Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

Cricket

IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

Public TV
Last updated: April 1, 2023 10:25 pm
Public TV
Share
4 Min Read
PBKSvsKKR
SHARE

ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿಯ ಪರಿಣಾಮ ಮಳೆಯ ನಡುವೆಯೂ ಪಂಜಾಬ್‌ ಕಿಂಗ್ಸ್‌ (Punjab Kings), ಕೆಕೆಆರ್‌ (KKR) ವಿರುದ್ಧ 7 ರನ್‍ಗಳ ರೋಚಕ ಜಯ ಸಾಧಿಸಿದೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸುಧಾರಣೆಯಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ಕೊನೆಯ 24 ಎಸೆತಗಳಲ್ಲಿ 55 ರನ್‌ ಗಳ ಅಗತ್ಯವಿತ್ತು. ಆದರೆ ಮಳೆ ಅಡ್ಡಿಯಾದ್ದರಿಂದ ಡಕ್ವರ್ಥ್ ಲೂಯಿಸ್‌ ನಿಯಮ (DLS Method) ಅನ್ವಯಿಸಲಾಯಿತು. ಈ ನಿಯಮದಂತೆ ಪಂಜಾಬ್‌ 7 ರನ್‌ಗಳ ರೋಚಕ ಜಯ ಸಾಧಿಸಿತು.

Andre Russell

ಶನಿವಾರ ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಐಪಿಎಲ್‌ನ (IPL 2023) 2ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಭರ್ಜರಿ 191 ರನ್‌ ಕಲೆಹಾಕಿತ್ತು. 192 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ಮಳೆಯ ಕಾರಣ ನಿಗದಿತ 16 ಓವರ್‌ಗಳಲ್ಲಿ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಚೇಸಿಂಗ್‌ ಆರಂಭಿಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳು ಪಂಜಾಬ್ ‌ಬೌಲರ್‌ಗಳ ದಾಳಿಗೆ ತತ್ತರಿಸಿದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

Andre Russell Venkatesh Iyer

ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್‌ ಸಿಂಗ್‌ 4 ಎಸೆತಗಳಲ್ಲಿ ಕೇವಲ 2 ರನ್‌ ಗಳಿಸಿದರೆ, ರಹಮಾನುಲ್ಲಾ ಗುರ್ಬಾಜ್ 16 ಎಸೆತಗಳಲ್ಲಿ 22 ರನ್‌ (3 ಬೌಂಡರಿ, 1 ಸಿಕ್ಸರ್‌) ಬಾರಿಸಿ ಪೆವಿಲಿಯನ್‌ ಸೇರಿದರು. ತಾಳ್ಮೆಯ ಆಟವಾಡಿದ ನಾಯಕ ನಿತೀಶ್‌ ರಾಣಾ (Nitish Rana) 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್‌ನೊಂದಿಗೆ 24 ರನ್‌ ಗಳಿಸಿದರು. ರಿಂಕು ಸಿಂಗ್‌, ಅನುಕುಲ್‌ ರಾಯ್‌ ತಲಾ 4 ರನ್‌ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಕೆಕೆಆರ್‌ ತಂಡ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

IPL 2023 Shikhar Dhawan

ಮಧ್ಯಮ ಕ್ರಮಾಂಕದಲ್ಲಿ ಒಂದಾದ ವೆಂಕಟೇಶ್‌ ಅಯ್ಯರ್ (Venkatesh Iyer) ಹಾಗೂ ಆಂಡ್ರೆ ರಸೆಲ್ (Andre Russell) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ನೆರವಾದರು. ಇದರಿಂದ ಕೆಕೆಆರ್‌ಗೆ ಮತ್ತೆ ಗೆಲುವಿನ ಆಸೆ ಚಿಗುರಿತ್ತು. ಆದರೆ, ಸ್ಯಾಮ್‌ ಕರ್ರನ್‌, ಅರ್ಷ್‌ದೀಪ್‌ ಸಿಂಗ್‌ ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ವೆಂಕಟೇಶ್‌ ಅಯ್ಯರ್‌ 28 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ಸಹಿತ 34 ರನ್‌ ಗಳಿಸಿದರೆ, ರಸೆಲ್‌ 19 ಎಸೆತಗಳಲ್ಲಿ 2 ಸಿಕ್ಸರ್‌, 3 ಬೌಂಡರಿಯೊಂದಿಗೆ 35 ರನ್‌ ಚಚ್ಚಿ ಔಟಾದರು. ಕೊನೆಯಲ್ಲಿ ಶಾರ್ದೂಲ್‌ ಠಾಕೂರ್‌ 3 ಎಸೆತಗಳಲ್ಲಿ 8 ರನ್‌ ಹಾಗೂ ಸುನೀಲ್‌ ನರೇನ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಮಳೆ ಅಬ್ಬರಿಸಿದ್ದರಿಂದ ಡಕ್ವರ್ಥ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ನಿರಾಸೆಯುಂಟಾಯಿತು.

