Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಗಿಲ್, ಧವನ್ ಧಮಾಕ – ವಿಂಡೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ

Public TV
Last updated: July 23, 2022 7:56 am
Public TV
Share
4 Min Read
IND VS WEST 1
SHARE

ಚಗುರಾಮಸ್: ಟೀಂ ಇಂಡಿಯಾದ ನಾಯಕ ಶಿಖರ್ ಧವನ್, ಶುಭಮನ್ ಗಿಲ್ ಅವರ ಬ್ಯಾಟಿಂಗ್ ಅಬ್ಬರದ ನೆರವಿನಿಂದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 3 ರನ್‌ಗಳ ಅಂತರದಿಂದ ರೋಚಕ ಜಯ ಸಾಧಿಸಿತು.

ವೆಸ್ಟ್ಇಂಡೀಸ್‌ನ ಪೋರ್ಟ್ ಆಫ್ ಸ್ಫೇನ್‌ನ ಕ್ವೀನ್ಸ್ ಪಾರ್ಕ್ ಓವಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 308 ರನ್‌ಗಳನ್ನು ಗಳಿಸಿ, ಆತಿಥೇಯ ವೆಸ್ಟ್ಇಂಡೀಸ್‌ಗೆ 309 ರನ್‌ಗಳ ಗುರಿ ನೀಡಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ವೆಸ್ಟ್ ಇಂಡೀಸ್ 6 ವಿಕೆಟ್‌ಗಳ ನಷ್ಟಕ್ಕೆ 305 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಗಿ ಭಾರತದ ಎದುರು ಸೋಲೊಪ್ಪಿಕೊಂಡಿತು.

IND VS WEST 3

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಗೆಲುವಿನ ನಗೆ ಬೀರಿತು. ಇದನ್ನೂ ಓದಿ: ಗಾಯಗೊಂಡ ರವೀಂದ್ರ ಜಡೇಜಾ – ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ ಅಮಿರ್ ಅಲಿ

ಟೀಂ ಇಂಡಿಯಾ ನೀಡಿದ 309 ರನ್‌ಗಳ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ಉತ್ತಮವಾಗಿಯೇ ಇನ್ನಿಂಗ್ಸ್ ಆರಂಭಿಸಿತು. ಆರಂಭಿಕ ಆಟಗಾರ ಶಾಯ್‌ಹೋಪ್ 8 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆ ನಂತರದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಕೈಲ್ ಮೇಯರ್ಸ್ ಅವರಿಂದ 75 ರನ್ ಮತ್ತು ಬ್ರ‍್ಯಾಂಡನ್ ಕಿಂಗ್ ಅವರ ಅರ್ಧಶತಕದ ನೆರವು ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ಯುತ್ತಿತ್ತು.

ಕೈಲ್ ಮೇಯರ್ಸ್ 68 ಎಸೆತಗಳಲ್ಲಿ 75 ರನ್ (10 ಬೌಂಡರಿ, 1 ಸಿಕ್ಸರ್) ಸಿಡಿಸಿದರೆ, ಬ್ರ‍್ಯಾಂಡನ್ ಕಿಂಗ್ 66 ಎಸೆತಗಳಲ್ಲಿ 54 ರನ್ (2 ಬೌಂಡರಿ, 2 ಸಿಕ್ಸರ್) ರನ್‌ಗಳನ್ನು ಕಲೆಹಾಕಿ ಉತ್ತಮ ಇನ್ನಿಂಗ್ಸ್ ಕಟ್ಟಿದ್ದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಶಮರ್ ಬ್ರೂಕ್ಸ್ 45 ರನ್, ನಿಕೋಲಸ್ ಪೂರನ್ 25 ರನ್, ರೋವ್ಮನ್ ಪೋವೆಲ್ 6 ರನ್ ಗಳಿಸಿದರು. ಅಂತಿಮವಾಗಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಅಕೆಲ್ ಹೊಸೈನ್ 32 ರನ್ ಹಾಗೂ ರೊಮಾರಿಯೊ ಶೆಫರ್ಡ್ 39 ರನ್ ಸಿಡಿಸಿ ಅಜೇಯರಾಗುಳಿದರು. ಡೆತ್ ಓವರ್‌ಗಳಲ್ಲಿ ರೊಮಾರಿಯೊ ಶೆಫರ್ಡ್ ಮತ್ತು ಅಕೆಲ್ ಹೊಸೈನ್ ನಡೆಸಿದ ಹೋರಾಟ ವ್ಯರ್ಥವಾಗಿ ಕೊನೆಗೊಂಡಿತು. ಟೀಂ ಇಂಡಿಯಾ ಎದುರು 305 ರನ್‌ಗಳಿಸಿ ಸೋಲನ್ನು ಒಪ್ಪಿಕೊಳ್ಳಬೇಕಾಯಿತು.

