Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

Latest

ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

Public TV
Last updated: October 28, 2025 9:35 pm
Public TV
Share
2 Min Read
Droupadi Murmu ISA New delhi
SHARE

– ಸೌರಶಕ್ತಿ ವಿದ್ಯುತ್ ಉತ್ಪಾದನೆ ಜತೆಗೆ ಸಬಲೀಕರಣ-ಸಮಗ್ರ ಅಭಿವೃದ್ಧಿಗೆ ಪೂರಕ
– ಅಂತಾರಾಷ್ಟ್ರೀಯ ಸೌರ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ

ನವದೆಹಲಿ: ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಶ್ಲಾಘಿಸಿದರು.

ನವದೆಹಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸೌರ ಒಕ್ಕೂಟದ (International Solar Alliance Assembly) 8ನೇ ಅಧಿವೇಶನವನ್ನು ಉದ್ಘಾಟಿಸಿ, ಹವಾಮಾನ ಬದಲಾವಣೆ ಎದುರಿಸಲು ಇಂದು ತುರ್ತು ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಸೌರಶಕ್ತಿ ಅಳವಡಿಕೆ ಮತ್ತು ಬಳಕೆ ಮೂಲಕ ಈ ಜಾಗತಿಕ ಸವಾಲೆದುರಿಸುವಲ್ಲಿ ಐಎಸ್‌ಎ ಮಹತ್ವದ ಪಾತ್ರವಹಿಸಿದೆ ಎಂದು ಪ್ರತಿಪಾದಿಸಿದರು.

ಸೌರಶಕ್ತಿ ವಿದ್ಯುತ್ ಉತ್ಪಾದನೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸಮಾಜ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಬಲೀಕರಣ, ಅಂತರ್ಗತ ಅಭಿವೃದ್ಧಿಗೂ ಪೂರಕವಾಗಿದೆ. ದೊಡ್ಡ ಪ್ರಮಾಣದ ಸೌರ ಸ್ಥಾಪನೆಗಳ ವಿಸ್ತರಣೆ ವೇಳೆ ಆಯಾ ಪ್ರದೇಶದ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

Droupadi Murmu ISA New delhi 2

ಸೌರಶಕ್ತಿಯನ್ನು ಘನತೆ ಮತ್ತು ಸಾಮೂಹಿಕ ಸಮೃದ್ಧಿಯ ಮೂಲವಾಗಿ ಬಳಸಿಕೊಳ್ಳುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವು ಜಗತ್ತಿಗೆ ಮತ್ತು ಭವಿಷ್ಯದ ಪೀಳಿಗೆಗೆ ಹೆಚ್ಚಿನ ಸಮರ್ಪಣಾಭಾವದಿಂದ ಕೆಲಸ ಮಾಡಬೇಕು ಎಂದು ರಾಷ್ಟ್ರಪತಿ ಕರೆ ನೀಡಿದರು.

ಭಾರತ ಮಹತ್ವದ ಮೈಲಿಗಲ್ಲು:
ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಒಂದು ಮಹತ್ವದ ಮೈಲಿಗಲ್ಲಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡುತ್ತಿದೆ. ಕೈಗೆಟುಕುವ ಮತ್ತು ಶುದ್ಧ ಇಂಧನ ಸಮುದಾಯಗಳನ್ನು ಸಬಲಗೊಳಿಸುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಮುನ್ನಡೆಸುತ್ತದೆ. ಸೌರಶಕ್ತಿ ವಿದ್ಯುತ್ ಉತ್ಪಾದನೆ ಮಾತ್ರವಲ್ಲ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗೂ ಪೂರಕವಾಗಿದೆ ಎಂದು ದ್ರೌಪದಿ ಮುರ್ಮು ಪ್ರತಿಪಾದಿಸಿದರು.

