Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

Public TV
Last updated: April 1, 2023 10:25 pm
Public TV
Share
4 Min Read
PBKSvsKKR
SHARE

ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿಯ ಪರಿಣಾಮ ಮಳೆಯ ನಡುವೆಯೂ ಪಂಜಾಬ್‌ ಕಿಂಗ್ಸ್‌ (Punjab Kings), ಕೆಕೆಆರ್‌ (KKR) ವಿರುದ್ಧ 7 ರನ್‍ಗಳ ರೋಚಕ ಜಯ ಸಾಧಿಸಿದೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸುಧಾರಣೆಯಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ಕೊನೆಯ 24 ಎಸೆತಗಳಲ್ಲಿ 55 ರನ್‌ ಗಳ ಅಗತ್ಯವಿತ್ತು. ಆದರೆ ಮಳೆ ಅಡ್ಡಿಯಾದ್ದರಿಂದ ಡಕ್ವರ್ಥ್ ಲೂಯಿಸ್‌ ನಿಯಮ (DLS Method) ಅನ್ವಯಿಸಲಾಯಿತು. ಈ ನಿಯಮದಂತೆ ಪಂಜಾಬ್‌ 7 ರನ್‌ಗಳ ರೋಚಕ ಜಯ ಸಾಧಿಸಿತು.

Andre Russell

ಶನಿವಾರ ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಐಪಿಎಲ್‌ನ (IPL 2023) 2ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಭರ್ಜರಿ 191 ರನ್‌ ಕಲೆಹಾಕಿತ್ತು. 192 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ಮಳೆಯ ಕಾರಣ ನಿಗದಿತ 16 ಓವರ್‌ಗಳಲ್ಲಿ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಚೇಸಿಂಗ್‌ ಆರಂಭಿಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳು ಪಂಜಾಬ್ ‌ಬೌಲರ್‌ಗಳ ದಾಳಿಗೆ ತತ್ತರಿಸಿದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

Andre Russell Venkatesh Iyer

ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್‌ ಸಿಂಗ್‌ 4 ಎಸೆತಗಳಲ್ಲಿ ಕೇವಲ 2 ರನ್‌ ಗಳಿಸಿದರೆ, ರಹಮಾನುಲ್ಲಾ ಗುರ್ಬಾಜ್ 16 ಎಸೆತಗಳಲ್ಲಿ 22 ರನ್‌ (3 ಬೌಂಡರಿ, 1 ಸಿಕ್ಸರ್‌) ಬಾರಿಸಿ ಪೆವಿಲಿಯನ್‌ ಸೇರಿದರು. ತಾಳ್ಮೆಯ ಆಟವಾಡಿದ ನಾಯಕ ನಿತೀಶ್‌ ರಾಣಾ (Nitish Rana) 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್‌ನೊಂದಿಗೆ 24 ರನ್‌ ಗಳಿಸಿದರು. ರಿಂಕು ಸಿಂಗ್‌, ಅನುಕುಲ್‌ ರಾಯ್‌ ತಲಾ 4 ರನ್‌ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಕೆಕೆಆರ್‌ ತಂಡ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

IPL 2023 Shikhar Dhawan

ಮಧ್ಯಮ ಕ್ರಮಾಂಕದಲ್ಲಿ ಒಂದಾದ ವೆಂಕಟೇಶ್‌ ಅಯ್ಯರ್ (Venkatesh Iyer) ಹಾಗೂ ಆಂಡ್ರೆ ರಸೆಲ್ (Andre Russell) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ನೆರವಾದರು. ಇದರಿಂದ ಕೆಕೆಆರ್‌ಗೆ ಮತ್ತೆ ಗೆಲುವಿನ ಆಸೆ ಚಿಗುರಿತ್ತು. ಆದರೆ, ಸ್ಯಾಮ್‌ ಕರ್ರನ್‌, ಅರ್ಷ್‌ದೀಪ್‌ ಸಿಂಗ್‌ ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ವೆಂಕಟೇಶ್‌ ಅಯ್ಯರ್‌ 28 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ಸಹಿತ 34 ರನ್‌ ಗಳಿಸಿದರೆ, ರಸೆಲ್‌ 19 ಎಸೆತಗಳಲ್ಲಿ 2 ಸಿಕ್ಸರ್‌, 3 ಬೌಂಡರಿಯೊಂದಿಗೆ 35 ರನ್‌ ಚಚ್ಚಿ ಔಟಾದರು. ಕೊನೆಯಲ್ಲಿ ಶಾರ್ದೂಲ್‌ ಠಾಕೂರ್‌ 3 ಎಸೆತಗಳಲ್ಲಿ 8 ರನ್‌ ಹಾಗೂ ಸುನೀಲ್‌ ನರೇನ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಮಳೆ ಅಬ್ಬರಿಸಿದ್ದರಿಂದ ಡಕ್ವರ್ಥ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ನಿರಾಸೆಯುಂಟಾಯಿತು.