IND VS WEST 2

ಇನ್ನು ಬೌಲಿಂಗ್‌ನಲ್ಲಿ ವೆಸ್ಟ್ ಇಂಡೀಸ್ ಪರ ಅಲ್ಜಾರಿ ಜೋಸೆಫ್ 10 ಓವರ್‌ಗಳಲ್ಲಿ 61 ರನ್ ನೀಡಿ 2 ವಿಕೆಟ್ ಪಡೆದರು. ಅದೇ ರೀತಿ ಗುಡಕೇಶ್ ಮೋಟಿ 10 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರು. ಇನ್ನು ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

ಟೀಂ ಇಂಡಿಯಾ ಶುಭಾರಂಭ: ಟಾಸ್ ಸೋತು ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಆತಿಥೇಯ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿತ್ತು. ನಾಯಕ ಶಿಖರ್ ಧವನ್, ಶುಭ್‌ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧ ಶತಕಗಳ ನೆರವಿನಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿ, ಎದುರಾಳಿ ತಂಡಕ್ಕೆ 309 ರನ್‌ಗಳ ಬೃಹತ್ ಗುರಿ ನೀಡಿತ್ತು.

ಟೀಂ ಇಂಡಿಯಾ ನಾಯಕ ಶಿಖರ್ ಧವನ್ 99 ಎಸೆತಗಳಲ್ಲಿ 97 ರನ್ (10 ಬೌಂಡರಿ, 3 ಸಿಕ್ಸರ್) ಸಿಡಿಸಿ ಶತಕ ವಂಚಿತರಾದರು. ಮತ್ತೊಬ್ಬ ಆರಂಭಿಕ ಶುಭಮನ್ ಗಿಲ್ 64 ರನ್ (53 ಎಸೆತ, 6 ಬೌಂಡರಿ, 2 ಸಿಕ್ಸರ್) ಸಿಡಿಸಿ ರನ್ ಮಳೆ ಸುರಿಸಿದರು. 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಉತ್ತಮ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 54 ರನ್ (57 ಎಸೆತ, 5 ಬೌಂಡರಿ, 2 ಸಿಕ್ಸರ್) ಸಿಡಿಸಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ನಂತರದಲ್ಲಿ ಕ್ರೀಸ್‌ಗಿಳಿದ ದೀಪಕ್ ಹೂಡಾ 27, ಅಕ್ಷರ್ ಪಟೇಲ್ 21 ರನ್‌ಗಳನ್ನು ಟೀಂ ಇಂಡಿಯಾಕ್ಕೆ ಕೊಡುಗೆಯಾಗಿ ನೀಡಿದರು.

IND VS WEST

ನಾಯಕ ಶಿಖರ್ ಧವನ್ ಮತ್ತು ಶುಭ್‌ಮನ್ ಗಿಲ್ ಮೊದಲ ವಿಕೆಟ್‌ಗೆ 17.4 ಓವರ್‌ಗಳಲ್ಲಿ 119 ರನ್ ಜೊತೆಯಾಟ ನೀಡಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯದಲ್ಲಿ ಒಂದರ ಹಿಂದೆ ಒಂದು ವಿಕೆಟ್ ಉರುಳುತ್ತಿದ್ದಂತೆ ಭಾರತದ ರನ್ ವೇಗಕ್ಕೆ ಕಡಿವಾಣ ಬಿತ್ತು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿದ ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಮೊದಲ ಪಂದ್ಯದಲ್ಲಿ ವಿಂಡೀಸ್ ಬೌಲಿಂಗ್ ದಾಳಿಗೆ ಪ್ರತಿರೋಧ ಒಡ್ಡಲು ವಿಫಲರಾದರು. ಈ ಇಬ್ಬರು ಬ್ಯಾಟರ್‌ಗಳು ಕ್ರಮವಾಗಿ 13 ಮತ್ತು 12 ರನ್ ಗಳಿಸಿ ಔಟಾದರು.

ಸಿರಾಜ್ ಬೌಲಿಂಗ್ ದಾಳಿ: ಕೊನೆಯ ಓವರ್‌ನಲ್ಲಿ 15 ರನ್ ಬೇಕಿದ್ದಾಗ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 11 ರನ್ ನೀಡಿ ಗೆಲುವಿಗೆ ಕಾರಣರಾದರು. ಅಲ್ಲದೇ 10 ಓವರ್‌ಗಳಲ್ಲಿ 58 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು. ಲೆಗ್-ಸ್ಪಿನ್ನರ್ ಯುಜುವೇಂದ್ರ ಚಹಾಲ್ ಅಗತ್ಯ ಸಂದರ್ಭದಲ್ಲಿ 2 ವಿಕೆಟ್ ಪಡೆದರು ಮತ್ತು ಭಾರತ ಯಶಸ್ವಿಯಾಗಿ 308 ರನ್‌ಗಳಿಗೆ ವಿಂಡೀಸ್ ಅನ್ನು ಕಟ್ಟಿಹಾಕಿತು.

Live Tv
[brid partner=56869869 player=32851 video=960834 autoplay=true]

TAGGED:Indian cricket teamNicholas Pooran Kyle MayersscoreShikhar DhawanShreyas IyerWest Indiesಟೀಂ ಇಂಡಿಯಾನಿಕೋಲಸ್‌ ಪೂರನ್‌ವೆಸ್ಟ್ ಇಂಡೀಸ್‍ಶಿಖರ್ ಧವನ್ಶ್ರೇಯಸ್ ಅಯ್ಯರ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
4 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
6 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
5 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
8 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
52 minutes ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
53 minutes ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
1 hour ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
2 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
2 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?