Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋತ ಮೈದಾನದಲ್ಲೇ ಇಂದು ಗೆಲ್ಲುವ ಪ್ರಯತ್ನದಲ್ಲಿ ಕೊಹ್ಲಿ ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೋತ ಮೈದಾನದಲ್ಲೇ ಇಂದು ಗೆಲ್ಲುವ ಪ್ರಯತ್ನದಲ್ಲಿ ಕೊಹ್ಲಿ ಪಡೆ

Latest

ಸೋತ ಮೈದಾನದಲ್ಲೇ ಇಂದು ಗೆಲ್ಲುವ ಪ್ರಯತ್ನದಲ್ಲಿ ಕೊಹ್ಲಿ ಪಡೆ

Public TV
Last updated: July 2, 2019 12:48 pm
Public TV
Share
2 Min Read
collage ind bang match
SHARE

ಲಂಡನ್: ಇಂದು ಬರ್ಮಿಗ್ಹ್ಯಾಮ್‍ನಲ್ಲಿ ನಡೆಯಲಿರುವ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಗೆಲುವು ಕೊಹ್ಲಿ ಪಡೆ ಗೆಲುವು ಸಾಧಿಸುವ ತವಕದಲ್ಲಿದೆ. ಭಾನುವಾರ ಇದೇ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಕೊಹ್ಲಿ ಪಡೆ 31ರನ್‍ಗಳ ಅಂತರದಲ್ಲಿ ಶರಣಾಗಿತ್ತು.

ಭಾನುವಾರ ನಡೆದ ಪಂದ್ಯದಲ್ಲಿ 338 ರನ್ ಬೆನ್ನಟ್ಟಿದ ಭಾರತ ನಿಗದಿತ 50 ಓವರ್ ಗಳಲ್ಲಿ ಕೇವಲ 306 ರನ್ ಮಾತ್ರ ಗಳಿಸಿತು. ಈ ಮೂಲಕ ಈ ವಿಶ್ವಕಪ್‍ನಲ್ಲಿ ಸೋಲನ್ನೇ ಕಾಣದ ಭಾರತ 31 ರನ್‍ಗಳ ಅಂತರದಲ್ಲಿ ಸೋತಿತು. ರೋಹಿತ್ ಶರ್ಮಾ ಅವರ ಶತಕ ಮತ್ತು ಮೊಹಮ್ಮದ್ ಶಮಿ ಅವರ ಹೋರಾಟ ವ್ಯರ್ಥವಾಗಿತ್ತು. ಆದರೆ ಇಂದು ಇದೇ ಮೈದಾನದಲ್ಲಿ ಬಾಂಗ್ಲಾ ದೇಶದ ವಿರುದ್ಧ ಆಡಲಿರುವ ಭಾರತ ಗೆದ್ದು ಬೀಗುವ ವಿಶ್ವಾಸದಲ್ಲಿದೆ.

ind bang match 3

ವಿಶ್ವಕಪ್‍ನಲ್ಲಿ ಉತ್ತಮ ಲಯದಲ್ಲಿರುವ ಭಾರತ ತಂಡ ಎಲ್ಲಾ ವಿಭಾಗದಲ್ಲೂ ಬಲಿಷ್ಠವಾಗಿದೆ. ವಿಶ್ವಕಪ್‍ನಲ್ಲಿ 3 ಶತಕ ಸಿಡಿಸಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಒಳ್ಳೆಯ ಲಯದಲ್ಲಿದ್ದು, ಇವರಿಗೆ ಕನ್ನಡಿಗ ಕೆ.ಎಲ್ ರಾಹುಲ್ ಉತ್ತಮ ಸಾಥ್ ನೀಡುತ್ತಿದ್ದಾರೆ. ಇನ್ನೂ ನಾಯಕ ವಿರಾಟ್ ಕೊಹ್ಲಿ ಕೂಡ ಉತ್ತಮ ಲಯದಲ್ಲಿದ್ದು ಟೂರ್ನಿಯಲ್ಲಿ ಸತತ ಐದು ಅರ್ಧಶತಕ ಸಿಡಿಸಿ ಮಿಂಚುತ್ತಿದ್ದರೆ. ಇನ್ನೂ ಸ್ಪಿನ್ನರ್‍ ಗಳಾದ ಯುಜ್ವೇಂದ್ರ ಚಹಾಲ್ ಮತ್ತು ಕುಲ್‍ದೀಪ್ ಯಾದವ್ ಅವರು ಮೋಡಿ ಮಾಡುತ್ತಿದ್ದಾರೆ. ವೇಗಿಗಳಾದ ಜಸ್ಪ್ರಿತ್ ಬುಮ್ರಾ ಮತ್ತು ಮಹಮ್ಮದ್ ಶಮಿ ಅವರು ಬಿಗಿ ಬೌಲಿಂಗ್ ದಾಳಿ ಮಾಡುತ್ತಿದ್ದಾರೆ.

