Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಮಹಾಸಾಗರದಲ್ಲಿ ಖನಿಜ ಶೋಧಕ್ಕೆ ಒಪ್ಪಿಗೆ ನೀಡಿದ ISA – ಭಾರತಕ್ಕೆ ಏನು ಲಾಭ? 
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದೂ ಮಹಾಸಾಗರದಲ್ಲಿ ಖನಿಜ ಶೋಧಕ್ಕೆ ಒಪ್ಪಿಗೆ ನೀಡಿದ ISA – ಭಾರತಕ್ಕೆ ಏನು ಲಾಭ? 

Latest

ಹಿಂದೂ ಮಹಾಸಾಗರದಲ್ಲಿ ಖನಿಜ ಶೋಧಕ್ಕೆ ಒಪ್ಪಿಗೆ ನೀಡಿದ ISA – ಭಾರತಕ್ಕೆ ಏನು ಲಾಭ? 

Public TV
Last updated: October 7, 2025 8:29 pm
Public TV
Share
4 Min Read
Deep Sea Mineral
SHARE

ಚಂದ್ರಯಾನ, ಮಂಗಳಯಾನ ಮಾಡಿ ಬಾಹ್ಯಾಕಾಶಕ್ಕೆ ಜಿಗಿದಿದ್ದ ಭಾರತ… ಈಗ ಪಾತಾಳದ ಖನಿಜಗಳ ವಿಸ್ಮಯ ಲೋಕಕ್ಕೂ ಕಾಲಿಟ್ಟಿದೆ. ಇತ್ತೀಚೆಗೆ ಹಿಂದೂ ಮಹಾಸಾಗರದ ಕಾರ್ಲ್ಸ್‌ಬರ್ಗ್ ರಿಡ್ಜ್‌ನಲ್ಲಿ ಪಾಲಿಮೆಟಾಲಿಕ್ ಸಲ್ಫೈಡ್‌ಗಳ ನಿಕ್ಷೇಪ (PMS) ಶೋಧಕ್ಕೆ ಅಂತರರಾಷ್ಟ್ರೀಯ ಸಮುದ್ರತಳ ಪ್ರಾಧಿಕಾರದ (ISA) ಜೊತೆ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ. ಇದರಿಂದ PMS ಶೋಧನೆಗಾಗಿ ಎರಡು ಒಪ್ಪಂದಗಳನ್ನು ಮಾಡಿಕೊಂಡ ವಿಶ್ವದ ಮೊದಲ ದೇಶ ಭಾರತವಾಗಿ ಹೊರಹೊಮ್ಮಿದೆ. 

3

ಕಾರ್ಲ್ಸ್‌ಬರ್ಗ್ ರಿಡ್ಜ್‌ PMS ಶೋಧಕ್ಕಾಗಿ ಅಂತರರಾಷ್ಟ್ರೀಯ ಸಮುದ್ರತಳದಲ್ಲಿ ಹಂಚಿಕೆಯಾದ ಅತಿದೊಡ್ಡ ಪ್ರದೇಶವಾಗಿದೆ. ಭಾರತ 2024 ರಲ್ಲಿ ISA ಗೆ ಈ ಬಗ್ಗೆ ಅರ್ಜಿಯನ್ನು ಸಲ್ಲಿಸಿತ್ತು. ಪರಿಶೀಲನೆಯ ನಂತರ ISA ಭಾರತಕ್ಕೆ ಕಾರ್ಲ್ಸ್‌ಬರ್ಗ್ ರಿಡ್ಜ್‌ನಲ್ಲಿ 10,000 ಚದರ ಕಿಮೀ ಪ್ರದೇಶವನ್ನು ಮಂಜೂರು ಮಾಡಿದೆ. ಗೋವಾ ಮೂಲದ ರಾಷ್ಟ್ರೀಯ ಧ್ರುವ ಮತ್ತು ಸಾಗರ ಸಂಶೋಧನಾ ಕೇಂದ್ರ (NCPOR)  2026 ರಲ್ಲಿ PMS ಶೋಧಕಾರ್ಯ ಕೈಗೊಳ್ಳಲಿದೆ.

