Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ-ಟ್ರಂಪ್‌ ಫ್ರೆಂಡ್ಸ್‌, ಆದ್ರೂ ಭಾರತ-ಅಮೆರಿಕ ಮುಸುಕಿನ ಗುದ್ದಾಟ; ಯುಎಸ್‌ ಜೊತೆಗಿನ ರಾಜತಾಂತ್ರಿಕ ಸವಾಲು ಹೊಸದೇನಲ್ಲ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ-ಟ್ರಂಪ್‌ ಫ್ರೆಂಡ್ಸ್‌, ಆದ್ರೂ ಭಾರತ-ಅಮೆರಿಕ ಮುಸುಕಿನ ಗುದ್ದಾಟ; ಯುಎಸ್‌ ಜೊತೆಗಿನ ರಾಜತಾಂತ್ರಿಕ ಸವಾಲು ಹೊಸದೇನಲ್ಲ!

Latest

ಮೋದಿ-ಟ್ರಂಪ್‌ ಫ್ರೆಂಡ್ಸ್‌, ಆದ್ರೂ ಭಾರತ-ಅಮೆರಿಕ ಮುಸುಕಿನ ಗುದ್ದಾಟ; ಯುಎಸ್‌ ಜೊತೆಗಿನ ರಾಜತಾಂತ್ರಿಕ ಸವಾಲು ಹೊಸದೇನಲ್ಲ!

Public TV
Last updated: August 9, 2025 7:27 am
Public TV
Share
6 Min Read
trump modi tariff
SHARE

– ಯುರೋಪ್‌ನಿಂದಲೇ ರಷ್ಯಾದಿಂದ ಅತಿ ಹೆಚ್ಚು ತೈಲ ಖರೀದಿ ಆಗ್ತಿದ್ಯಾ?

ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಟೀಕೆ, ಟ್ಯಾರಿಫ್, ನಿರ್ಬಂಧಗಳ ಬೆದರಿಕೆ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ. ಭಾರತದ ಕೂಡ ಅದಕ್ಕೆ ಬಲವಾದ ಪ್ರತಿದಾಳಿ ಒಡ್ಡುತ್ತಿದೆ. ಪ್ರಸ್ತುತ ದಿನಮಾನಗಳಲ್ಲಿ ಭಾರತ-ಅಮೆರಿಕ ಸಂಯುಕ್ತ ಸಂಸ್ಥಾನಗಳ ಕಾರ್ಯತಂತ್ರದ ಪಾಲುದಾರಿಕೆಯು ಹೊಸ ತಿರುವನ್ನು ಪಡೆದುಕೊಂಡಿದೆ. ಉಕ್ರೇನ್ ವಿರುದ್ಧ ಯುದ್ಧ ನಡೆಯುತ್ತಿರುವ ರಷ್ಯಾ ಜೊತೆ ಭಾರತ ಸಂಬಂಧ ಚೆನ್ನಾಗಿದೆ. ಪಾಶ್ಚಾತ್ಯ ರಾಷ್ಟ್ರಗಳ ನಿರ್ಬಂಧಗಳ ನಡುವೆಯೂ ರಷ್ಯಾದಿಂದ ಭಾರತ (India) ರಕ್ಷಣಾ ಮತ್ತು ಇಂಧನ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಟ್ರಂಪ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತನ್ನ ಮಾತು ಕೇಳದ ಭಾರತದ ಮೇಲೆ ಸುಂಕದ (Tariff) ಅಸ್ತ್ರವನ್ನು ಅಮೆರಿಕ ಪ್ರಯೋಗಿಸಿದೆ.

ಭಾರತದ ಜೊತೆಗಿನ ಅಮೆರಿಕದ (US) ಮುಸುಕಿನ ಗುದ್ದಾಟ ಇದೇ ಮೊದಲೇನಲ್ಲ. ಶತಮಾನಗಳ ಹಿಂದಿನಿಂದಲೂ ಉಭಯ ದೇಶಗಳ ರಾಜತಾಂತ್ರಿಕತೆಯು ಅನೇಕ ಸವಾಲುಗಳನ್ನು ಕಂಡಿದೆ. ಯುರೋಪಿಯನ್ ಒಕ್ಕೂಟ, ಅಮೆರಿಕ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧ ಹಿಂದೆ ಹೇಗಿತ್ತು? ಈಗಿನ ಸವಾಲುಗಳೇನು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ಟ್ರಂಪ್‌ ಸುಂಕ ಶಾಕ್‌ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್‌ ಭೇಟಿ

