ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಸಿರಾಜ್‌

Public TV
1 Min Read
Indian Speedster Mohammed Siraj Takes Charge As DSP At Telangana DGP Office

ಹೈದರಾಬಾದ್‌: ಟೀಂ ಇಂಡಿಯಾದ (Team India) ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ (Mohammed Siraj) ಅವರು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (DSP) ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ತೆಲಂಗಾಣ (Telangana) ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ (Revanth Reddy) ಅವರು ಆಗಸ್ಟ್‌ನಲ್ಲಿ ಕ್ರಿಕೆಟರ್ ಮೊಹಮ್ಮದ್ ಸಿರಾಜ್‌ ಮತ್ತು ಬಾಕ್ಸರ್ ನಿಖಾತ್ ಝರೀನ್ ಅವರು ಕ್ರೀಡೆಯಲ್ಲಿ ಮಾಡಿದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಗ್ರೂಪ್ 1 ದರ್ಜೆಯ ಹುದ್ದೆ ನೀಡುವುದಾಗಿ ಘೋಷಿಸಿದ್ದರು.

ಈ ಘೋಷಣೆಯಂತೆ ಇಂದು ಸಿರಾಜ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಮೊಹಮ್ಮದ್ ಸಿರಾಜ್‌ಗೆ ಸಂಸದ ಎಂ ಅನಿಲ್ ಕುಮಾರ್ ಯಾದವ್ ಮತ್ತು ಮತ್ತೋರ್ವ ಸಂಸದ ಮೊಹಮ್ಮದ್ ಫಾಹೀಮುದ್ದೀನ್ ಖುರೇಶಿ ಹಾಜರಿದ್ದರು.  ಇದನ್ನೂ ಓದಿ: ಹೀನಾಯ ಸೋಲಿನೊಂದಿಗೆ 147 ವರ್ಷಗಳ ಟೆಸ್ಟ್​​​ ಇತಿಹಾಸದಲ್ಲೇ ಕೆಟ್ಟ ದಾಖಲೆ ಬರೆದ ಪಾಕ್‌

Siraj

ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಘೋಷಣೆಯ ನಂತರ ತೆಲಂಗಾಣ ಸರ್ಕಾರವು ಸಾರ್ವಜನಿಕ ಸೇವೆಗಳಿಗೆ ನೇಮಕಾತಿಗಳ ನಿಯಂತ್ರಣ ಮತ್ತು ಸಿಬ್ಬಂದಿ -1994 ಕಾಯ್ದೆಯನ್ನು ತಿದ್ದುಪಡಿ ಮಾಡಿತ್ತು.

ಸಿರಾಜ್‌ ಅವರು ಟಿ20 ವಿಶ್ವಕಪ್‌ ತಂಡದ ಸದಸ್ಯರಾಗಿದ್ದ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಈ ಗೌರವ ನೀಡಿದೆ.

ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರನ್ನು ತೆಲಂಗಾಣದ ಡಿಎಸ್‌ಪಿಯಾಗಿ ನೇಮಿಸಲಾಗಿದೆ. ಅವರ ಕ್ರಿಕೆಟ್‌ ಸಾಧನೆಗೆ ರಾಜ್ಯದಿಂದ ಈ ಗೌರವ ಸಲ್ಲಿಸಲಾಗಿದೆ. ಸಿರಾಜ್‌ ಅವರು ಕ್ರಿಕೆಟ್‌ ವೃತ್ತಿ ಜೀವನವನ್ನು ಮುಂದುವರಿಸುತ್ತಾರೆ ಮತ್ತು ಹೊಸ ಜವಾಬ್ದಾರಿ ಹಲವರಿಗೆ ಪ್ರೇರಣೆಯಾಗಲಿದೆ ಎಂದು ತೆಲಂಗಾಣ ಪೊಲೀಸ್‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದೆ.

 

Share This Article