Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

Public TV
Last updated: March 21, 2024 12:24 pm
Public TV
Share
5 Min Read
Bagalkot lok sabha election 2024 2
SHARE

– 5ನೇ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್
– ವೀಣಾ ಕಾಶಪ್ಪನವರ್‌ಗೆ ‘ಕೈ’ ಟಿಕೆಟ್ ಮಿಸ್? ಸಂಯುಕ್ತ ಪಾಟೀಲ್‌ಗೆ ಮಣೆ?

ಸ್ಮಾರಕಗಳ ನೆಲೆ, ದೇವಾಲಯಗಳ ತೊಟ್ಟಿಲು, ಚಾಲುಕ್ಯರ ನಾಡು, ಬಸವಣ್ಣ ನವರ ಐಕ್ಯ ಭೂಮಿ, ಶಕ್ತಿ ಪೀಠ ಬನಶಂಕರಿ ದೇವಿ ನೆಲೆಸಿರುವ ಐತಿಹಾಸಿಕ ಜಿಲ್ಲೆ ಬಾಗಲಕೋಟೆ. ಕಲೆ, ಸಂಸ್ಕೃತಿಗೆ ಈ ನೆಲದ ಕೊಡುಗೆ ಅಪಾರ.

ಕರ್ನಾಟಕ ರಾಜ ಮನೆತನ ಚಾಲುಕ್ಯರ ನಾಡು ಬಾಗಲಕೋಟೆ (Bagalkot) ಈಗ ‘ಲೋಕ’ಸಮರಕ್ಕೆ ಸಜ್ಜಾಗಿದೆ. ಕ್ಷೇತ್ರಕ್ಕಾಗಿ ಕಲಿಗಳಂತೆ ಕಾದಾಡಲು ಕಾಂಗ್ರೆಸ್-ಬಿಜೆಪಿ (Congress-BJP) ರಣರಂಗಕ್ಕೆ ಇಳಿದಿವೆ. ಆರಂಭದಲ್ಲಿ ಕ್ಷೇತ್ರದಲ್ಲಿ ಭದ್ರಬುನಾದಿ ಹಾಕಿದ್ದ ಕಾಂಗ್ರೆಸ್ ಕಾಲಾನಂತರ ತನ್ನ ಅಸ್ತಿತ್ವ ಕಳೆದುಕೊಂಡಿತು. ಬಾಗಲಕೋಟೆ ಲೋಕಸಭಾ ಕ್ಷೇತ್ರ ಈಗ ಬಿಜೆಪಿ ತೆಕ್ಕೆಯಲ್ಲಿದೆ. ಗೆಲುವಿನ ನಾಗಾಲೋಟ ಮುಂದುವರಿಸಲು ಕಮಲ ಕಲಿಗಳು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ಮತ್ತೆ ತನ್ನ ಅಸ್ತಿತ್ವ ಸ್ಥಾಪಿಸಬೇಕು ಎಂದು ‘ಕೈ’ ಪಾಳಯ ತಂತ್ರ ರೂಪಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ.

Bagalkot lok sabha election 2024 1

ಕ್ಷೇತ್ರ ಪರಿಚಯ
ಬಾಗಲಕೋಟೆ ಲೋಕಸಭಾ ಕ್ಷೇತ್ರವು 1967 ರಲ್ಲಿ ಅಸ್ತಿತ್ವಕ್ಕೆ ಬಂತು. ಕ್ಷೇತ್ರದ ಮೊದಲ ಸಂಸದನಾಗಿ ಕಾಂಗ್ರೆಸ್‌ನ ಸಂಗನಗೌಡ ಬಸನಗೌಡ ಪಾಟೀಲ್ ಆಯ್ಕೆಯಾಗಿದ್ದರು. 1991 ರ ವರೆಗೆ ಕಾಂಗ್ರೆಸ್ ಗೆಲುವಿನ ಬಾವುಟ ಹಾರಿಸಿತ್ತು. 1996 ರಲ್ಲಿ ಮೊದಲ ಬಾರಿಗೆ ಜನತಾದಳ ಪಕ್ಷದ ಹೆಚ್.ವೈ.ಮೇಟಿ ಗೆಲುವು ದಾಖಲಿಸಿದರು. ಇದರೊಂದಿಗೆ ಕಾಂಗ್ರೆಸ್ ಸತತ ಗೆಲುವಿನ ಸರಪಳಿಯ ಕೊಂಡಿ ಕಳಚಿತು. ಅದಾದ ಬಳಿಕ ಕ್ಷೇತ್ರದಲ್ಲಿ ಒಮ್ಮೆ ಲೋಕ ಶಕ್ತಿ ಹಾಗೂ ಮತ್ತೊಮ್ಮೆ ಕಾಂಗ್ರೆಸ್ ಗೆದ್ದಿದ್ದು ಬಿಟ್ಟರೆ, ಕಳೆದ 20 ವರ್ಷಗಳಿಂದ ಇಲ್ಲಿ ಬಿಜೆಪಿ ಗೆಲುವಿನ ಓಟ ಮುಂದುವರಿಸಿದೆ. ಪಕ್ಷದ ಪಿ.ಸಿ.ಗದ್ದಿಗೌಡರ್ (2004, 2009, 2014, 2019) ಸತತ ನಾಲ್ಕು ಬಾರಿ ಗೆದ್ದು ಬೀಗಿದ್ದಾರೆ.