Narendra Modi Donald Trump

ಭಾರತದ ಮೇಲೆ 50% ಟ್ಯಾರಿಫ್!
ರಷ್ಯಾದಿಂದ (Russia) ತೈಲ ಖರೀದಿ ಮಾಡುತ್ತಿರುವ ಭಾರತದ ಮೇಲೆ ಟ್ರಂಪ್ 50% ಟ್ಯಾರಿಫ್ ವಿಧಿಸಿದ್ದಾರೆ. ಟ್ರಂಪ್ ನಡೆಗೆ ಭಾರತ ಅಸಮಾಧಾನ ಹೊರಹಾಕಿದೆ. ‘ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಭಾರತವನ್ನು ಗುರಿಯಾಗಿಸಿಕೊಂಡಿರುವುದು ಅಸಮಂಜಸ. ಭಾರತ ತನ್ನ ರಾಷ್ಟ್ರೀಯ ಹಿತಾಸಕ್ತಿಗಳು ಮತ್ತು ಆರ್ಥಿಕ ಭದ್ರತೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ’ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಟ್ರಂಪ್ ಬೆದರಿಕೆಗೆ ಡೋಂಟ್ ಕೇರ್ ಎಂದಿರುವ ಅಜಿತ್ ದೋವಲ್ ರಷ್ಯಾಗೆ ಭೇಟಿ ನೀಡಿದ್ದರೆ. ಉಭಯ ದೇಶಗಳ ನಡುವಿನ ಸಂಬಂಧ ಬಲಪಡಿಸಲು ಮುಂದಾಗಿದ್ದಾರೆ. ಇತ್ತ ಹಲವು ವರ್ಷಗಳ ಬಳಿಕ ಪ್ರಧಾನಿ ಮೋದಿ ಅವರು ಚೀನಾಗೆ ಭೇಟಿ ನೀಡಲಿದ್ದಾರೆ.

ಯುರೋಪ್‌ನಿಂದಲೇ ರಷ್ಯಾದಿಂದ ಹೆಚ್ಚು ತೈಲ ಖರೀದಿ!
* ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಕಳೆದ ಮೂರು ವರ್ಷಗಳಿಂದ ಜಾಗತಿಕ ವೇದಿಕೆಯಲ್ಲಿ ಭಾರತದ ನಿಲುವನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಿದ್ದಾರೆ. 2022ರ ಮಾರ್ಚ್‌ನಲ್ಲಿ ಆಗಿನ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರ ಸಮ್ಮುಖದಲ್ಲಿ ಮಾತನಾಡಿದ್ದ ಜೈಶಂಕರ್, ನಿರ್ಬಂಧಗಳ ಬಗ್ಗೆ ಮಾತನಾಡುವುದು ಒಂದು ಅಭಿಯಾನದಂತೆ ಕಾಣುತ್ತದೆ. ಯುರೋಪ್ ವಾಸ್ತವವಾಗಿ ಉಕ್ರೇನ್ ಯುದ್ಧಕ್ಕಿಂತ ಮೊದಲು ರಷ್ಯಾದಿಂದ ಹೆಚ್ಚು ತೈಲವನ್ನು ಖರೀದಿಸಿದೆ. ಆ ಸಂದರ್ಭದಲ್ಲಿ ಯುರೋಪ್ ಹಿಂದಿನ ತಿಂಗಳಿಗಿಂತ ಶೇ.15 ಕ್ಕಿಂತ ಹೆಚ್ಚು ರಷ್ಯಾದಿಂದ ತೈಲ ಮತ್ತು ಅನಿಲವನ್ನು ಖರೀದಿಸಿದೆ ಎಂದು ಗಮನಸೆಳೆದಿದ್ದರು. ರಷ್ಯಾದಿಂದ ತೈಲ ಮತ್ತು ಅನಿಲದ ಪ್ರಮುಖ ಖರೀದಿದಾರರನ್ನು ನೋಡಿದರೆ, ಅವರಲ್ಲಿ ಹೆಚ್ಚಿನವರು ಯುರೋಪಿನಲ್ಲಿದ್ದಾರೆ. ನಾವು ನಮ್ಮ ಇಂಧನ ಪೂರೈಕೆಯ ಬಹುಪಾಲು ಮಧ್ಯಪ್ರಾಚ್ಯದಿಂದ ಪಡೆಯುತ್ತೇವೆ. ಹಿಂದೆ ನಮ್ಮ ತೈಲದ ಸುಮಾರು 7.5-8% ಯುಎಸ್‌ನಿಂದಲೇ ಬಂದಿದೆ. ಬಹುಶಃ ಇದು ರಷ್ಯಾದಿಂದ ಶೇಕಡ ಪ್ರಮಾಣಕ್ಕೆ ಹೋಲಿಸಿದರೆ ಹೆಚ್ಚಿದೆ ಎಂದು ಜೈಶಂಕರ್ ತಿಳಿಸಿದ್ದರು.

