Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

Cricket

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

Public TV
Last updated: September 29, 2025 12:47 am
Public TV
Share
3 Min Read
asia cup champions team india
SHARE

ದುಬೈ: ಆರಂಭದಲ್ಲಿ ವಿಕೆಟ್‌ ಕಳೆದುಕೊಂಡಿದ್ದರೂ ತಿಲಕ್‌ ವರ್ಮಾ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ 9ನೇ ಬಾರಿ ಭಾರತ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

ಭಾನುವಾರದ ಏಷ್ಯಾ ಕಪ್‌ ಫೈನಲ್‌ ಹೈವೋಲ್ಟೇಜ್‌ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ 7 ಬಾಲ್‌ಗೆ 10 ರನ್‌ ಬೇಕಾಗಿತ್ತು. ಫಹೀಮ್ ಅಶ್ರಫ್‌ ಕೊನೆ ಎಸೆತಕ್ಕೆ ಸಿಕ್ಸರ್‌ ಹೊಡೆಯಲು ಮುಂದಾಗಿ ಶಿವಂ ದುಬೆ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ನಿರ್ಗಮಿಸಿದ್ದು, ಭಾರತೀಯರಿಗೆ ಅರೆಕ್ಷಣ ಶಾಕ್‌ ನೀಡಿತು. ಕೊನೆ ಓವರ್‌ನಲ್ಲಿ 10 ರನ್‌ ಬೇಕಿತ್ತು. ಆಗ ತಿಲಕ್‌ ವರ್ಮಾಗೆ ರಿಂಕು ಸಿಂಗ್‌ ಜೊತೆಯಾದರು. ಲಾಸ್ಟ್‌ ಓವರ್‌ನ ಮೊದಲ ಬಾಲ್‌ಗೆ ತಿಲಕ್‌ 2 ರನ್‌ ಗಳಿಸಿದರು. ಮತ್ತೆ ಸಿಕ್ಸರ್‌ ಬಾರಿಸಿದರು. 3ನೇ ಬಾಲ್‌ಗೆ ಸಿಂಗಲ್‌ ಬಂದರು. 4ನೇ ಬಾಲ್‌ಗೆ ರಿಂಗ್‌ ಸಿಂಗ್‌ ಫೋರ್‌ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ‘ಆಪರೇಷನ್‌ ಸಿಂಧೂರ’ದಂತಿದ್ದ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಗೂ ಗೆದ್ದು ಬೀಗಿತು.

kuldeep yadav asia cup

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 19.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿತು. ನಂತರ ಬ್ಯಾಟಿಂಗ್‌ ಮಾಡಿದ ಭಾರತ 19.4 ಬಾಲ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

ಟೀಂ ಇಂಡಿಯಾ ಬ್ಯಾಟಿಂಗ್‌ ವೇಳೆ ಆರಂಭಿಕ ಆಘಾತಗಳನ್ನು ನೀಡಿತು. ಟೂರ್ನಿಯ ಕಳೆದ ಪಂದ್ಯಗಳಲ್ಲಿ ಅಬ್ಬರಿಸಿದ್ದ ಅಭಿಷೇಕ್‌ ವರ್ಮಾ ಹೈವೋಲ್ಟೇಜ್‌ ಪಂದ್ಯದಲ್ಲೇ ಕೇವಲ 5 ರನ್‌ ಗಳಿಸಿ ಕ್ಯಾಚ್‌ ನೀಡಿ ನಿರ್ಗಮಿಸಿದ್ದು, ಆಘಾತ ನೀಡಿತು. ಹೀಗಿರುವಾಗಲೇ ಕೇವಲ 1 ರನ್‌ಗೆ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌ ಔಟಾಗಿದ್ದು ತಂಡಕ್ಕೆ ಬರಸಿಡಿಲು ಬಡಿದಂತಾಯಿತು. ಶುಭಮನ್‌ ಗಿಲ್‌ ಕೂಡ ದೊಡ್ಡ ಹೊಡೆತಕ್ಕೆ ಮುಂದಾಗಿ 12 ರನ್‌ ಗಳಿಸಿ ನಿರ್ಗಮಿಸಿದರು. ತಂಡವು ಕೇವಲ 20 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತ್ತು.