PMS ಎಂದರೇನು? ಅದು ಭಾರತಕ್ಕೆ ಏಕೆ ಮುಖ್ಯ?
ಪಾಲಿಮೆಟಾಲಿಕ್ ಸಲ್ಫೈಡ್‌ (PMS) ಇದು ಸಾಗರ ತಳದಲ್ಲಿರುವ ನಿಕ್ಷೇಪಗಳಾಗಿದೆ. ತಾಮ್ರ, ಸತು, ಸೀಸ, ಚಿನ್ನ ಮತ್ತು ಬೆಳ್ಳಿಯಂತಹ  ನಿರ್ಣಾಯಕ ಲೋಹಗಳಿಂದ ಈ ನಿಕ್ಷೇಪಗಳು ತುಂಬಿವೆ. ಈ ಖನಿಜಗಳನ್ನು ಹೊಂದಿರುವ ಭೂ ಪ್ರದೇಶ ಭಾರತಕ್ಕೆ ಬಹಳ ಸೀಮಿತವಾಗಿರುವುದರಿಂದ, ಆಳ ಸಾಗರದಲ್ಲಿ PMSನ್ನು ಅನ್ವೇಷಿಸುವುದು ಬಹಳ ಮುಖ್ಯವಾಗಿದೆ. ಈ ಲೋಹಗಳು ಉನ್ನತ ತಂತ್ರಜ್ಞಾನ, ನವೀಕರಿಸಬಹುದಾದ ಇಂಧನಗಳಿಗೆ ಬಹಳ ಮುಖ್ಯವಾಗಿದೆ. 

PMS ಹುಡುಕಾಟ ಹೇಗೆ?
2016 ರಲ್ಲಿ ISA ಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದಾಗಿನಿಂದ ನೈಋತ್ಯ ಹಿಂದೂ ಮಹಾಸಾಗರದಲ್ಲಿ ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ.  

5

ಮೊದಲ ಹಂತದಲ್ಲಿ ನಿಕ್ಷೇಪಗಳ ಹುಡುಕಾಟಕ್ಕಾಗಿ ಹಡಗು‌, ಡಿಟೆಕ್ಟರ್‌ ಉಪಕರಣಗಳನ್ನು ಬಳಸಿಕೊಂಡು ಸಮೀಕ್ಷೆಗಳನ್ನು ನಡೆಸಿ PMS  ಇರುವ ಸಂಭಾವ್ಯ ಸ್ಥಳಗಳನ್ನು ಗುರುತಿಸಲಾಗುತ್ತದೆ. ಎರಡನೇ ಹಂತದಲ್ಲಿ PMS  ಇದರ ಬಗ್ಗೆ ದೃಢಪಡಿಸಿಕೊಳ್ಳಲು AUV ಗಳು ಮತ್ತು ರಿಮೋಟ್ ಆಪರೇಟಿಂಗ್ ವೆಹಿಕಲ್ಸ್ (ROV) ನಂತಹ ಸುಧಾರಿತ ವ್ಯವಸ್ಥೆ ಬಳಸಿಕೊಂಡು ನಿಕ್ಷೇಪಗಳ ಪತ್ತೆ ಮಾಡಲಾಗುತ್ತದೆ. ಮೂರನೇ ಹಂತದಲ್ಲಿ ಗುರುತಿಸಲಾದ PMS ನಿಕ್ಷೇಪಗಳ ಸಂಪನ್ಮೂಲದ ಮೌಲ್ಯಮಾಪನ ಮಾಡಲಾಗುತ್ತದೆ. ‌

