ಶ್ವೇತ ಬಾವುಟ ತೋರಿಸಿ, ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ-ಪಾಕಿಸ್ತಾನಕ್ಕೆ ಭಾರತದ ಸಂದೇಶ

Public TV
1 Min Read
Indian Army

ಶ್ರೀನಗರ: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವ ಉಗ್ರರ ಶವಗಳು ಎಲ್‍ಓಸಿಯಲ್ಲಿ ಬಿದ್ದಿವೆ. ಎಲ್‍ಓಸಿಯಲ್ಲಿ ಶ್ವೇತ ಬಾವುಟ ತೋರಿಸಿ ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗುವಂತೆ ಪಾಕಿಸ್ತಾನಕ್ಕೆ ಭಾರತ ಸಂದೇಶವೊಂದನ್ನು ರವಾನಿಸಿದೆ. ಭಾರತದ ಸಂದೇಶಕ್ಕೆ ಪಾಕಿಸ್ತಾನ ಪ್ರತಿಕ್ರಿಯೆಯನ್ನು ನೀಡಿಲ್ಲ.

ಜಮ್ಮು ಮತ್ತು ಕಾಶ್ಮೀರದ ಕೇರನ್ ಸೆಕ್ಟರ್ ನಲ್ಲಿಯ ಫಾರ್ವರ್ಡ್ ಪೋಸ್ಟ್ ಬಳಿ ಪಾಕಿಸ್ತಾನದ ಸೇನೆಯ ಬ್ಯಾಟ್ BAT (Border Action Team) ತಂಡ ವಿಫಲ ದಾಳಿಯನ್ನು ನಡೆಸಿತ್ತು. ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೇನೆ ಪ್ರತಿದಾಳಿ ನಡೆಸಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ 5ರಿಂದ7 ಸೈನಿಕರು ಮತ್ತು ಕೆಲ ಉಗ್ರರು ಸಾವನ್ನಪ್ಪಿದ್ದರು.

ದಾಳಿಯಲ್ಲಿ ಸಾವನ್ನಪ್ಪಿರುವ ಸೈನಿಕರು ಮತ್ತು ಉಗ್ರರ ಮೃತದೇಹಗಳು ಎಲ್‍ಓಸಿಯಲ್ಲಿವೆ. ಶ್ವೇತ ಬಾವುಟ ತೋರಿಸಿ ನಿಮ್ಮ ಶವಗಳನ್ನು ತೆಗೆದುಕೊಂಡು ಹೋಗಿ ಅಂತಿಮ ಕ್ರಿಯೆಗಳನ್ನು ನಡೆಸಬಹುದು ಎಂದು ಭಾರತೀಯ ಸೇನೆ ಹೇಳಿದೆ. ಗಡಿ ಪ್ರದೇಶದಲ್ಲಿ ಶವಗಳಿರುವ ಸ್ಯಾಟ್‍ಲೈಟ್ ಫೋಟೋಗಳು ಬಿಡುಗಡೆಯಾಗಿವೆ. ಕಾಶ್ಮೀರದಲ್ಲಿ ಶಾಂತಿ ಕದಡಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಜೈಶ್ ಸಂಘಟನೆಯ ಉಗ್ರರನ್ನು ಭಾರತದೊಳಗೆ ನುಸುಳಿಸುವ ಮೂಲಕ ಭಯೋತ್ಪಾದಕ ಚಟುವಟಿಕೆಗೆ ಪ್ರೋತ್ಸಾಹಿಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ – ಉಗ್ರರ ನೆಲೆ ಮೇಲೆ ಬಾಂಬ್ ದಾಳಿ

763206 indian army

ಈ ಕುರಿತು ಪ್ರತಿಕ್ರಿಯಿಸಿರುವವ ರಕ್ಷಣಾ ವಕ್ತಾರ ರಾಜೇಶ್ ಕಾಲಿಯಾ, ಕುಪ್ವಾರ  ಜಿಲ್ಲೆಯ ಕೇರನ್ ಸೆಕ್ಟರ್ ಬಳಿಯ ಫಾರ್ವರ್ಡ್ ಪೋಸ್ಟ್ ಮೇಲೆ ಬ್ಯಾಟ್ ತಂಡ ನಡೆಸಿದ ದಾಳಿಯನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ. ಸಾವನ್ನಪ್ಪಿರುವವರ ಪೈಕಿ ನಾಲ್ವರು ಪಾಕಿಸ್ತಾನ ಸೇನೆಯ ಸ್ಪೆಷಲ್ ಸರ್ವಿಸ್ ಗ್ರೂಪ್ ಕಮಾಂಡೋಗಳಿರುವ ಶಂಕೆಗಳು ವ್ಯಕ್ತವಾಗಿವೆ. ಭಾರತದ ಶಿಬಿರಗಳತ್ತ ಸಮೀಪಿಸುತ್ತಿದ್ದಂತೆ ಪಾಕಿಸ್ತಾನ ಗುಂಡಿನ ದಾಳಿಯನ್ನು ತೀವ್ರಗೊಳಿಸಿತ್ತು. ದಾಳಿಯ ಪ್ರತಿಯಾಗಿ ಭಾರತ ಸಹ ಪ್ರತಿದಾಳಿ ನಡೆಸಿತ್ತು. ಆದ್ರೆ ದಾಳಿಯಲ್ಲಿ ಬಲಿಯಾಗಿರುವ ಉಗ್ರರ ಶವಗಳನ್ನು ವಶಕ್ಕೆ ಪಡೆದುಕೊಂಡಿಲ್ಲ. ಗಡಿ ಭಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಪಾಕಿಸ್ತಾನ ಎಲ್‍ಓಸಿಯಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಸೈನಿಕರನ್ನು ನೇಮಕಗೊಳಿಸಿದೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *