Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ನಕಲಿ ಗಾಂಧಿ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಹುಲ್ ಗಾಂಧಿ ನಕಲಿ ಗಾಂಧಿ: ಬೊಮ್ಮಾಯಿ

Bengaluru City

ರಾಹುಲ್ ಗಾಂಧಿ ನಕಲಿ ಗಾಂಧಿ: ಬೊಮ್ಮಾಯಿ

Public TV
Last updated: October 2, 2022 1:01 pm
Public TV
Share
3 Min Read
BASAVARAJ BOMMAI 2
SHARE

– ಇಡೀ ಕಾಂಗ್ರೆಸ್ ಪಾರ್ಟಿ ಬೇಲ್ ಮೇಲೆ ಹೊರಗೆ ಇದೆ

ಬೆಂಗಳೂರು: ಗಾಂಧಿ ಜಯಂತಿಯ ದಿನದಂದು ನಕಲಿ ಗಾಂಧಿಗಳ ಬಗ್ಗೆ ಯಾಕೆ ಮಾತಾಡೋದು. ರಾಹುಲ್ ಗಾಂಧಿ (Rahul Gandhi) ನಕಲಿ ಗಾಂಧಿ. ಇಡೀ ಕಾಂಗ್ರೆಸ್ ಪಾರ್ಟಿ ಬೇಲ್ ಮೇಲೆ ಹೊರಗೆ ಇದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ (Sonia Gandhi)  ಎಲ್ಲರೂ ಬೇಲ್ ಮೇಲೆ ಇದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

Contents
  • – ಇಡೀ ಕಾಂಗ್ರೆಸ್ ಪಾರ್ಟಿ ಬೇಲ್ ಮೇಲೆ ಹೊರಗೆ ಇದೆ
  • Live Tv

rahul gandhi 6

ಬಿಜೆಪಿ ಭ್ರಷ್ಟಾಚಾರ ಪಕ್ಷ ಎಂಬ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಗಾಂಧಿ ಜಯಂತಿಯ ದಿನದಂದು ನಕಲಿ ಗಾಂಧಿಗಳ ಬಗ್ಗೆ ಯಾಕೆ ಮಾತಾಡೋದು. ರಾಹುಲ್ ಗಾಂಧಿ (Rahul Gandhi) ನಕಲಿ ಗಾಂಧಿ. ಇಡೀ ಕಾಂಗ್ರೆಸ್ ಪಾರ್ಟಿ ಬೇಲ್ ಮೇಲ್ ಹೊರಗೆ ಇದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ (Sonia Gandhi)  ಎಲ್ಲರೂ ಬೇಲ್ ಮೇಲೆ ಇದ್ದಾರೆ. ಭ್ರಷ್ಟಾಚಾರದ ಮೇಲೆ ಅವರು ಬೇಲ್ ಮೇಲೆ ಇದ್ದಾರೆ. ಅವರು ನಮ್ಮ ಬಗ್ಗೆ ಮಾತಾಡೋದಾ? ನಮ್ಮ ರಾಜ್ಯದ ಕಾಂಗ್ರೆಸ್ ಅಧ್ಯಕ್ಷರು (ಡಿಕೆಶಿವಕುಮಾರ್) ಬೇಲ್ ಮೇಲೆ ಹೊರಗೆ ಇರೋದು. ಪಾಪ ಎರಡು ವರ್ಷದಿಂದ ಕೇಸ್ ನಡೆಯುತ್ತಿದೆ. ಇವರು ನಮ್ಮ ಬಗ್ಗೆ ಮಾತಾಡೋದಾ? ಕಾಂಗ್ರೆಸ್‍ನವರಿಗೆ ಕರ್ನಾಟಕ ATM ಆಗಿತ್ತು. ಅದು ಕೈ ತಪ್ಪಿದೆ ಅಂತ ಕಾಂಗ್ರೆಸ್‍ನವರು ಹೀಗೆ ಮಾತನಾಡುತ್ತಿದ್ದಾರೆ. ಕರ್ನಾಟಕ ಕೈ ತಪ್ಪಿದೆ ಅಂತ ಅವರಿಗೆ ಕೊರಗು ಇದೆ. ಹೀಗಾಗಿ ಆರೋಪ ಮಾಡ್ತಿದ್ದಾರೆ. ನಮ್ಮಲ್ಲಿ 40% ಇಲ್ಲ ಯಾವುದು ಇಲ್ಲ. ಕಾಂಗ್ರೆಸ್‍ನವರು ದುರುದ್ದೇಶದ ಪ್ರಚಾರ ಮಾಡುತ್ತಿದ್ದಾರೆ. ಪದೇ ಪದೇ ಹೇಳ್ತೀನಿ ಯಾವುದೇ ದಾಖಲೆ ಇದ್ದರೆ ಕೊಡಲಿ. ಆ ಬಗ್ಗೆ ತನಿಖೆ ಮಾಡಿಸ್ತೀನಿ. ಇದೇ ನಮ್ಮ ಸ್ಟಾಂಡ್ ಎಂದು ವಾಗ್ದಾಳಿ ನಡೆಸಿದರು.

