ಉಡುಪಿ: ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್.ರಾಹುಲ್ (K.L.Rahul) ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ಭೇಟಿ ನೀಡಿದರು.
ಶ್ರೀ ಮುಕಾಂಬಿಕಾ ದೇವಿಯ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಆಡಳಿತ ಮಂಡಳಿಯ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಇದನ್ನೂ ಓದಿ: ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ
ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಈ ಸಂದರ್ಭದಲ್ಲಿ ಜೊತೆಗಿದ್ದರು. ಇಲ್ಲಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ದೇಗುಗಳಿಗೂ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಮಂಗಳೂರಿನ ಫೇಮಸ್ ಪಬ್ಬಾಸ್ಗೆ ಹೋಗಿ ಗಡ್ಬಡ್ ಕೂಡ ಸವಿದಿದ್ದಾರೆ. ರಾಹುಲ್ ಅವರು ತಾವು ಭೇಟಿ ನೀಡಿದ ಸ್ಥಳಗಳ ಫೋಟೋಗಳನ್ನು ಸಾಮಾಜಿಕ ಜಾಲತಣಗಳಲ್ಲಿ ಹಂಚಿಕೊಂಡಿದ್ದಾರೆ.
ವಿಶ್ವಕಪ್ ಟೂರ್ನಿ ನಂತರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ನಾಯಕರಾಗಿ ಸರಣಿ ಗೆದ್ದುಕೊಟ್ಟಿದ್ದರು. ಅದಾದ ಬಳಿಕ ಈಗ ಆಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಅಲಭ್ಯರಾಗಿದ್ದಾರೆ. ಸದ್ಯ ಕೆ.ಎಲ್.ರಾಹುಲ್ ವಿಶ್ರಾಂತಿಯಲ್ಲಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