Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

Latest

ಹವಾಮಾನ ಬದಲಾವಣೆಯ ಜಾಗತಿಕ ಸವಾಲೆದುರಿಸಲು ಭಾರತ ಬದ್ಧ: ದ್ರೌಪದಿ ಮುರ್ಮು

Public TV
Last updated: October 28, 2025 9:35 pm
Public TV
Share
2 Min Read
Droupadi Murmu ISA New delhi
SHARE

– ಸೌರಶಕ್ತಿ ವಿದ್ಯುತ್ ಉತ್ಪಾದನೆ ಜತೆಗೆ ಸಬಲೀಕರಣ-ಸಮಗ್ರ ಅಭಿವೃದ್ಧಿಗೆ ಪೂರಕ
– ಅಂತಾರಾಷ್ಟ್ರೀಯ ಸೌರ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘನೆ

ನವದೆಹಲಿ: ಹವಾಮಾನ ಬದಲಾವಣೆ ಪ್ರಪಂಚದಾದ್ಯಂತ ಪರಿಣಾಮ ಬೀರುತ್ತಿದ್ದು, ಇದನ್ನೆದುರಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಗುರಿ ಸಾಧನೆ ಮೂಲಕ ದೃಢವಾದ ಹೆಜ್ಜೆಯಿರಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಶ್ಲಾಘಿಸಿದರು.

ನವದೆಹಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸೌರ ಒಕ್ಕೂಟದ (International Solar Alliance Assembly) 8ನೇ ಅಧಿವೇಶನವನ್ನು ಉದ್ಘಾಟಿಸಿ, ಹವಾಮಾನ ಬದಲಾವಣೆ ಎದುರಿಸಲು ಇಂದು ತುರ್ತು ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಸೌರಶಕ್ತಿ ಅಳವಡಿಕೆ ಮತ್ತು ಬಳಕೆ ಮೂಲಕ ಈ ಜಾಗತಿಕ ಸವಾಲೆದುರಿಸುವಲ್ಲಿ ಐಎಸ್‌ಎ ಮಹತ್ವದ ಪಾತ್ರವಹಿಸಿದೆ ಎಂದು ಪ್ರತಿಪಾದಿಸಿದರು.

ಸೌರಶಕ್ತಿ ವಿದ್ಯುತ್ ಉತ್ಪಾದನೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸಮಾಜ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಸಬಲೀಕರಣ, ಅಂತರ್ಗತ ಅಭಿವೃದ್ಧಿಗೂ ಪೂರಕವಾಗಿದೆ. ದೊಡ್ಡ ಪ್ರಮಾಣದ ಸೌರ ಸ್ಥಾಪನೆಗಳ ವಿಸ್ತರಣೆ ವೇಳೆ ಆಯಾ ಪ್ರದೇಶದ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದರು.

Droupadi Murmu ISA New delhi 2

ಸೌರಶಕ್ತಿಯನ್ನು ಘನತೆ ಮತ್ತು ಸಾಮೂಹಿಕ ಸಮೃದ್ಧಿಯ ಮೂಲವಾಗಿ ಬಳಸಿಕೊಳ್ಳುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವು ಜಗತ್ತಿಗೆ ಮತ್ತು ಭವಿಷ್ಯದ ಪೀಳಿಗೆಗೆ ಹೆಚ್ಚಿನ ಸಮರ್ಪಣಾಭಾವದಿಂದ ಕೆಲಸ ಮಾಡಬೇಕು ಎಂದು ರಾಷ್ಟ್ರಪತಿ ಕರೆ ನೀಡಿದರು.

ಭಾರತ ಮಹತ್ವದ ಮೈಲಿಗಲ್ಲು:
ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಒಂದು ಮಹತ್ವದ ಮೈಲಿಗಲ್ಲಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡುತ್ತಿದೆ. ಕೈಗೆಟುಕುವ ಮತ್ತು ಶುದ್ಧ ಇಂಧನ ಸಮುದಾಯಗಳನ್ನು ಸಬಲಗೊಳಿಸುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಮುನ್ನಡೆಸುತ್ತದೆ. ಸೌರಶಕ್ತಿ ವಿದ್ಯುತ್ ಉತ್ಪಾದನೆ ಮಾತ್ರವಲ್ಲ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗೂ ಪೂರಕವಾಗಿದೆ ಎಂದು ದ್ರೌಪದಿ ಮುರ್ಮು ಪ್ರತಿಪಾದಿಸಿದರು.