ಮತ್ಸ್ಯ -6000 ಯೋಜನೆ
ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದ “ಡೀಪ್‌ ಓಷನ್‌ ಮಿಷನ್‌’ನತ್ತ ಭಾರತ ದೊಡ್ಡ ಹೆಜ್ಜೆ ಇಟ್ಟಿದೆ. ಇದಕ್ಕಾಗಿ “ಭಾರತ ಮತ್ಸ್ಯ-6000′ ಯೋಜನೆ ರೂಪಿಸಿದ್ದು ಈ ಯೋಜನೆ ಭಾಗವಾಗಿ ಸಮುದ್ರದಾಳಕ್ಕೆ ಹೋಗುವ ಭಾರತೀಯ ವಿಜ್ಞಾನಿಗಳು ಫ್ರಾನ್ಸ್‌ನಲ್ಲಿ 5000 ಮೀಟರ್‌ ಆಳದವರೆಗೆ ಹೋಗುವ ತರಬೇತಿ ಪೂರ್ಣಗೊಳಿಸಿದ್ದಾರೆ.

ಕಾರ್ಲ್ಸ್‌ಬರ್ಗ್ ರಿಡ್ಜ್‌ನ ಮಹತ್ವವೇನು?
ಕಾರ್ಲ್ಸ್‌ಬರ್ಗ್ ರಿಡ್ಜ್ ಪ್ರದೇಶ ಭಾರತಕ್ಕೆ ಹೆಚ್ಚು ಹತ್ತಿರದಲ್ಲಿದೆ. ಇದು PMS ನಿಕ್ಷೇಪಗಳ ಸಂಭಾವ್ಯ ತಾಣವಾಗಿದೆ. ಕಳೆದ ಮೂರು ದಶಕಗಳಲ್ಲಿ ಭಾರತ ಈ ಬಗ್ಗೆ ಸಾಕಷ್ಟು ವೈಜ್ಞಾನಿಕ ಸಂಶೋಧನೆ ನಡೆಸಿದೆ. 

ಈ ಪ್ರದೇಶದ ಸಮುದ್ರತಳದ 2,000–5,000 ಮೀಟರ್ ಆಳದಲ್ಲಿ ಕಲ್ಲಿನಿಂದ ಕೂಡಿದ ಭೂಪ್ರದೇಶದಿಂದ ಕೂಡಿದ್ದು,  ಅಪಾರ ಪ್ರಮಾಣದ ಖನಿಜಗಳನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಪ್ರದೇಶ ಇತರ ಆಳ-ಸಮುದ್ರ ಖನಿಜ ಶೋಧಕ್ಕಿಂತ ಹೆಚ್ಚು ಸವಾಲಿನದ್ದಾಗಿದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನ ಹೊಂದಿರುವ ಉಪಕರಣ ಹಾಗೂ ಹಡಗುಗಳ ಅಗತ್ಯವಿದೆ. 

2 1

ISA ಖನಿಜ ಶೋಧಕ್ಕೆ ಹೇಗೆ ಒಪ್ಪಿಗೆ ನೀಡುತ್ತದೆ? 
ISA ಒಂದು ಸ್ವಾಯತ್ತ ಅಂತರರಾಷ್ಟ್ರೀಯ ಸಂಸ್ಥೆಯಾಗಿದೆ. ಇದು ವಿಶ್ವಸಂಸ್ಥೆಯ ಸಮುದ್ರ ಕಾನೂನು(UNCLOS) ಚೌಕಟ್ಟಿನ ಅಡಿಯಲ್ಲಿ ಅಂತರರಾಷ್ಟ್ರೀಯ ಸಮುದ್ರ ಖನಿಜ ಪರಿಶೋಧನೆಗಾಗಿ ಸ್ಥಳಗಳನ್ನು ಹಂಚಿಕೆ ಮಾಡುತ್ತದೆ. ಒಂದು ದೇಶವು ಸರ್ಕಾರ, ಸಾರ್ವಜನಿಕ ವಲಯ ಅಥವಾ ಪ್ರಾಯೋಜಿತ ಸಂಸ್ಥೆಯ ಮೂಲಕ ISAಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 