ind bang match 2

ಬಾಂಗ್ಲಾದೇಶ ಕೊಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಒಳ್ಳೆಯ ಪ್ರತಿಭಾನ್ವಿತ ಆಟಗಾರರಿದ್ದು ಯಾವುದೇ ಕ್ಷಣದಲ್ಲೂ ಸಿಡಿದು ಬೀಳುವ ಕ್ಷಮತೆ ತಂಡಕ್ಕೆ ಇದೆ. ಆಲ್‍ರೌಂಡರ್ ಶಕೀಬ್ ಅಲ್ ಹಸನ್ ಟೂರ್ನಿಯಲ್ಲಿ 476 ರನ್ ಗಳಿಸಿ 10 ವಿಕೆಟ್ ಪಡೆದು ಮಿಂಚುತ್ತಿದ್ದಾರೆ. ಮತ್ತು ಆರಂಭಿಕ ತಮೀಮ್ ಇಕ್ಬಾಲ್, ಮುಷ್ಫಿಕರ್ ರಹೀಮ್, ಮಹಮದುಲ್ಲಾ ಮತ್ತು ಲಿಟನ್ ದಾಸ್ ಅವರು ಉತ್ತಮ ಲಯದಲ್ಲಿರುವುದರಿಂದ ಬಾಂಗ್ಲಾದೇಶವನ್ನು ಕಡೆಗಣಿಸುವಂತಿಲ್ಲ. ಆದರೆ ತಂಡದಲ್ಲಿ ಉತ್ತಮ ಹೊಂದಾಣಿಕೆ ಆಟದ ಕೊರತೆ ಇದ್ದು, ಶಕೀಬ್ ಅಲ್ ಹಸನ್ ಬಿಟ್ಟರೆ ಬೇರೆ ಆಟಗಾರರು ರನ್ ಹೊಡೆಯಲು ಕಷ್ಟಪಡುತ್ತಿದ್ದಾರೆ.

virat kohli 3

ಭಾರತ ವಿಶ್ವಕಪ್‍ನಲ್ಲಿ 7 ಪಂದ್ಯಗಳನ್ನು ಆಡಿದ್ದು ಅದರಲ್ಲಿ 5 ರಲ್ಲಿ ಗೆದ್ದು ಒಂದರಲ್ಲಿ ಸೋತಿದೆ ಮತ್ತು ಒಂದು ಪಂದ್ಯ ಮಳೆಯ ಕಾರಣಕ್ಕೆ ರದ್ದಾಗಿದ್ದು, ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೂರ್ನಿಯಲ್ಲಿ 7 ಪಂದ್ಯಗಳನ್ನು ಆಡಿರುವ ಬಾಂಗ್ಲಾದೇಶ 3 ರಲ್ಲಿ ಗೆದ್ದು 3 ರಲ್ಲಿ ಸೋತು ಒಂದು ಪಂದ್ಯ ಮಳೆಯಿಂದ ರದ್ದು ಆಗಿರುವ ಕಾರಣ ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

team india orrange

ದೊಡ್ಡ ದೊಡ್ಡ ತಂಡಗಳನ್ನು ಬಗ್ಗು ಬಡಿದು ವಿಶ್ವಕಪ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಕೊಹ್ಲಿ ಪಡೆ ಹೆಚ್ಚಿನ ಆತ್ಮವಿಶ್ವಾಸದಿಂದ ಆಡುವಂತಿಲ್ಲ ಏಕೆಂದರೆ ಇದೇ ಬಾಂಗ್ಲಾದೇಶ ತಂಡ 2007ರ ವಿಶ್ವಕಪ್‍ನಲ್ಲಿ ಭಾರತವನ್ನು ಸೋಲಿಸಿತ್ತು. ಅಂಕಿಅಂಶಗಳನ್ನು ನೋಡುವುದಾದರೆ ಉಭಯ ತಂಡಗಳು ವಿಶ್ವಕಪ್‍ನಲ್ಲಿ ಕೇವಲ ಮೂರು ಬಾರಿ ಮುಖಾಮುಖಿಯಾಗಿದ್ದು ಇದರಲ್ಲಿ ಭಾರತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

Team India B

ಪಿಚ್ ರೀಪೋರ್ಟ್
ಇನ್ನೂ ಬರ್ಮಿಗ್ಹ್ಯಾಮ್‍ನ ಈ ಮೈದಾನ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಬ್ಯಾಟ್ಸ್‍ಮನ್‍ಗಳ ಪಾಲಿನ ಸ್ವರ್ಗ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಇಂಗ್ಲೆಂಡ್ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಒಟ್ಟು 643 ರನ್‍ಗಳು ದಾಖಲಾಗಿದ್ದವು. ಇಂದು ನಡೆಯುವ ಪಂದ್ಯದಲ್ಲಿ ರನ್ ಹೊಳೆ ಹರಿಯುವ ನಿರೀಕ್ಷೆ ಇದ್ದು, ಟಾಸ್ ಗೆದ್ದವರು ಮೊದಲು ಬ್ಯಾಟ್ ಮಾಡುವ ಸಾಧ್ಯತೆ ಇದೆ.

TAGGED:bangladeshenglandindiaShakib Al Hasanvirat kohliworld cupಇಂಗ್ಲೆಂಡ್ಬಾಂಗ್ಲಾದೇಶಭಾರತವಿರಾಟ್ ಕೊಹ್ಲಿವಿಶ್ವಕಪ್ಶಕೀಬ್ ಅಲ್ ಹಸನ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
9 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
28 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
35 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
1 hour ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?