ನವದೆಹಲಿ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ಭಾರತ-ಚೀನಾ ಸೈನಿಕರ (China and India Soldiers) ಘರ್ಷಣೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ (Lok Sabha) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸ್ಪಷ್ಟನೆ ಕೊಟ್ಟಿದ್ದಾರೆ. ಚೀನಾ ಸೈನಿಕರು ಗಡಿ ನುಸುಳುವುದನ್ನು ಭಾರತ ತಡೆದಿದೆ. ನಮ್ಮ ಸೈನಿಕರ ಧೈರ್ಯಕ್ಕೆ ಸಲಾಂ ಹೇಳುತ್ತೇನೆ ಎಂದಿದ್ದಾರೆ.
ಸಂಘರ್ಷದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಯಾರಿಗೂ ತೀವ್ರ ಗಾಯಗಳೂ ಆಗಿಲ್ಲ. ಚೀನಾ ಸೈನಿಕರು ವಾಪಸ್ ತಮ್ಮ ನೆಲೆಗೆ ತೆರಳಿದ್ದಾರೆ. ಶಾಂತಿ ಕಾಪಾಡಲು ಚೀನಾ ಸೇನಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗುತ್ತಿದೆ. ಭಾರತ ಎಲ್ಲ ದಾಳಿಗಳನ್ನು ತಡೆಯುವ ಶಕ್ತಿ ಹೊಂದಿದೆ. ಭಾರತ ಶೌರ್ಯ ಕ್ಷಮತೆಯನ್ನು ನಾನು ಅಭಿನಂದಿಸುತ್ತೇನೆ ಎಂದು ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಉತ್ತರಿಸಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಭಾರತ – ಚೀನಾ ಸೈನಿಕರ ಸಂಘರ್ಷ ; ರಾಜನಾಥ್ ಸಿಂಗ್ ನಿವಾಸದಲ್ಲಿ ಸಭೆ
ಈ ಘರ್ಷಣೆಯಲ್ಲಿ ಎರಡೂ ಕಡೆಯ ಕೆಲವು ಸೈನಿಕರು ಗಾಯಗೊಂಡಿದ್ದಾರೆ. ನಾನು ಈ ಸದನಕ್ಕೆ ಹೇಳಲು ಬಯಸುತ್ತೇನೆ. ಭಾರತೀಯ ಸೇನಾ ಕಮಾಂಡರ್ಗಳ ಸಮಯೋಚಿತ ಮಧ್ಯಪ್ರವೇಶದಿಂದ, ಪಿಎಲ್ಎ ಸೈನಿಕರು ತಮ್ಮ ಸ್ವಂತ ಸ್ಥಳಕ್ಕೆ ಹಿಮ್ಮೆಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಆದರೆ ರಾಜನಾಥ್ ಸಿಂಗ್ ಅವರ ಉತ್ತರಕ್ಕೆ ವಿಪಕ್ಷಗಳು ತೃಪ್ತರಾಗಲಿಲ್ಲ. ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳು ಆಗ್ರಹಿಸಿದವು. ಆದರೆ ಸ್ಪೀಕರ್ ಓಂ ಬಿರ್ಲಾ ಅವರು ಚರ್ಚೆಗೆ ಅವಕಾಶ ನೀಡಲಿಲ್ಲ. ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ಇದನ್ನೂ ಓದಿ: ಗಡಿಯಲ್ಲಿ ಮತ್ತೆ ಬಡಿದಾಟ – ಚೀನಿ ಯೋಧರಿಗೆ ತಿರುಗೇಟು ಕೊಟ್ಟ ಭಾರತ