Droupadi Murmu ISA New delhi 1

ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಮತ್ತು ಎಲ್ಲಾ ಸದಸ್ಯ ರಾಷ್ಟ್ರಗಳು ಮೂಲಸೌಕರ್ಯ ಮತ್ತು ಜನಜೀವನದ ಮೇಲೆ ಕೇಂದ್ರೀಕರಿಸಬೇಕು. ಉದ್ಯೋಗ ಸೃಷ್ಟಿ, ಮಹಿಳಾ ನಾಯಕತ್ವ, ಗ್ರಾಮೀಣ ಜೀವನೋಪಾಯ ಮತ್ತು ಡಿಜಿಟಲ್ ಸೇರ್ಪಡೆಗೆ ನೆರವಾಗುವಂತೆ ಸೌರಶಕ್ತಿ ಸಾಮೂಹಿಕ ಕ್ರಿಯಾ ಯೋಜನೆ ಅಭಿವೃದ್ಧಿಪಡಿಸಬೇಕೆಂದು ರಾಷ್ಟ್ರಪತಿ ಇದೇ ವೇಳೆ ಸಲಹೆ ನೀಡಿದರು.

ಸೌರ ಪ್ರಗತಿಯನ್ನು ಮೆಗಾವ್ಯಾಟ್ ಮೂಲಕ ಮಾತ್ರವಲ್ಲದೆ ಸುಧಾರಿತ ಕುಟುಂಬಗಳ ಸಂಖ್ಯೆ ಮತ್ತು ಸಮುದಾಯಗಳ ಸಂಖ್ಯೆ ಮೂಲಕ ಅಳೆಯಬೇಕು. ತಂತ್ರಜ್ಞಾನ ಅಭಿವೃದ್ಧಿಗೆ ಗಮನ ಹರಿಸಬೇಕು. ಸೌರ ಸ್ಥಾಪನೆಗಳ ವೇಳೆ ಪರಿಸರ ಸಂರಕ್ಷಣೆ, ಹಸಿರು ಶಕ್ತಿಯತ್ತ ಗಮನಹರಿಸಿ ಪ್ರದೇಶದ ಪರಿಸರ ಸಮತೋಲನಕ್ಕೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಿಸಿದರು.

125 ಸದಸ್ಯ ರಾಷ್ಟ್ರಗಳ ಸಹಿ: ಸೌರಶಕ್ತಿಯಲ್ಲಿ ಜಾಗತಿಕ ಸಹಕಾರ ಮತ್ತು ಹೂಡಿಕೆಯನ್ನು ತ್ವರಿತಗೊಳಿಸಲು 125 ಸದಸ್ಯ ರಾಷ್ಟ್ರಗಳು ಮತ್ತು ಪಾಲುದಾರರು, ಸಹಿ ಹಾಕಿದರು. ವಿವಿಧ ದೇಶಗಳ 550ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು 30 ಸಚಿವರು, ಸಹಾಯಕ ಸಚಿವರು ಭಾಗವಹಿಸಿದ್ದರು.

TAGGED:Droupadi MurmuISANew DelhiSolar Energyದ್ರೌಪದಿ ಮುರ್ಮುನವದೆಹಲಿಸೌರಶಕ್ತಿ ವಿದ್ಯುತ್ ಉತ್ಪಾದನೆಹವಾಮಾನ ಬದಲಾವಣೆ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

supreme Court 1
Court

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
24 minutes ago
Sharana Prakash Patil
Bengaluru City

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ – ಶರಣ ಪ್ರಕಾಶ್ ಪಾಟೀಲ್

Public TV
By Public TV
31 minutes ago
Donald Trump RSS
Latest

RSS, RAW ಬ್ಯಾನ್‌ ಮಾಡಿ – ಟ್ರಂಪ್‌ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು

Public TV
By Public TV
44 minutes ago
Mojtaba Khamenei
Latest

ಇರಾನ್‌ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೆ ರಷ್ಯಾದಲ್ಲಿ ಚಿಕಿತ್ಸೆ!

Public TV
By Public TV
48 minutes ago
old age home kalaburagi
Kalaburagi

ಕಲಬುರಗಿ| ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್ – ಆಹಾರಕ್ಕೆ ವೃದ್ಧರ ಪರದಾಟ

Public TV
By Public TV
1 hour ago
Rice Mill 1
Districts

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?