Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Latest

ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Public TV
Last updated: May 14, 2025 10:55 pm
Public TV
Share
3 Min Read
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
SHARE

ನವದೆಹಲಿ: ಭಾರತೀಯ ವಾಯು ಸೇನೆ (IAF) ಕೇವಲ 23 ನಿಮಿಷದಲ್ಲಿ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು (Pakistan’s Chinese-Supplied Air Defence Systems) ಬೈಪಾಸ್‌, ಜಾಮ್‌ ಮಾಡಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ವಿಚಾರ ಈಗ ಬಳಕಿಗೆ ಬಂದಿದೆ.

ಹೌದು. ಭಾರತ  ಮೇ 7ರ ಬುಧವಾರ ನಸುಕಿನ ಜಾವ ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ 9 ಸ್ಥಳಗಳಲ್ಲಿದ್ದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿತ್ತು. ಈ ದಾಳಿಯನ್ನು ಹೇಗೆ ವ್ಯವಸ್ಥಿತವಾಗಿ ನಡೆಸಲಾಯಿತು ಎಂಬುದರ ಬಗ್ಗೆ ಭಾರತ ಸರ್ಕಾರವೇ ಅಧಿಕೃತವಾಗಿ ಮಾಧ್ಯಮಗಳಿಗೆ ತಿಳಿಸಿದೆ.

Operation Sindoor Indian Army shares proof target significance of precision strike on Pak terror

 

ದಾಳಿ ನಡೆಸಿದ್ದು ಹೇಗೆ?
ಭಾರತೀಯ ವಾಯು ಸೇನೆ ಈ ಬಾರಿ ಪಾಕ್‌ ಆಕ್ರಮಿತ ಕಾಶ್ಮೀರದ (POK) ಒಳಗೆ ನುಗ್ಗಿರಲಿಲ್ಲ. ಭಾರತದ ಒಳಗಡೆಯಿಂದಲೇ ದಾಳಿ ನಡೆಸಿತ್ತು. ಈ ದಾಳಿ ಯಶಸ್ವಿಯಾಗಬೇಕಾದರೆ ಹಲವಾರು ಸವಾಲುಗಳಿತ್ತು. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

ತನ್ನ ಆಪ್ತ ದೇಶವಾದ ಪಾಕಿಸ್ತಾನಕ್ಕೆ ಚೀನಾ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ನೀಡಿತ್ತು. ಈ ವಾಯು ರಕ್ಷಣಾ ವ್ಯವಸ್ಥೆಯ ಬೇಧಿಸಿ ಭಾರತದ ಕ್ಷಿಪಣಿಗಳು ನಿಗದಿತ ಗುರಿಯನ್ನು ತಲುಪಬೇಕಿತ್ತು. ಸುಮಾರು 300 ಕಿ.ಮೀ ದೂರದಿಂದಲೇ ಬರುತ್ತಿರುವ ಕ್ಷಿಪಣಿ, ಡ್ರೋನ್‌, ಯುದ್ಧ ವಿಮಾನಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯ HQ-9 ಹೊಂದಿತ್ತು.

ಪಾಕಿಸ್ತಾನ ಲಾಹೋರ್ ಮತ್ತು ಇತರ ಸ್ಥಳಗಳಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸಿತ್ತು. ಹೀಗಾಗಿ ದಾಳಿ ನಡೆಸುವ ಮೊದಲು ವಾಯು ಸೇನೆ ಮಾಡಿದ ಕೆಲಸ ಏನೆಂದರೆ ಬಹುಕೋಟಿ ವೆಚ್ಚದ ವಾಯು ರಕ್ಷಣಾ ವ್ಯವಸ್ಥೆಯನ್ನು ಬೈಪಾಸ್ ಮಾಡಿ ಜಾಮ್‌ ಮಾಡಿತ್ತು.