Droupadi Murmu ISA New delhi 1

ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಮತ್ತು ಎಲ್ಲಾ ಸದಸ್ಯ ರಾಷ್ಟ್ರಗಳು ಮೂಲಸೌಕರ್ಯ ಮತ್ತು ಜನಜೀವನದ ಮೇಲೆ ಕೇಂದ್ರೀಕರಿಸಬೇಕು. ಉದ್ಯೋಗ ಸೃಷ್ಟಿ, ಮಹಿಳಾ ನಾಯಕತ್ವ, ಗ್ರಾಮೀಣ ಜೀವನೋಪಾಯ ಮತ್ತು ಡಿಜಿಟಲ್ ಸೇರ್ಪಡೆಗೆ ನೆರವಾಗುವಂತೆ ಸೌರಶಕ್ತಿ ಸಾಮೂಹಿಕ ಕ್ರಿಯಾ ಯೋಜನೆ ಅಭಿವೃದ್ಧಿಪಡಿಸಬೇಕೆಂದು ರಾಷ್ಟ್ರಪತಿ ಇದೇ ವೇಳೆ ಸಲಹೆ ನೀಡಿದರು.

ಸೌರ ಪ್ರಗತಿಯನ್ನು ಮೆಗಾವ್ಯಾಟ್ ಮೂಲಕ ಮಾತ್ರವಲ್ಲದೆ ಸುಧಾರಿತ ಕುಟುಂಬಗಳ ಸಂಖ್ಯೆ ಮತ್ತು ಸಮುದಾಯಗಳ ಸಂಖ್ಯೆ ಮೂಲಕ ಅಳೆಯಬೇಕು. ತಂತ್ರಜ್ಞಾನ ಅಭಿವೃದ್ಧಿಗೆ ಗಮನ ಹರಿಸಬೇಕು. ಸೌರ ಸ್ಥಾಪನೆಗಳ ವೇಳೆ ಪರಿಸರ ಸಂರಕ್ಷಣೆ, ಹಸಿರು ಶಕ್ತಿಯತ್ತ ಗಮನಹರಿಸಿ ಪ್ರದೇಶದ ಪರಿಸರ ಸಮತೋಲನಕ್ಕೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಿಸಿದರು.

125 ಸದಸ್ಯ ರಾಷ್ಟ್ರಗಳ ಸಹಿ: ಸೌರಶಕ್ತಿಯಲ್ಲಿ ಜಾಗತಿಕ ಸಹಕಾರ ಮತ್ತು ಹೂಡಿಕೆಯನ್ನು ತ್ವರಿತಗೊಳಿಸಲು 125 ಸದಸ್ಯ ರಾಷ್ಟ್ರಗಳು ಮತ್ತು ಪಾಲುದಾರರು, ಸಹಿ ಹಾಕಿದರು. ವಿವಿಧ ದೇಶಗಳ 550ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು 30 ಸಚಿವರು, ಸಹಾಯಕ ಸಚಿವರು ಭಾಗವಹಿಸಿದ್ದರು.

TAGGED:Droupadi MurmuISANew DelhiSolar Energyದ್ರೌಪದಿ ಮುರ್ಮುನವದೆಹಲಿಸೌರಶಕ್ತಿ ವಿದ್ಯುತ್ ಉತ್ಪಾದನೆಹವಾಮಾನ ಬದಲಾವಣೆ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

Cancer Leather Items
Latest

ಶುಗರ್, ಕ್ಯಾನ್ಸರ್ ಔಷಧ, ಬೀಡಿ, ಲೆದರ್ ಉತ್ಪನ್ನ ಅಗ್ಗ – ಯಾವುದು ಇಳಿಕೆ? ಯಾವುದು ಏರಿಕೆ?

Public TV
By Public TV
13 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
17 minutes ago
Transport
Latest

ರಕ್ಷಣೆಗಿಂತಲೂ ಸಾರಿಗೆಗೆ ಹೆಚ್ಚು ಅನುದಾನ

Public TV
By Public TV
18 minutes ago
income tax returns
Latest

ಆದಾಯ ತೆರಿಗೆ ಸಲ್ಲಿಕೆಗೆ ಮಾ.31 ರ ವರೆಗೆ ಗಡುವು ವಿಸ್ತರಣೆ – ವಿಳಂಬಕ್ಕೆ 10% ದಂಡ

Public TV
By Public TV
19 minutes ago
semiconductor chips
Latest

ಸೆಮಿಕಂಡಕ್ಟರ್ ಮಿಷನ್ ವಿಸ್ತರಣೆ – 40 ಸಾವಿರ ಕೋಟಿ ರೂ. ಮೀಸಲು, ಹೆಚ್ಚುವರಿ 10 ಸಾವಿರ ಕೋಟಿ ಘೋಷಣೆ

Public TV
By Public TV
24 minutes ago
farmer agriculture
Latest

Union Budget 2026: ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?