modi putin

* 2022ರ ಏಪ್ರಿಲ್‌ನಲ್ಲಿ ಜೈಶಂಕರ್ ವಾಷಿಂಗ್ಟನ್ ಡಿಸಿಯಲ್ಲಿ ಮಾತನಾಡುತ್ತಾ, ಯುರೋಪ್ ಕೇವಲ ಒಂದು ದಿನಕ್ಕಿಂತ ಕಡಿಮೆ ಅವಧಿಯಲ್ಲಿ ಖರೀದಿಸಿದ್ದಕ್ಕಿಂತಲೂ ಕಡಿಮೆ ತೈಲವನ್ನು ಭಾರತವು ಒಂದು ತಿಂಗಳಲ್ಲಿ ರಷ್ಯಾದಿಂದ ಖರೀದಿಸಿದೆ. ರಷ್ಯಾದಿಂದ ಇಂಧನ ಖರೀದಿಯನ್ನು ನೋಡುವುದಾದರೆ, ನಿಮ್ಮ ಗಮನ ಯುರೋಪಿನ ಮೇಲೆ ಕೇಂದ್ರೀಕರಿಸಬೇಕು. ನಾವು ಸ್ವಲ್ಪವನ್ನಷ್ಟೇ ಖರೀದಿಸುತ್ತೇವೆ. ಅದು ನಮ್ಮ ಇಂಧನ ಸುರಕ್ಷತೆಗೆ ಅವಶ್ಯಕವಾಗಿದೆ. ಆದರೆ ಅಂಕಿಅಂಶಗಳನ್ನು ನೋಡಿದಾಗ, ಬಹುಶಃ ತಿಂಗಳಿಗೆ ನಮ್ಮ ಒಟ್ಟು ಖರೀದಿಗಳು, ಯುರೋಪ್ ಒಂದೇ ದಿನಕ್ಕೆ ಮಧ್ಯಾಹ್ನದ ವೇಳೆ ಮಾಡುವ ಖರೀದಿಗಿಂತ ಕಡಿಮೆಯಿದೆ ಎಂದು ತಿಳಿಸಿದ್ದಾರೆ. ಯುರೋಪಿನ ಸಮಸ್ಯೆಗಳು ಪ್ರಪಂಚದ ಸಮಸ್ಯೆಗಳು. ಆದರೆ, ಪ್ರಪಂಚದ ಸಮಸ್ಯೆಗಳು ಯುರೋಪಿನ ಸಮಸ್ಯೆಗಳಲ್ಲ ಎಂಬ ಮನಸ್ಥಿತಿಯಿಂದ ಯುರೋಪ್ ಹೊರಬರಬೇಕು ಎಂದಿದ್ದರು. ಇದನ್ನೂ ಓದಿ: ಭಾರತಕ್ಕೆ ಮತ್ತೊಂದು ಶಾಕ್ – ಆಮದುಗಳ ಮೇಲೆ 50% ಸುಂಕ ವಿಧಿಸಿದ ಟ್ರಂಪ್