IPL 2023 PBKSvsKKR 4

ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌ 3 ವಿಕೆಟ್‌ ಪಡೆದರೆ, ಸ್ಯಾಮ್‌ ಕರ್ರನ್‌, ನಾಥನ್ ಎಲ್ಲಿಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ (Bhanuka Rajapaksa ಮತ್ತು ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

IPL 2023 PBKSvsKKR 2

ಭಾನುಕ ರಾಜಪಕ್ಸ ಕೇವಲ 32 ಎಸೆತಗಳಲ್ಲಿ 50 ರನ್ (5 ಬೌಂಡರಿ, 2 ಸಿಕ್ಸರ್‌) ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿ ಸಮೇತ 40 ರನ್ ಗಳಿಸಿ ಔಟಾದರು. ನಂತರ ಬಂದ ಜಿತೇಶ್ ಶರ್ಮಾ 11 ಎಸೆತಗಳಲ್ಲಿ 21 ರನ್‌ಗಳ (1 ಬೌಂಡರಿ, 2 ಸಿಕ್ಸರ್‌) ಕೊಡುಗೆ ನೀಡಿದರು. ಇದೇ ವೇಳೆ ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಾಜ 13 ಎಸೆತಗಳಲ್ಲಿ 16 ರನ್ ಗಳಿಸಿದರು.

ಕೊನೆಯಲ್ಲಿ ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್ ಕರ್ರನ್ (Sam Curran) 17 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಬಾರಿಸಿದರೆ, ಶಾರೂಖ್ ಖಾನ್ 11 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

Sam Curran

ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನೂ ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಕಿತ್ತರು.

TAGGED:Andre RussellBhanuka RajapaksaIPL 2023Nitish RanaPBKSvsKKRPunjab KingsSam CurranShikhar DhawanVenkatesh Iyerಆಂಡ್ರೆ ರಸೆಲ್‌ಕೆಕೆಆರ್ನಿತೀಶ್ ರಾಣಾಪಂಜಾಬ್ ಕಿಂಗ್ಸ್ಭಾನುಕ ರಾಜಪಕ್ಷಸ್ಯಾಮ್ ಕರ್ರನ್
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Economic Survey 2026 Nirmala Sitharaman
Latest

Economic Survey| ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು

Public TV
By Public TV
2 minutes ago
DySP Nanda Reddy
Bellary

ಬಳ್ಳಾರಿ ಬ್ಯಾನರ್‌ ಬಡಿದಾಟ| DySP ವರ್ಗಾವಣೆ ಆದೇಶ ದಿಢೀರ್‌ ರದ್ದು, ನಂದಾರೆಡ್ಡಿ ಮುಂದುವರಿಕೆ

Public TV
By Public TV
59 minutes ago
pm modi mann ki baat
Latest

ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ

Public TV
By Public TV
1 hour ago
Ajit Pawar Farewell 1
Latest

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ

Public TV
By Public TV
1 hour ago
Bomb Threat Call
Crime

ದೆಹಲಿ ಶಾಲೆಗಳು, ಪಂಜಾಬ್-ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

Public TV
By Public TV
1 hour ago
Sulwadi Prasada Poisoning Case A1 Immadi Mahadevaswamy
Chamarajanagar

ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್‌: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?