Operation Sindoor 2 copy

ವಾಯು ರಕ್ಷಣಾ ವ್ಯವಸ್ಥೆಯನ್ನು ಜಾಮ್‌ ಮಾಡಿದ ನಂತರ ಭಾರತ ಪಾಕಿಸ್ತಾನದ ಒಳಗಡೆ ಪ್ರವೇಶ ಮಾಡದೇ ಭಾರತದ ಒಳಗಡೆದಿಂದಲೇ ದಾಳಿ ನಡೆಸಿತು. ರಫೇಲ್‌ ಯುದ್ಧ ವಿಮಾನದ ಮೂಲಕ ಪಾಕ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದರೆ, ಪಾಕ್‌ ಆಕ್ರಮಿತ ಕಾಶ್ಮೀರದ ಒಳಗಡೆ ಇರುವ ಉಗ್ರರ ನೆಲೆಗಳ ಮೇಲೆ ಡ್ರೋನ್‌ ದಾಳಿ ನಡೆಸಿ ಧ್ವಂಸ ಮಾಡಿತು.

ಈ ದಾಳಿಯ ಸಮಯದಲ್ಲಿ ಭಾರತ ತನ್ನ ಯಾವುದೇ ಸ್ವತ್ತುಗಳನ್ನು ನಷ್ಟವಾಗಿಲ್ಲ. ನಿಖರವಾಗಿ ಕಾರ್ಯಾಚರಣೆ ಮಾಡಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ ಎಂದು ಸರ್ಕಾರ ತಿಳಿಸಿದೆ.

ಪಾಕ್‌ನಿಂದ ಬರುತ್ತಿದ್ದ ಡ್ರೋನ್‌ ಮತ್ತು ಕ್ಷಿಪಣಿಗಳನ್ನು ತೊಡೆದು ಹಾಕಲು ಬರಾಕ್ -8 ಕ್ಷಿಪಣಿ ವ್ಯವಸ್ಥೆ, ಎಸ್ -400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆಗಳು, ಆಕಾಶ್‌ ಕ್ಷಿಪಣಿ ವ್ಯವಸ್ಥೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಡ್ರೋನ್ ವಿರೋಧಿ ಉಪಕರಣಗಳನ್ನು ನಿಯೋಜಿಸಲಾಗಿತ್ತು. ಇದರಿಂದಾಗಿ ಮೇ 7 ರ ರಾತ್ರಿ 15 ಭಾರತೀಯ ನಗರಗಳ ಮೇಲೆ ದಾಳಿಗೆ ಮುಂದಾಗಿದ್ದ ಪಾಕ್‌ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಲಾಯಿತು ಎಂದು ಹೇಳಿದೆ. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

Operation Sindoor 1 1

ಅವಂತಿಪೋರಾ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲಿಯಾ, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ಗುರಿಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ಪಾಕ್‌ ದಾಳಿ ಮಾಡಲು ಪ್ರಯತ್ನಿಸಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ತಟಸ್ಥಗೊಳಿಸಲಾಯಿತು.

ಮೇ 8 ರ ಬೆಳಗ್ಗೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿದ್ದ ವಾಯು ರಕ್ಷಣಾ ರೇಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಈ ದಾಳಿಯ ಪರಿಣಾಮ ಲಾಹೋರ್‌ನಲ್ಲಿದ್ದ ವಾಯು ರಕ್ಷಣಾ ವ್ಯವಸ್ಥೆಯನ್ನೇ ನಿಷ್ಕ್ರಿಯಗೊಳಿಸಿತ್ತು.

ಆಪರೇಷನ್‌ ಸಿಂಧೂರದಲ್ಲಿ ಸ್ವದೇಶಿ ನಿರ್ಮಿತ ವ್ಯವಸ್ಥೆಗಳನ್ನು ಬಳಕೆ ಮಾಡಲಾಗಿದೆ. ಈ ಕಾರ್ಯಾಚರಣೆಯು ಮಿಲಿಟರಿ ಕಾರ್ಯಾಚರಣೆಗಳಲ್ಲಿ ತಾಂತ್ರಿಕ ಸ್ವಾವಲಂಬನೆಯತ್ತ ಸಾಗುತ್ತಿರುವ ಭಾರತದ ಪ್ರಯಾಣದಲ್ಲಿ ಒಂದು ದೊಡ್ಡ ಮೈಲಿಗಲ್ಲು ಎಂದು ಭಾರತ ಸರ್ಕಾರ ಬಣ್ಣಿಸಿದೆ.

TAGGED:chinaIAFindiaOperation Sindoorಆಪರೇಷನ್‌ ಸಿಂಧೂರಭಾರತವಾಯು ರಕ್ಷಣಾ ವ್ಯವಸ್ಥೆವಾಯುಸೇನೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
4 minutes ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
11 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
38 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
1 hour ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
1 hour ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?