* 2022ರ ಡಿಸೆಂಬರ್‌ನಲ್ಲಿ ಜೈಶಂಕರ್ ಮಾತನಾಡಿ, ಉಕ್ರೇನ್-ರಷ್ಯಾ ಯುದ್ಧ ಪ್ರಾರಂಭವಾದ ಒಂಬತ್ತು ತಿಂಗಳಲ್ಲಿ ಭಾರತದ ಖರೀದಿಗಳು ಯುರೋಪ್‌ನ ಆರನೇ ಒಂದು ಭಾಗದಷ್ಟಿದೆ. ಪ್ರಸ್ತುತ ಯುರೋಪ್ ಮಧ್ಯಪ್ರಾಚ್ಯದಿಂದ ಬಹಳಷ್ಟು [ಕಚ್ಚಾ] ತೈಲವನ್ನು ಖರೀದಿಸುತ್ತಿದೆ ಎಂಬುದನ್ನು ನೆನಪಿನಲ್ಲಿಡಿ. ಭಾರತದಂತಹ ಆರ್ಥಿಕತೆಗೆ ಮಧ್ಯಪ್ರಾಚ್ಯವು ಸಾಂಪ್ರದಾಯಿಕವಾಗಿ ಪೂರೈಕೆದಾರರಾಗಿದ್ದರು. ಆದ್ದರಿಂದ ಇದು ಮಧ್ಯಪ್ರಾಚ್ಯದಲ್ಲಿಯೂ ಬೆಲೆಗಳ ಮೇಲೆ ಒತ್ತಡ ಹೇರುತ್ತದೆ. ಯುರೋಪಿಯನ್ ಒಕ್ಕೂಟದಲ್ಲಿ ತೈಲ ಆಮದು, ಭಾರತ ಮಾಡಿಕೊಂಡಿದ್ದಕ್ಕಿಂತ ಆರು ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

jaishankar 1

ಭಾರತ-ಯುಎಸ್ ಸಂಬಂಧದ ಸವಾಲು
ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವು ದಶಕಗಳಿಂದ ಹಲವಾರು ಸವಾಲುಗಳನ್ನು ಎದುರಿಸಿದೆ. 1971 ರ ಯುದ್ಧದ ಸಮಯದಲ್ಲಿ ಅಮೆರಿಕ ಅಧ್ಯಕ್ಷ ರಿಚರ್ಡ್ ನಿಕ್ಸನ್ ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದರು. ಆಗಿನಿಂದ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಭಾರತ-ಯುಎಸ್ ಸಂಬಂಧಗಳಲ್ಲಿ ಏರಿಳಿತವನ್ನು ಗುರುತಿಸಬಹುದು. ಯುಎಸ್ ನೌಕಾಪಡೆಯು ಬಂಗಾಳ ಕೊಲ್ಲಿಗೆ ಎಂಟ್ರಿ ಕೊಟ್ಟಿತ್ತು. ಆದರೆ, ಸೋವಿಯತ್ ಒಕ್ಕೂಟದೊಂದಿಗಿನ ಭಾರತದ ಸ್ನೇಹ ಒಪ್ಪಂದವು ಅಮೆರಿಕನ್ನರು ನೇರವಾಗಿ ಯುದ್ಧಕ್ಕೆ ಪ್ರವೇಶಿಸುವುದನ್ನು ತಡೆಯಿತು.

1998ರ ಮೇ ತಿಂಗಳಲ್ಲಿ ಪೋಖ್ರಾನ್‌ನಲ್ಲಿ ನಡೆದ ಪರಮಾಣು ಪರೀಕ್ಷೆಗಳ ನಂತರ ಅಮೆರಿಕ ಮತ್ತು ಹೆಚ್ಚಿನ ಪಶ್ಚಿಮ ದೇಶಗಳು ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸಿದವು. ಭಾರತವು ಅಮೆರಿಕದೊಂದಿಗೆ ತೊಡಗಿಸಿಕೊಳ್ಳುವ ಮೂಲಕ ಬಿಕ್ಕಟ್ಟಿನಿಂದ ಹೊರಬಂದಿತು. ಜಸ್ವಂತ್ ಸಿಂಗ್ ಮತ್ತು ಆಗಿನ ಅಮೆರಿಕದ ವಿದೇಶಾಂಗ ಉಪ ಕಾರ್ಯದರ್ಶಿ ಸ್ಟ್ರೋಬ್ ಟಾಲ್ಬಾಟ್ ನಡುವಿನ ಮಾತುಕತೆಗಳು ಅಂತಿಮವಾಗಿ ಒಂದು ದಶಕದ ನಂತರ 2008 ರಲ್ಲಿ ಭಾರತ-ಯುಎಸ್ ಪರಮಾಣು ಒಪ್ಪಂದಕ್ಕೆ ಕಾರಣವಾಯಿತು.