BASAVARAJ BOMMAI

ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆ, ವಿಧಾನಸೌಧದ ಗಾಂಧಿಜೀ ಪ್ರತಿಮೆ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ (Lal Bahadur Shastri) ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಬೊಮ್ಮಾಯಿ ಅವರು, ರಾಷ್ಟ್ರಪಿತ ಗಾಂಧಿಯವರ ಜನ್ಮ ದಿನ ಇಂದು. ನಾವೆಲ್ಲರು ಗೌರವ ಅರ್ಪಣೆ ಮಾಡಿದ್ದೇವೆ. ಗಾಂಧಿ ದೇಶಕ್ಕೆ ಪ್ರೇರಣ ಶಕ್ತಿ. ಅವರ ಬದುಕು ಆದರ್ಶ. ಹಲವು ಅಪಮಾನ ಸಹಿಸಿಕೊಂಡು ಹೋರಾಟ ಮಾಡಿದವರು. ದೇಶಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿದವರು. ಗಾಂಧಿಯವರ ನೇತೃತ್ವ ಸಿಗೋವರೆಗೂ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ಸಿಕ್ಕಿತು. ಸತ್ಯ, ಅಹಿಂಸೆ ಎಂಬ ಎರಡು ಅಸ್ತ್ರ ಕೊಟ್ಟರು. ಈ ಎರಡು ಅಸ್ತ್ರ ಪ್ರಬಲವಾಗಿದ್ದವು. ಬ್ರಿಟಿಷರ ವಿರುದ್ಧ ಜನಾಂದೋಲ ಸೃಷ್ಟಿ ಆಗಿ ಸ್ವಾತಂತ್ರ್ಯ ಸಿಕ್ಕಿತು. ಗಾಂಧಿಯವರ ಜೀವನವೇ ನಮಗೆ ಸಂದೇಶ. ಸತ್ಯ, ಅಹಿಂಸೆ ಮಾರ್ಗವನ್ನು ಅವರು ಬಿಡಲಿಲ್ಲ. ಇಂದೂ ಕೂಡಾ ನಮ್ಮ ದೇಶಕ್ಕೆ ಅಂತರ್ ಸತ್ವದ ಪ್ರೇರಣೆ ಗಾಂಧಿಜೀ. ಅವರು ಹೇಳಿದ ಮಾತು ಈಗಲೂ ಪ್ರಸ್ತುತ ಎಂದರು. ಇದನ್ನೂ ಓದಿ: ಅಭಿವೃದ್ಧಿ ಆಗಬಾರದೆಂದು ನಾನು ಭಾವಿಸಿದ್ದರೆ ನೀವು ಮಲ್ಲೇಶ್ವರಂನಲ್ಲಿ ಶಾಸಕರೇ ಆಗುತ್ತಿರಲಿಲ್ಲ: ಹೆಚ್‍ಡಿಕೆ