IPL 2023 PBKSvsKKR 4

ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌ 3 ವಿಕೆಟ್‌ ಪಡೆದರೆ, ಸ್ಯಾಮ್‌ ಕರ್ರನ್‌, ನಾಥನ್ ಎಲ್ಲಿಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ (Bhanuka Rajapaksa ಮತ್ತು ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

IPL 2023 PBKSvsKKR 2

ಭಾನುಕ ರಾಜಪಕ್ಸ ಕೇವಲ 32 ಎಸೆತಗಳಲ್ಲಿ 50 ರನ್ (5 ಬೌಂಡರಿ, 2 ಸಿಕ್ಸರ್‌) ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿ ಸಮೇತ 40 ರನ್ ಗಳಿಸಿ ಔಟಾದರು. ನಂತರ ಬಂದ ಜಿತೇಶ್ ಶರ್ಮಾ 11 ಎಸೆತಗಳಲ್ಲಿ 21 ರನ್‌ಗಳ (1 ಬೌಂಡರಿ, 2 ಸಿಕ್ಸರ್‌) ಕೊಡುಗೆ ನೀಡಿದರು. ಇದೇ ವೇಳೆ ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಾಜ 13 ಎಸೆತಗಳಲ್ಲಿ 16 ರನ್ ಗಳಿಸಿದರು.

ಕೊನೆಯಲ್ಲಿ ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್ ಕರ್ರನ್ (Sam Curran) 17 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಬಾರಿಸಿದರೆ, ಶಾರೂಖ್ ಖಾನ್ 11 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

Sam Curran

ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನೂ ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಕಿತ್ತರು.

TAGGED:Andre RussellBhanuka RajapaksaIPL 2023Nitish RanaPBKSvsKKRPunjab KingsSam CurranShikhar DhawanVenkatesh Iyerಆಂಡ್ರೆ ರಸೆಲ್‌ಕೆಕೆಆರ್ನಿತೀಶ್ ರಾಣಾಪಂಜಾಬ್ ಕಿಂಗ್ಸ್ಭಾನುಕ ರಾಜಪಕ್ಷಸ್ಯಾಮ್ ಕರ್ರನ್
Share This Article
Facebook Whatsapp Whatsapp Telegram

Cinema Updates

S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood
Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood

You Might Also Like

High Court Of Jammu Kashmir And Ladakh
Court

ಭಾರೀ ಸರಕು ವಾಹನ ಪರವಾನಗಿಯುಳ್ಳ ಚಾಲಕರು ಪ್ರಯಾಣಿಕ ವಾಹನ ಚಾಲನೆ ಮಾಡಲು ಅರ್ಹರು: ಕಾಶ್ಮೀರ ಹೈಕೋರ್ಟ್

Public TV
By Public TV
52 seconds ago
Bangladesh Air force Training Jet Crash
Crime

ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

Public TV
By Public TV
14 minutes ago
vs achuthanandan
Latest

ಕೇರಳದ ಮಾಜಿ ಸಿಎಂ, CPI(M) ನಾಯಕ ಅಚ್ಯುತಾನಂದನ್ ನಿಧನ

Public TV
By Public TV
20 minutes ago
Bidar Prabhu Chauhan son Pratheek Chauhan Case
Bidar

ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ

Public TV
By Public TV
34 minutes ago
Basanagouda Patil Yatnal
Districts

2 ತಿಂಗಳಲ್ಲಿ ಮತ್ತೆ ನನ್ನನ್ನ ಬಿಜೆಪಿಗೆ ಸೇರಿಸಿಕೊಳ್ತಾರೆ: ಯತ್ನಾಳ್

Public TV
By Public TV
1 hour ago
Kerala Woman Found Dead In UAE
Crime

ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?