ಈ ಅರ್ಜಿಯು ವಿವರವಾದ ಕಾರ್ಯ ಯೋಜನೆ, ಹಣಕಾಸು/ತಾಂತ್ರಿಕ ಸಾಮರ್ಥ್ಯ ದಾಖಲೆಗಳೊಂದಿಗೆ ಪ್ರಸ್ತಾವಿತ ಪ್ರದೇಶದ ಮಾಹಿತಿ ಒದಗಿಸಬೇಕು. ಈ ಅರ್ಜಿಯನ್ನು ISA ಕಾನೂನು ಮತ್ತು ತಾಂತ್ರಿಕ ಆಯೋಗ (LTC) ಪರಿಶೀಲಿಸುತ್ತದೆ. ಎಲ್ಲಾ ಮಾಹಿತಿ ಆಧರಿಸಿ, ಅಂತಿಮ ಅನುಮೋದನೆಗಾಗಿ ISA ಕೌನ್ಸಿಲ್‌ಗೆ ಶಿಫಾರಸು ಮಾಡುತ್ತದೆ. ಬಳಿಕ ಚರ್ಚಿಸಿ ಅನುಮತಿ ನೀಡಬೇಕೇ? ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ. 

ಭಾರತದಿಂದ ISAಗೆ ಮತ್ತೊಂದು ಅರ್ಜಿ
ಭಾರತವು ಹಿಂದೂ ಮಹಾಸಾಗರದ ಉದ್ದಕ್ಕೂ ಖನಿಜ ಶೋಧಕ್ಕೆ ತೀರ್ಮಾನಿಸಿದೆ.  ಭಾರತ ಸರ್ಕಾರದ ಬ್ಲೂ ಎಕಾನಮಿ ಉತ್ತೇಜಿಸಲು ಖನಿಜ ಶೋಧನೆಗಾಗಿ ಹಿಂದೂ ಮಹಾಸಾಗರದಲ್ಲಿ ಹೆಚ್ಚುವರಿ ಸ್ಥಳಗಳನ್ನು ಸ್ವಾಧೀನಪಡಿಸಿಕೊಳ್ಳಲು ನೋಡುತ್ತಿದೆ. ಮಧ್ಯ ಹಿಂದೂ ಮಹಾಸಾಗರದ ಅಫನಾಸಿ-ನಿಕಿಟಿನ್ ಸೀಮೌಂಟ್‌ನಲ್ಲಿರುವ ಕೋಬಾಲ್ಟ್ ಭರಿತ ಫೆರೋಮ್ಯಾಂಗನೀಸ್ ಕ್ರಸ್ಟ್‌ಗಳ  ಶೋಧಕ್ಕೆ ಭಾರತ ಮುಂದಾಗಿದೆ. ಈ ಅರ್ಜಿ ISAಯಲ್ಲಿ ಪರಿಶೀಲನೆ ಹಂತದಲ್ಲಿದೆ.