ಆಗ ತಂಡಕ್ಕೆ ತಿಲಕ್‌ ವರ್ಮಾ ನೆರವಾದರು. ಜವಾಬ್ದಾರಿಯುತ ಆಟವಾಡಿದರು. ಅವರಿಗೆ ಸಂಜು ಸ್ಯಾಮ್ಸನ್‌ ಸಾಥ್‌ ನೀಡಿದರು. ನಿಧಾನಗತಿಯ ಆಟದ ಮೂಲಕ ಈ ಜೋಡಿ ಅರ್ಧಶತಕದ ಜೊತೆಯಾಟವಾಡಿದರು. ಗೆಲುವಿನತ್ತ ತಂಡವನ್ನು ಮುನ್ನಡೆಸಿದರು. ಈ ಮಧ್ಯೆ 24 ರನ್‌ಗಳಿಸಿ ಸ್ಯಾಮ್ಸನ್‌ ಔಟಾದರು. ಆಗ ತಿಲಕ್‌ಗೆ ಶಿವಂ ದುಬೆ ಜೊತೆಯಾದರು. ಈ ಜೋಡಿ 64 ರನ್‌ಗಳ ಜೊತೆಯಾಟವಾಡಿತು. ತಿಲಕ್ ಅರ್ಧಶತಕ ಸಿಡಿಸಿದರು. ಸಿಕ್ಸರ್‌, ಫೋರ್‌ಗಳ ಸುರಿಮಳೆ ಹರಿದುಬಂತು. ಇವರಿಬ್ಬರ ಜವಾಬ್ದಾರಿಯುತ ಆಟ ತಂಡದ ಗೆಲುವಿಗೆ ಕೊಡುಗೆ ನೀಡಿತು. ತಿಲಕ್‌ ವರ್ಮಾ ಔಟಾಗದೇ 69 ರನ್‌ ಸಿಡಿಸಿ ಆಪದ್ಬಾಂಧವನಂತೆ ಕಂಡರು. ಕೊನೆಗೆ ಭಾರತ ತಂಡ ಪಾಕ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ ಏಷ್ಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತು.

tilak varma

ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ತಾನ 146 ರನ್‌ ಗಳಿಸಿತ್ತು. ಆರಂಭಿಕರಾಗಿ ಕಣಕ್ಕಿಳಿದ ಸಾಹಿಬ್‌ಜಾದಾ ಫರ್ಹಾನ್, ಫಖರ್ ಜಮಾನ್ ಜೋಡಿ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್‌ಗೆ 84 ರನ್‌ಗಳ ಜೊತೆಯಾಟವಾಡಿ ಗಮನ ಸೆಳೆದರು. ಫರ್ಹಾನ್‌ 38 ಬಾಲ್‌ಗೆ ಅರ್ಧಶತಕ (57 ರನ್) ಗಳಿಸಿದರು. ವರುಣ್‌ ಚಕ್ರವರ್ತಿ 9ನೇ ಓವರ್‌ನಲ್ಲಿ ಮೊದಲ ವಿಕೆಟ್‌ ಪಡೆಯುವ ಮೂಲಕ ಜೊತೆಯಾಟಕ್ಕೆ ಬ್ರೇಕ್‌ ಹಾಕಿದರು.

ತಂಡದ ಮೊತ್ತ 113 ಇದ್ದಾಗ ಸೈಮ್ ಅಯೂಬ್ ಔಟಾದರು. ಈ ಮಧ್ಯೆ ಜಮಾನ್‌ಗೆ ಯಾವೊಬ್ಬ ಬ್ಯಾಟರ್‌ ಕೂಡ ಸಾಥ್‌ ನೀಡಲಿಲ್ಲ. ನಂತರ ಬಂದ ಮೊಹಮ್ಮದ್ ಹ್ಯಾರಿಸ್ ಶೂನ್ಯ ಸುತ್ತಿ ಪೆವಿಲಿಯನ್‌ ಸೇರಿದರು. 46 ರನ್‌ ಗಳಿಸಿದ್ದ ಜಮಾನ್‌ ಕ್ಯಾಚ್‌ ನೀಡಿ ಔಟಾದರು.

ಆರಂಭದಲ್ಲಿ ರನ್‌ ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಬೌಲರ್‌ಗಳು ನಂತರ ಪಾಕ್‌ ವಿರುದ್ಧ ಆರ್ಭಟಿಸಿದರು. ಬ್ಯಾಟರ್‌ಗಳ ಬೆವರಿಳಿಸಿದರು. ವಿಕೆಟ್‌ಗಳು ತರಗೆಲೆಯಂತೆ ಉರುಳಿದವು. ಯಾರೊಬ್ಬರು ಕೂಡ ಒಂದಂಕಿ ರನ್‌ ದಾಟಲು ಅವಕಾಶ ನೀಡಲಿಲ್ಲ. ಅಂತಿಮವಾಗಿ ಪಾಕಿಸ್ತಾನ 19.1 ಓವರ್‌ಗೆ ಆಲೌಟ್‌ ಆಗಿ 146 ರನ್‌ ಗಳಿಸಿತು.