ವಿಧಾನಸಭಾ ಕ್ಷೇತ್ರಗಳೆಷ್ಟು?
ಬಾಗಲಕೋಟೆ 7 ವಿಧಾನಸಭಾ ಕ್ಷೇತ್ರ ಹಾಗೂ ಪಕ್ಕದ ಗದಗ ಜಿಲ್ಲೆಯ ನರಗುಂದ ಸೇರಿ 8 ಕ್ಷೇತ್ರಗಳನ್ನು ಒಳಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ, ಬೀಳಗಿ, ಮುಧೋಳ, ಜಮಖಂಡಿ, ತೇರದಾಳ, ಬಾದಾಮಿ ಹಾಗೂ ಹುನಗುಂದ. ಗದಗ ಜಿಲ್ಲೆಯ ನರಗುಂದ ಕ್ಷೇತ್ರ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಇದನ್ನೂ ಓದಿ: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ

ಒಟ್ಟು ಮತದಾರರು ಎಷ್ಟು?
ಕ್ಷೇತ್ರದಲ್ಲಿ ಒಟ್ಟು 17,90,118 ಮತದಾರರಿದ್ದಾರೆ. ಅವರ ಪೈಕಿ ಪುರುಷರು 8,87,780 ಹಾಗೂ ಮಹಿಳಾ ಮತದಾರರು 9,02,239 ಇದ್ದಾರೆ. ತೃತೀಯ ಲಿಂಗಿ ಮತದಾರರು 99 ಮಂದಿ ಇದ್ದಾರೆ.

ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಪಿ.ಸಿ.ಗದ್ದಿಗೌಡರ್ 1,68,187 ಮತಗಳ ಅಂತರದಿಂದ ಗೆಲುವು ದಾಖಲಿಸಿ ಸತತ ನಾಲ್ಕನೆಯ ಬಾರಿ ಸಂಸದರಾಗಿ ಆಯ್ಕೆಯಾದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ್ ಭಾರಿ ಅಂತರದ ಸೋಲು ಅನುಭವಿಸಿದರು. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಬಿಜೆಪಿ ಅಭ್ಯರ್ಥಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.

Gaddigoudar

ಪಿ.ಸಿ.ಗದ್ದಿಗೌಡರ್‌ಗೆ ಬಿಜೆಪಿ ಮತ್ತೆ ಟಿಕೆಟ್
ಬಾಗಲಕೋಟೆ ಜಿಲ್ಲೆಯಲ್ಲಿ ಹಿಂದುತ್ವ ಗಟ್ಟಿಯಾಗಿ ಬೇರೂರಿದ್ದು, ಬಿಜೆಪಿಯ ಅಬೇಧ್ಯ ಕೋಟೆಯಾಗಿದೆ. 2004 ರಿಂದ 2019 ರ ವರೆಗಿನ ನಾಲ್ಕು ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ. ಪ್ರಬಲ ಲಿಂಗಾಯತ ಗಾಣಿಗ ಸಮಾಜದ ಪಿ.ಸಿ.ಗದ್ದಿಗೌಡರ್ (P. C. Gaddigoudar) ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಬಿಜೆಪಿಯ ಒಗ್ಗಟ್ಟು, ಜಿಲ್ಲೆಯ ಕೈ ನಾಯಕರ ಒಳೇಟು, ತಂತ್ರ-ಕುತಂತ್ರಗಳಿಂದ ಗದ್ದಿಗೌಡರ್‌ಗೆ ಗೆಲುವು ನಿರಾಯಾಸವಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಈ ಹಿನ್ನೆಲೆಯಲ್ಲಿ ಸೋಲಿಲ್ಲದ ಸರದಾರ ಗದ್ದಿಗೌಡರ್‌ಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿ ಮಣೆ ಹಾಕಿದೆ. ಆದರೂ ನಾಲ್ಕು ಬಾರಿ ಗೆದ್ದಿರುವ ಗದ್ದಿಗೌಡರ್ ಮೇಲೆ ಕೆಲ ಆರೋಪಗಳಿವೆ. ಕ್ಷೇತ್ರಕ್ಕಾಗಿ ವಿಶೇಷ ಯೋಜನೆಗಳನ್ನು ತಂದಿಲ್ಲ ಎಂಬ ಆರೋಪ ಎದುರಿಸುತ್ತಿದ್ದಾರೆ. ಕೆಲವು ದೀರ್ಘಾವಧಿ ಕಾಮಗಾರಿಗಳು (ಬಾಗಲಕೋಟೆ-ಕುಡಚಿ ರೈಲು ಮಾರ್ಗ, ಗದಗ-ಹುಟಗಿ ಡಬ್ಲಿಂಗ್ ಕಾಮಗಾರಿ) ದಶಕ ಕಳೆದರೂ ಮುಗಿಯದಕ್ಕೆ ಜನರಲ್ಲಿ ಅಸಮಾಧಾನವಿದೆ. ಇದನ್ನೂ ಓದಿ: ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್‌ ಘೋಷಣೆ

