ನವದೆಹಲಿ: ಯುಪಿಎ ಅವಧಿಯಲ್ಲಿ ಭಾರತವನ್ನು ದುರ್ಬಲ ಆರ್ಥಿಕತೆ ಎಂದು ಘೋಷಿಸಲಾಗಿತ್ತು. ಇಂದು ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ (India) ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. ಇದಕ್ಕೆ ಮೋದಿ (Narendra Modi) ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.
ಅವಿಶ್ವಾಸ ನಿರ್ಣಯದ ವಿರುದ್ಧ ಲೋಕಸಭೆಯಲ್ಲಿ (Lok Sabha) ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಶ್ರೀಲಂಕಾದಲ್ಲಿರುವ ಅಶೋಕ ವಾಟಿಕಾದ ವಿಶೇಷತೆ ಏನು?, ಏನಿದು ಸೀತಾಗಂಗಾ?
2014 ಮತ್ತು 2019ರಲ್ಲಿ ಯುಪಿಎ (UPA) ವಿರುದ್ಧ ಜನರು ಅವಿಶ್ವಾಸ ಮಂಡಿಸಿ ಯುಪಿಎ ಸೋಲಿಸಿದರು. 2024ರಲ್ಲೂ ಇದೇ ಪರಿಸ್ಥಿತಿ ಇರಲಿದೆ. ಯುಪಿಎ ಹೆಸರನ್ನು ಬದಲಾಯಿಸುವ ಅಗತ್ಯ ಏನಿತ್ತು? ಎಂದು ಗೃಹ ಸಚಿವರು ಕೇಳಿದರು. ಅದು ಒಂದು ಅದ್ಭುತವಾದ ಏಕತೆ. ಅವರು ಪರಸ್ಪರ ವಿರುದ್ಧ ಅಥವಾ ಒಟ್ಟಿಗೆ ಹೋರಾಡುತ್ತಿದ್ದಾರೆ ಅವರನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಹೇಳಿದರು. ಇದನ್ನೂ ಓದಿ: ಇನ್ನು ಮುಂದೆ UPI Lite ನಲ್ಲಿ ಪಿನ್ ಹಾಕದೇ 500 ರೂ. ಸೆಂಡ್ ಮಾಡಿ – ರೆಪೋ ದರದಲ್ಲಿ ಇಲ್ಲ ಬದಲಾವಣೆ
ಕರ್ನಾಟಕದ ಆರೋಗ್ಯ ಸಚಿವರು ದೆಹಲಿಯ (Delhi) ಮೊಹಲ್ಲಾ ಕ್ಲಿನಿಕ್ ನೋಡಲು ದೆಹಲಿಗೆ ಬಂದರು. ಅವುಗಳನ್ನು ನೋಡಿ ವಿಶೇಷವೇನೂ ಇಲ್ಲ ಮತ್ತು ನಾವು ನಿರಾಶೆಗೊಂಡಿದ್ದೇವೆ ಎಂದು ಹೇಳಿದರು. ಇದು ಅವರ ಹೋರಾಟದ ಉದಾಹರಣೆಗಳಲ್ಲಿ ಒಂದು ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಉಲ್ಲೇಖಿಸಿ ವಿಪಕ್ಷಗಳ ವಿರುದ್ಧ ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ
ಬೆಲೆ ಏರಿಕೆ ನಿಯಂತ್ರಣದಲ್ಲೂ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಟೊಮೊಟೋ ಬೆಲೆ ಏರಿಕೆ ಪರಿಸ್ಥಿತಿಯನ್ನು ನಿವಾರಿಸಲು ನ್ಯಾಷನಲ್ ಕೋ ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ಸಿಸಿಎಫ್) ದೆಹಲಿ-ಎನ್ಸಿಆರ್ನಲ್ಲಿ ಈ ವಾರಾಂತ್ಯದಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟವನ್ನು ನಡೆಸಲಿದೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯ ಕೆಂಪು ಕೋಟೆ, ರಾಜ್ಘಾಟ್ನಲ್ಲಿ ಸೆಕ್ಷನ್ 144 ಜಾರಿ
ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ಟೊಮೆಟೋವನ್ನು ಎನ್ಸಿಸಿಎಫ್ ಮತ್ತು ಎನ್ಎಎಫ್ಇಡಿ ಮುಂತಾದ ಸಹಕಾರ ಸಂಘಗಳ ಮೂಲಕ ವಿತರಿಸಲು ಖರೀದಿಸಲಾಗುತ್ತಿದೆ. ಜುಲೈ 14ರಿಂದ ಬಿಹಾರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲಿ ಈ ವಿಧಾನವನ್ನು ಪ್ರಾರಂಭಿಸಲಾಗಿದೆ. ಹೆಚ್ಚುವರಿಯಾಗಿ, ದೆಹಲಿಯಲ್ಲಿ ಮೊಬೈಲ್ ವ್ಯಾನ್ಗಳು ಎನ್ಸಿಸಿಎಫ್ ಮತ್ತು ಎನ್ಎಎಫ್ಇಡಿ ಔಟ್ಲೆಟ್ಗಳಾಗಿ ಕಾರ್ಯನಿರ್ವಹಿಸುತ್ತವೆ. ಭಾರತವು ಆಮದು ನಿರ್ಬಂಧಗಳನ್ನು ತೆಗೆದುಹಾಕುವ ಮೂಲಕ ನೇಪಾಳದಿಂದ ಟೊಮೆಟೋ ಆಮದನ್ನು ಪ್ರಾರಂಭಿಸಿದೆ ಎಂದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]