ಟೀಂ ಇಂಡಿಯಾ ಪರ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಜಾದು ಮಾಡಿದರು. ಪಂದ್ಯದಲ್ಲಿ ನಾಲ್ಕು ವಿಕೆಟ್‌ ಕಿತ್ತು ಮಿಂಚಿದರು. ಜಸ್ಪ್ರಿತ್‌ ಬುಮ್ರಾ, ವರುಣ್‌ ಚಕ್ರವರ್ತಿ, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಕಿತ್ತರು.

TAGGED:Asia Cup 2025Asia Cup 2025 FinalIND vs PAKKuldeep YadavShivam dubeTilak Varmaಏಷ್ಯಾ ಕಪ್‌ 2025ಕುಲ್‍ದೀಪ್ ಯಾದವ್ತಿಲಕ್ ವರ್ಮಾಭಾರತ vs ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Brahmagantu Geetha Bharathi Bhat Marriage
ಸದ್ದಿಲ್ಲದೆ ವಿವಾಹವಾದ ಬ್ರಹ್ಮಗಂಟು ನಟಿ
Cinema Latest Sandalwood Top Stories
Dhanya Ramkumar Pruthvi Ambaar Chowkidar
ಇಷ್ಟ ಆದೆ ನೀನು ಅಂತಿದ್ದಾರೆ ಪೃಥ್ವಿ ಅಂಬಾರ್ – ಧನ್ಯ
Cinema Latest Sandalwood
bigg boss season 12 kannada Rakshita Dhruvanth is in the secret room
ಅಯ್ಯೋ ದೇವರೇ ಒಂದೇ ರೂಮಿನಲ್ಲಿ ನಿಮ್ಮ ಜೊತೆ ಹೇಗೆ ಇರೋದು?- ಸೀಕ್ರೆಟ್‌ ರೂಮಿನಲ್ಲಿ ರಕ್ಷಿತಾ ಕಣ್ಣೀರು
Cinema Latest Top Stories TV Shows
Jailer
ತಲೈವಾ ನಟನೆಯ ಜೈಲರ್-2 ಸಿನಿಮಾಗೆ ವಿದ್ಯಾ ಬಾಲನ್ ಎಂಟ್ರಿ!
Bollywood Cinema Latest South cinema Top Stories

You Might Also Like

DK Shivakumar 1
Latest

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆಶಿ

Public TV
By Public TV
35 minutes ago
Shamanuru Shivashankarappa Siddaramaiah
Belgaum

ಶಾಮನೂರು ಶಿವಶಂಕರಪ್ಪ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ್ದಾರೆ: ವಿಧಾನಸಭೆಯಲ್ಲಿ ಸಿಎಂ ಸಂತಾಪ

Public TV
By Public TV
35 minutes ago
Nitin Nabin 1
Latest

ಬೆಳಗ್ಗೆವರೆಗೆ ಪಟ್ಟ ಸಿಗುತ್ತೆ ಅನ್ನೋದು ಗೊತ್ತೇ ಇರಲಿಲ್ಲ – ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಯಾರು?

Public TV
By Public TV
36 minutes ago
Ballari Lorry Fire
Bellary

ಲಾರಿಗೆ ಆಕಸ್ಮಿಕ ಬೆಂಕಿ – 45 ಲಕ್ಷ ರೂ. ಮೌಲ್ಯದ 40 ಬೈಕ್‌ ಸುಟ್ಟು ಕರಕಲು

Public TV
By Public TV
1 hour ago
Bondi Beach Attack
Crime

Bondi Beach Attack – ನನ್ನ ಮಗ ಒಳ್ಳೆಯವ್ನು, ಅವನಂತ ಮಗನ್ನ ಪಡೆಯೋಕೆ ಜನ ಬಯಸ್ತಾರೆ: ನವೀದ್ ತಾಯಿಯ ಸಮರ್ಥನೆ!

Public TV
By Public TV
2 hours ago
Bengaluru HAL Party Lodge
Bengaluru City

ಸ್ನೇಹಿತರೊಂದಿಗೆ ಪಾರ್ಟಿ ವೇಳೆ ಪೊಲೀಸರ ಎಂಟ್ರಿ – ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಯುವತಿ ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?