ವೀಣಾ ಕಾಶಪ್ಪನವರ್‌ಗೆ ‘ಕೈ’ ಟಿಕೆಟ್ ಮಿಸ್?
2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿದ್ರೆ ಈ ಬಾರಿ ಉಲ್ಟಾ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿವೆ. ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮಾಜಿ ಸಚಿವ ಅಜಯಕುಮಾರ್ ಸರನಾಯಕ್, ವೀಣಾ ಕಾಶಪ್ಪನವರ್, ವಿಜಯಪುರದ ಸಂಯುಕ್ತಾ ಪಾಟೀಲ್, ರಕ್ಷಿತಾ ಈಟಿ ಹೀಗೆ ಹಲವು ಹೆಸರುಗಳು ಮುಂಚೂಣಿಯಲ್ಲಿವೆ. ಕಳೆದ ಬಾರಿ ಪಕ್ಷದಿಂದ ಟಿಕೆಟ್ ಗಿಟ್ಟಿಸಿ ಸೋಲನುಭವಿಸಿದ್ದ ವೀಣಾ ಕಾಶಪ್ಪನವರ್‌ಗೆ ಈ ಬಾರಿ ಟಿಕೆಟ್ ಮಿಸ್ ಆಗಲಿದೆ. ಬುಧವಾರ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಾಧ್ಯಮಗಳ ಮುಂದೆ ವೀಣಾ ಕಾಶಪ್ಪನವರ್ (Veena Kashappanavar) ಟಿಕೆಟ್ ವಿಚಾರವಾಗಿ ಕಣ್ಣೀರಿಟ್ಟರು. ಈ ಬಾರಿ ವಿಜಯಪುರ ಜಿಲ್ಲೆಯ ಸಂಯುಕ್ತ ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿದೆ. ಬಹುತೇಕ ಅವರಿಗೆ ಟಿಕೆಟ್ ಪಕ್ಕ ಎನ್ನುವ ಮಾಹಿತಿ ಇದೆ.

ಮೈತ್ರಿಯಿಂದ ಬಿಜೆಪಿಗೆ ಲಾಭ?
ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದೆ. ಕಾಂಗ್ರೆಸ್ ಮಾತ್ರ ಪೈಪೋಟಿ ಕೊಟ್ಟರೆ, ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬMತಿದೆ. ಬಿಜೆಪಿಗೆ ತನ್ನದೇ ಆದ ಮತಬ್ಯಾಂಕ್ ಇದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇದ್ದಾಗಲೇ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ನಿರಾಯಾಸ ಗೆಲುವು ಸಾಧಿಸಿದ್ದರು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಕಮಲಕ್ಕೆ ಮತ್ತಷ್ಟು ಅನುಕೂಲವಾಗುವ ಸಾಧ್ಯತೆ ಇದೆ.

‘ಕೈ’ ಹಿಡಿಯುತ್ತಾ ಗ್ಯಾರಂಟಿ ಯೋಜನೆಗಳು?
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈಹಿಡಿಯಲಿವೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಹೀಗಾಗಿ ಬಿಜೆಪಿಗೆ ಈ ಸಲ ಕಾಂಗ್ರೆಸ್‌ನಿಂದ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳ ಪೈಕಿ 5 ಕಾಂಗ್ರೆಸ್ ತೆಕ್ಕೆಗೆ ಸೇರಿವೆ. ಮೂರರಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಇದು ಕೂಡ ಕಾಂಗ್ರೆಸ್ ವರದಾನ ಆಗಬಹುದು ಎನ್ನಲಾಗಿದೆ.