BASAVARAJ BOMMAI 1

ಲಾಲ್ ಬಹಾದ್ದೂರ್ ಶಾಸ್ತ್ರಿಗಳ ಜಯಂತಿ ಕೂಡ ಇಂದು ನಡೆಸಲಾಗಿದೆ. ಗಾಂಧಿಜೀ ಶಾಸ್ತ್ರಿಯವರ ನಡುವೆ ಸಾಮ್ಯತೆ ಇದೆ. ಒಂದೇ ದಿನ ಅವರ ಜಯಂತಿ ದೈವ ಇಚ್ಛೆ. ಶಾಸ್ತ್ರಿಗಳು ಇಂದಿಗೂ ಕೂಡಾ ಜನ ಮಾನಸದಲ್ಲಿ ಇದ್ದಾರೆ. ಬಡತನದಿಂದ ಬಂದರು ಬದುಕಿನಲ್ಲಿ ರಾಜೀ ಮಾಡಿಕೊಂಡಿಲ್ಲ. ಪ್ರಧಾನಿ ಆದ್ರು ಅವರ ಆದರ್ಶ ಬಿಡಲಿಲ್ಲ. ದೇಶವನ್ನು ಸಮರ್ಥವಾಗಿ ನಡೆಸಿದರು. ಇಂಡೋ-ಪಾಕ್ ಕದನದಲ್ಲಿ ಸೇನೆಗೆ ಧೈರ್ಯ ಹೇಳಿದ್ದರು. ಯುದ್ದ ಗೆಲ್ಲಲು ಪ್ರೇರಣೆ ನೀಡಿದ್ದರು. ನಾವು ಅಂದು ಆಹಾರದಲ್ಲಿ ಸ್ವಾವಲಂಬಿ ಆಗಿರಲಿಲ್ಲ. ಹಸಿರು ಕಾಂತ್ರಿಗೆ ಅಡಿಪಾಯ ಹಾಕಿದ್ರು. ಜೈ ಜವಾನ್ ಜೈ ಕಿಸಾನ್ ಅಂತ ಹೇಳಿದರು. ಸತ್ಯದಿಂದ ಅವರು ಆಡಳಿತ ಮಾಡಿದರು. ಅವರ ಆಡಳಿತ ನಮಗೆ ಮಾರ್ಗದರ್ಶನ ಎಂದು ನುಡಿದರು. ಇದನ್ನೂ ಓದಿ: ಸಿಪಿವೈ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ ಪ್ರಕರಣ- 14 ಜನರ ಮೇಲೆ FIR ದಾಖಲು

ಬಳಿಕ ಮಾಧ್ಯಮಗಳೊಂದಿಗೆ ಚನ್ನಪಟ್ಟಣ ಗಲಾಟೆ ವಿಚಾರವಾಗಿ ಮಾತನಾಡಿ, ಮಾಹಿತಿ ತರಿಸಿಕೊಳ್ತಿದ್ದೇನೆ. ಸರ್ಕಾರದ ಕಾರ್ಯಕ್ರಮ ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು. ಹಿಂಸೆಗೆ ಅವಕಾಶ ಕೊಡಬಾರದು. ನಾವು ಪ್ರಬುದ್ಧವಾಗಿ ಇದ್ದೇವೆ. ಅನುದಾನ ಜನರಿಗೆ ಮುಟ್ಟಬೇಕು. ಘಟನೆ ಬಗ್ಗೆ ವರದಿ ಪಡೆದುಕೊಳ್ತೀನಿ ಎಂದರು. ಇದನ್ನೂ ಓದಿ: ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ

ಇದೇ ವೇಳೆ ಫಿಟ್ ಇಂಡಿಯಾ ಫ್ರೀಡಂ ರನ್‍ಗೆ ಸಿಎಂ ಚಾಲನೆ ನೀಡಿದರು. ಕ್ರೀಡಾ ಇಲಾಖೆ ಆಯೋಜನೆ ಮಾಡಿರೋ ಫಿಟ್ ಇಂಡಿಯಾ ರನ್ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ, ಸಿಎಸ್ ವಂದಿತಾ ಶರ್ಮಾ ಸೇರಿ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Live Tv
[brid partner=56869869 player=32851 video=960834 autoplay=true]

TAGGED:Gandhijilal bahadur shastriRahul GandhiSonia Gandhiಕಾಂಗ್ರೆಸ್ಗಾಂಧೀಜಯಂತಿಬಸವರಾಜ ಬೊಮ್ಮಾಯಿರಾಹುಲ್ ಗಾಂಧಿಲಾಲ್ ಬಹಾದ್ದೂರ್ ಶಾಸ್ತ್ರಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?