಆತ್ಮವಿಶ್ವಾಸ ಹೆಚ್ಚಿಸಿದಂತೆ ಮಾಡಿದೆ ಎಂದಿದ್ದಾರೆ.

ಈ ವಿಚಾರದಲ್ಲಿ ಚೀನಿಯರೊಂದಿಗೆ ದೃಢವಾಗಿ ವ್ಯವಹರಿಸಬೇಕು ಹಾಗೂ ನಮ್ಮ ನೆಲದ ಮೇಲೆ ಕುಳಿತಿರೋದನ್ನ ನಾವು ಸಹಿಸೋದಿಲ್ಲ ಎಂಬುದನ್ನು ಸ್ಪಷ್ಟಪಡಿಸುವ ಮೂಲಕ ಚೀನಿಯರೊಂದಿಗೆ ವ್ಯವಹರಿಸಬೇಕು ಎಂದು ರಾಹುಲ್ ಸಲಹೆ ನೀಡಿದ್ದಾರೆ. ಇದನ್ನೂ ಓದಿ: India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು – ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು - ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

ನಾನು ಇತ್ತೀಚೆಗೆ ಕೆಲವು ಮಾಜಿ ಸೈನಿಕರನ್ನ ಭೇಟಿ ಮಾಡಿದ್ದೇನೆ. ಲಡಾಖ್‌ನ ನಿಯೋಗವೂ 2 ಸಾವಿರ ಚದರ ಕೀ.ಮೀ. ಭಾರತೀಯ ಭೂಪ್ರದೇಶವನ್ನ ಚೀನೀಯರು ವಶಪಡಿಸಿಕೊಂಡಿದ್ದಾರೆ ಎಂಬುದನ್ನ ಸ್ಪಷ್ಟವಾಗಿ ಹೇಳಿದ್ದಾರೆ. ಭಾರತೀಯ ಭೂಪ್ರದೇಶದಲ್ಲಿದ್ದ ಹಲವು ಗಸ್ತು ಕೇಂದ್ರಗಳು ಚೀನಿಯರ ವಶದಲ್ಲಿವೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಚೀನಾ ಈಗಾಗಲೇ `ನೀವು ಏನು ಮಾಡುತ್ತಿದ್ದೀರಿ ಎಂಬುದರ ಬಗ್ಗೆ ಜಾಗರೂಕರಾಗಿರಿ, ಏಕೆಂದರೆ ನಾವು ನಿಮ್ಮ ಭೌಗೋಳಿಕತೆಯನ್ನು ಬದಲಾಯಿಸುತ್ತೇವೆ, ಲಡಾಖ್ ಪ್ರವೇಶಿಸುತ್ತೇವೆ, ನಾವು ಅರುಣಾಚಲ ಪ್ರದೇಶವನ್ನ ಪ್ರವೇಶ ಮಾಡ್ತೀವಿ’ ಎಂದು ಎಚ್ಚರಿಕೆ ನೀಡಿದೆ. ಇದನ್ನ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕಮಲ್ ಹಾಸನ್ ಅವರೊಂದಿಗಿನ ಸಂಭಾಷಣೆಯಲ್ಲಿ ಚರ್ಚಿಸಲಾಗಿತ್ತು.

India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು - ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

ಜೈಶಂಕರ್ ಹೇಳಿದ್ದೇನು?
ಭಾನುವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಚೀನಾ ಗಡಿ ಸಂಘರ್ಷ ವಿಚಾರದಲ್ಲಿ ರಾಹುಲ್‌ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ್ದರು. ಇದನ್ನೂ ಓದಿ: ಶ್ರೀಕೃಷ್ಣ, ಹನುಮಂತ ಇಬ್ಬರೂ ಶ್ರೇಷ್ಠ ರಾಜತಾಂತ್ರಿಕರು: ಜೈಶಂಕರ್‌

India-China Border Row: 1962ರಲ್ಲೇ ಚೀನಾ ಭೂಪ್ರದೇಶ ಆಕ್ರಮಿಸಿತ್ತು - ರಾಗಾ ಟೀಕೆಗೆ ಜೈಶಂಕರ್ ತಿರುಗೇಟು

ಚೀನಾ 1962ರಲ್ಲೇ ಆ ಭೂಮಿಯನ್ನ ಆಕ್ರಮಿಸಿತ್ತು. ಕೆಲವರು ರಾಜಕೀಯಕ್ಕಾಗಿ ಚೀನಾ ವಿಚಾರದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ. 1962ರ ಚೀನಾ ಗಡಿ ಸಮಸ್ಯೆ ಇತ್ತೀಚೆಗೆ ಆರಂಭವಾಗಿದ್ದು ಎನ್ನುವಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಚೀನಾ ಭೂಪ್ರದೇಶ ಆಕ್ರಮಣ ಬಗ್ಗೆ ಮಾತನಾಡುವಾಗ ಅವರು ಸತ್ಯ ಹೇಳುವುದಿಲ್ಲ. ಆ ಘಟನೆ ನಿನ್ನೆ ಆಗಿದೆ ಎಂಬ ಭಾವನೆ ಬರುವಂತೆ ಮಾತನಾಡುತ್ತಾರೆ. ಅಂತಹ ಜನರು ಉದ್ದೇಶಪೂರ್ವಕವಾಗಿ ಚೀನಾದ ಬಗ್ಗೆ ತಪ್ಪು ಮಾಹಿತಿ ಹರಡುತ್ತಾರೆ ಎಂದು ಜೈಶಂಕರ್ ವಾಗ್ದಾಳಿ ನಡೆಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:1962 China WarchinaindiaIndia China Border RowRahul Gandhis.jaishankarಎಸ್. ಜೈಶಂಕರ್ಚೀನಾ ಗಡಿ ಸಂಘರ್ಷಭಾರತ ಸರ್ಕಾರರಾಹುಲ್ ಗಾಂಧಿ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
6 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
21 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
25 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
46 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
47 minutes ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?