 

ಜಾತಿವಾರು ಲೆಕ್ಕಾಚಾರ
ಲಿಂಗಯತ ಪಂಚಮಸಾಲಿ: 1,80,000
ಲಿಂಗಾಯತ ಗಾಣಿಗ: 98,000
ಲಿಂಗಾಯತ ರೆಡ್ಡಿ: 80,000
ಲಿಂಗಾಯತ ಬಣಜಿಗ: 50,000
ದೇವಾಂಗ & ನೇಯ್ಗೆ: 80,000
ಪರಿಶಿಷ್ಟ ಜಾತಿ (ಎಸ್‌ಸಿ): 3,05,000
ವಿಶ್ವಕರ್ಮ: 30,000
ಅಂಬಿಗರು: 32,000
ಕ್ಷತ್ರಿಯ: 65,0000
ಪರಿಶಿಷ್ಟ ಪಂಗಡ (ಎಸ್‌ಟಿ): 85,000
ಮುಸ್ಲಿಂ: 1,70,000
ಕುರುಬ: 2,60,000
ಉಪ್ಪಾರ್: 25,000
ಬ್ರಾಹ್ಮಣ: 25,000
ಜೈನ್: 15,000
ಕುಂಬಾರ್: 12,000
ಇತರೆ: 40,000

TAGGED:bagalkotbjpcongressDV Sadananda GowdakarnatakaLok Sabha electionpoliticsಕಾಂಗ್ರೆಸ್ಗದ್ದಿಗೌಡರ್‌ಡಿವಿ ಸದಾನಂದ ಗೌಡನರೇಂದ್ರ ಮೋದಿಬಾಗಲಕೋಟೆಬಿಜೆಪಿಬೆಂಗಳೂರು ಉತ್ತರಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema Updates

twinkle khanna
ಅಕ್ಷಯ್, ವಿಕ್ಕಿ ಕೌಶಲ್ ‘ಆಪರೇಷನ್ ಸಿಂಧೂರ’ ಸಿನಿಮಾಗಾಗಿ ಫೈಟ್ ಮಾಡ್ತಿಲ್ಲ: ಟ್ವಿಂಕಲ್ ಖನ್ನಾ
3 minutes ago
Upendra 2
ಐಪಿಎಲ್ ಕುರಿತಾದ ಕ್ರೀಡಾ ಪ್ರಧಾನ ಚಿತ್ರದಲ್ಲಿ ಉಪ್ಪಿ-‘ಕರ್ವ’ ಡೈರೆಕ್ಟರ್ ಆ್ಯಕ್ಷನ್ ಕಟ್
49 minutes ago
ajai rao
ಅಜಯ್ ರಾವ್ ನಟನೆಯ ‘ಸರಳ ಸುಬ್ಬರಾವ್’ ಚಿತ್ರದ ಸಾಂಗ್ ರಿಲೀಸ್
2 hours ago
sreeleela 1 2
ರೆಡ್ಡಿ ಮಗನ ಜೊತೆ ಶ್ರೀಲೀಲಾ ಡ್ಯುಯೆಟ್- ‘ಜೂನಿಯರ್’ ಚಿತ್ರದ ಸಾಂಗ್ ಔಟ್
3 hours ago

You Might Also Like

Sofiya Qureshi Vijay Shah
Court

ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆ: ಸುಪ್ರೀಂ

Public TV
By Public TV
23 minutes ago
Akanksha Dinesh GunduRao
Bengaluru City

ಆಕಾಂಕ್ಷ ನಿಗೂಢ ಸಾವು – ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

Public TV
By Public TV
29 minutes ago
WEATHER 3
Bengaluru City

ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

Public TV
By Public TV
33 minutes ago
Siddaramaiah Rains
Latest

ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು – ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Public TV
By Public TV
33 minutes ago
N S Bosaraju
Bellary

ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಬೋಸರಾಜು

Public TV
By Public TV
48 minutes ago
c.t.ravi 1
Bengaluru City

ಬೆಂಗ್ಳೂರಲ್ಲಿ ಮಳೆಗೆ ನಾನಾ ಅವಾಂತರ | ಅಂತರಾಷ್ಟ್ರೀಯ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ: ಸಿ.ಟಿ ರವಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?