ಬೆಂಗಳೂರು: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್, ಪೀಣ್ಯ ಎಕ್ಸ್ಪ್ರೆಸ್ ಖ್ಯಾತಿಯ ಕನ್ನಡಿಗ ಅಭಿಮನ್ಯು ಮಿಥುನ್ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಮಿಥುನ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಾನು ನನ್ನ ದೇಶಕ್ಕಾಗಿ ಆಡಿರುವುದು ನನಗೆ ತುಂಬಾ ಸಂತೋಷ ನೀಡಿದೆ. ಇದಕ್ಕೆ ಅವಕಾಶ ಮಾಡಿಕೊಟ್ಟ ಬಿಸಿಸಿಐಗೆ ಮತ್ತು ನನ್ನ ಕ್ರಿಕೆಟ್ ಜೀವನವನ್ನು ರೂಪಿಸಿದ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗೆಳತಿಗೆ ಸ್ಟೇಡಿಯಂನಲ್ಲೇ ಪ್ರಪೋಸ್ ಮಾಡಿದ ದೀಪಕ್ ಚಹರ್
Thank you for all your love and support through my highs and lows ???????? pic.twitter.com/VDovQQ6UfC
— Mithun Abhimanyu (@imAmithun_264) October 7, 2021
ಮಿಥುನ್ 2010 ಮತ್ತು 2011ನೇ ಸಾಲಿನಲ್ಲಿ ಭಾರತ ತಂಡದ ಪರ 4 ಟೆಸ್ಟ್ ಪಂದ್ಯಗಳಲ್ಲಿ 9 ವಿಕೆಟ್ ಮತ್ತು 5 ಏಕದಿನ ಪಂದ್ಯಗಳಲ್ಲಿ 3 ವಿಕೆಟ್ ಪಡೆದಿದ್ದಾರೆ. ಮಿಥುನ್ ರಾಷ್ಟ್ರೀಯ ತಂಡಕ್ಕಿಂತ ಹೆಚ್ಚು ಕರ್ನಾಟಕ ರಾಜ್ಯ ತಂಡದಲ್ಲಿ ಆಡಿದ್ದು, ರಾಜ್ಯ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಕಳೆದ 12 ವರ್ಷಗಳಿಂದ ರಾಜ್ಯ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿದ್ದ ಮಿಥುನ್, 2013-14, 2014-15 ಸಾಲಿನಲ್ಲಿ ಕರ್ನಾಟಕ ತಂಡ ರಣಜಿ, ಇರಾನಿ ಮತ್ತು ವಿಜಯ ಹಜಾರೆ ಟ್ರೋಫಿ ಗೆಲ್ಲಲು ಸಹಕಾರಿಯಾಗಿದ್ದರು. ಇದನ್ನೂ ಓದಿ: ಟಿ20 ಕ್ರಿಕೆಟ್ನಲ್ಲಿ ಭಾರತದ ನೂತನ ಸಿಕ್ಸರ್ ಕಿಂಗ್ ಆದ ಹಿಟ್ಮ್ಯಾನ್
ಮಿಥುನ್ ಒಟ್ಟು 103 ಪ್ರಥಮ ದರ್ಜೆ ಪಂದ್ಯಗಳಿಂದ 338 ವಿಕೆಟ್, 96 ಲಿಸ್ಟ್ ಎ ಪಂದ್ಯಗಳಿಂದ 136 ವಿಕೆಟ್ ಮತ್ತು 74 ಟಿ20 ಪಂದ್ಯಗಳಿಂದ 69 ವಿಕೆಟ್ ಕಬಳಿಸಿ ಮಿಂಚಿದ್ದು, ಐಪಿಎಲ್ನಲ್ಲಿ ಆರ್ಸಿಬಿ, ಮುಂಬೈ ಮತ್ತು ಹೈದರಾಬಾದ್ ತಂಡದ ಪರ 19 ಪಂದ್ಯಗಳನ್ನು ಆಡಿ ಉತ್ತಮ ಪ್ರದರ್ಶನ ನೀಡಿ ಇದೀಗ ನಿವೃತ್ತಿಯ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.