ಭಾರತಕ್ಕೆ ಈ ಯೋಜನೆಯ ಲಾಭವೇನು? 
ಭಾರತದ ಆರ್ಥಿಕತೆಯ ಅಭಿವೃದ್ಧಿಗೆ ಕೊಡುಗೆ ನೀಡುವ ಹಲವಾರು ಖನಿಜ ನಿಕ್ಷೇಪಗಳನ್ನು ಹಿಂದೂ ಮಹಾಸಾಗರ ಹೊಂದಿದೆ. ನೀಲಿ ಆರ್ಥಿಕತೆಯಲ್ಲಿ ಲಾಭದಾಯಕವಾದ ಕೈಗಾರಿಕೆಗಳಲ್ಲಿ ಖನಿಜ ಉದ್ಯಮವೂ ಒಂದು. ಹಿಂದೂ ಮಹಾಸಾಗರದ ಸಮುದ್ರತಳದಲ್ಲಿರುವ ಈ ನಿರ್ಣಾಯಕ ಖನಿಜಗಳು ಭವಿಷ್ಯದಲ್ಲಿ ಜಾಗತಿಕ ಇಂಧನ ಪರಿವರ್ತನೆಗೆ ದಾರಿ ಮಾಡಿಕೊಡಬಹುದುಮ ಎಂಬ ನಿರೀಕ್ಷೆ ಇದೆ.  ಈ ಮೂಲಕ ಭಾರತ ನಿರ್ಣಾಯಕ ಖನಿಜಗಳ ಪೂರೈಕೆಯ ವಿಷಯದಲ್ಲಿ ಸ್ವಾವಲಂಬಿಯಾಗುವ ಗುರಿ ತಲುಪುವ ಸಾಧ್ಯತೆ ಇದೆ. ಇದರೊಂದಿಗೆ ಕೈಗಾರಿಗಳಿಗೆ ಖನಿಜ ಬಹಳ ಅಗತ್ಯ. ಇದರಿಂದ ಕೈಗಾರಿಕೆ ಅಭಿವೃದ್ಧಿಯಾಗಿ, ದೇಶದ ಆರ್ಥಿಕತೆ ಪ್ರಗತಿಯಾಗಲಿದೆ. 

ಇತ್ತೀಚೆಗೆ ಅಮೆರಿಕದ ಟ್ಯಾರಿಫ್‌ ನೀತಿ, ಜೊತೆಗೆ ವಿಶ್ವದ ಬಹುತೇಕ ಭಾಗಗಳಲ್ಲಿ ಯುದ್ಧದಂತಹ ವಾತಾವರಣ ಇರುವುದರಿಂದ ಆಮದಿನ ಮೇಲೆ ಇದು ಭಾರೀ ಪರಿಣಾಮ ಬೀರುತ್ತದೆ. ಇದರಿಂದ ಭಾರತವೇ ಅಗತ್ಯ ಖನಿಜಗಳನ್ನು ಶೋಧಿಸಿ ಬಳಸಿಕೊಂಡರೆ, ಹಾಗೂ ರಫ್ತು ಮಾಡಿದರೆ ಬೇರೆ ದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. 

4

 ಸಮುದ್ರ ಜೀವಿಗಳ ನಾಶದ ಆತಂಕ
ಭೂಮಿ ಮೇಲಿನ ಗಣಿಗಾರಿಕೆಯಂತೆಯೇ ಆಳ ಸಮುದ್ರ ಗಣಿಗಾರಿಕೆಗೂ ಪ್ರಪಂಚದಾದ್ಯಂತ ವಿರೋಧವಿದೆ. ಇದು ನಿಸರ್ಗದ ಅಸಮತೋಲನ ಸೃಷ್ಟಿಸಲಿದೆ. ಸಮುದ್ರ ಜೀವಿಗಳ ನಾಶಕ್ಕೆ ಕಾರಣವಾಗಲಿದೆ ಎಂದು ಅನೇಕ ಸಂಘಟನೆಗಳು ಇದರ ವಿರುದ್ಧ ಧ್ವನಿ ಎತ್ತಿವೆ.

TAGGED:Deep-Sea MineralindiaIndian OceanISAMiningPMS
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
30 seconds ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
13 minutes ago
araga jnanendra
Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
By Public TV
26 minutes ago
Doddaballapura Police
Chikkaballapur

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Public TV
By Public TV
40 minutes ago
indore murder
Crime

ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Public TV
By Public TV
44 minutes ago
Stone Pelting Chikkamagaluru 1
Chikkamagaluru

ಚಿಕ್ಕಮಗಳೂರು | ಅನ್ಯಕೋಮಿನ ಯುವಕರಿಂದ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ಆರೋಪ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?