ಬೆಂಗಳೂರು: ಭಾನುವಾರ ಭಾರತ (India) ಮತ್ತು ನೆದರ್ಲ್ಯಾಂಡ್ಸ್ (Netherlands) ಮಧ್ಯೆ ಕ್ರಿಕೆಟ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ (Tight Police Security) ಏರ್ಪಡಿಸಲಾಗಿದೆ.
ವಿಶ್ವಕಪ್ ಟೂರ್ನಿಯ (World Cup Cricket) ಒಟ್ಟು 5 ಲೀಗ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದಿದ್ದು ಭಾನುವಾರ ಕೊನೆಯ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಸಚಿನ್ ದಾಖಲೆ ಸರಿಗಟ್ಟಿದ್ದೇ ತಡ ಬೆಂಗ್ಳೂರಿನ ರಸ್ತೆಗಳಿಗೆ ಕೊಹ್ಲಿ ಹೆಸರಿಡಲು ಒತ್ತಾಯ
ಭಾರತದ ಕೊನೆಯ ಲೀಗ್ ಪಂದ್ಯ ಆಗಿದ್ದು ಈಗಾಗಲೇ ಎಲ್ಲಾ ಟಿಕೆಟ್ಗಳು ಮಾರಾಟವಾಗಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಮೈದಾನಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
9 ಜನ ಎಸಿಪಿ, 28 ಇನ್ಸ್ ಪೆಕ್ಟರ್, 86 ಜನ ಪಿಎಸ್ಐ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 4 ಕೆಎಎಸ್ಆರ್ಪಿ ತುಕಡಿ, 2 ಡಿ ಸ್ಪಾಟ್ ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.
ಭದ್ರತೆ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್.ಟಿ ಪ್ರತಿಕ್ರಿಯಿಸಿ, ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಗೇಟ್ ಬಳಿ ವಿದ್ವಾಂಸಕ ಕೃತ್ಯ ತಪಾಸಣೆ ಕೈಗೊಳ್ತೇವೆ. ಟಿಕೆಟ್ ಹಿಂದೆ ನಮೂದಿಸಿರುವ ಎಲ್ಲಾ ನಿಯಮಗಳನ್ನು ಕ್ರೀಡಾಭಿಮಾನಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.