2013ರ ಡಿಸೆಂಬರ್‌ನಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಗಡೆ ಅವರಿಗೆ ಸಾಕಷ್ಟು ಸಹಾಯ ನೀಡುತ್ತಿಲ್ಲ ಎಂಬ ಆರೋಪದ ಮೇಲೆ ಅವರನ್ನು ಬಂಧಿಸಿ ತಪಾಸಣೆ ನಡೆಸಲಾಯಿತು. ಈ ಘಟನೆಯು ಭಾರತೀಯ ರಾಜತಾಂತ್ರಿಕರನ್ನು ಕೆರಳಿಸಿತು. ಸರ್ಕಾರವು ಒಂದು ಅಂಶವನ್ನು ಸ್ಪಷ್ಟಪಡಿಸಲು ಕ್ರಮಗಳನ್ನು ತೆಗೆದುಕೊಂಡಿತು. ನವದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಸುತ್ತಲಿನ ಭದ್ರತಾ ಬ್ಯಾರಿಕೇಡ್‌ಗಳನ್ನು ತೆಗೆದುಹಾಕುವುದು ಮತ್ತು ಭಾರತದಲ್ಲಿನ ಅಮೆರಿಕದ ರಾಜತಾಂತ್ರಿಕರಿಗೆ ರಾಜತಾಂತ್ರಿಕ ಸವಲತ್ತುಗಳನ್ನು ಪರಿಶೀಲಿಸುವ ಕ್ರಮಕೈಗೊಂಡಿತು. ಆ ಸಮಯದಲ್ಲಿ ಜೈಶಂಕರ್ ಅವರು ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿದ್ದರು. ಖೋಬ್ರಗಡೆ ಅವರ ಬಿಡುಗಡೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಯುಪಿಎ II ಸರ್ಕಾರದ ಕೊನೆಯ ಆರು ತಿಂಗಳಲ್ಲಿ ಅಮೆರಿಕದೊಂದಿಗಿನ ಸಂಬಂಧಗಳು ತೀವ್ರ ಹಿನ್ನಡೆಯನ್ನು ಅನುಭವಿಸಿದವು. ಸಂಬಂಧಗಳನ್ನು ಮತ್ತೆ ಹಳಿಗೆ ತರಲು 2014 ರಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಮಾತುಕತೆ ನಡೆಯಿತು. ಇದನ್ನೂ ಓದಿ: ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್‌

Trump Modi

ಅಧ್ಯಕ್ಷ ಟ್ರಂಪ್ ಜೊತೆ ವ್ಯವಹಾರ
ಇತ್ತೀಚಿನ ದಿನಗಳಲ್ಲಿ ಭಾರತದ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸುತ್ತಿದ್ದಾರೆ. ಅದಕ್ಕೆ ಭಾರತ ಕೂಡ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಟ್ರಂಪ್ ಆಡಳಿತದ ದ್ವಂದ್ವ ಮಾನದಂಡಗಳಿಗೆ ಭಾರತ ಕನ್ನಡಿ ಹಿಡಿದಿದೆ. ರಷ್ಯಾ ಜೊತೆಗಿನ ಭಾರತದ ತೈಲ ಖರೀದಿ ಒಪ್ಪಂದವನ್ನು ಖಂಡಿಸುತ್ತಿರುವ ಟ್ರಂಪ್, ಭಾರತದ ಮೇಲೆ ಒಟ್ಟಾರೆ 50% ಸುಂಕ ವಿಧಿಸಿದ್ದಾರೆ. ಆ ಮೂಲಕ ಬೆದರಿಸುವ ತಂತ್ರವನ್ನು ಅನುಸರಿಸಿದ್ದಾರೆ. ಆದರೆ, ಭಾರತ ಇದಕ್ಕೆ ಡೋಂಟ್ ಕೇರ್ ಎಂದಿದೆ. ಪ್ರಧಾನಿ ಮೋದಿ ಕೂಡ ಸುಂಕದ ಬಗ್ಗೆ ಮೌನ ಮುರಿದಿದ್ದಾರೆ. ಇತ್ತ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾಗೆ ಭೇಟಿ ನೀಡಿ ಪುಟಿನ್ ಜೊತೆ ಮಾತುಕತೆ ನಡೆಸಿದ್ದಾರೆ. ಶತಮಾನಗಳಿಂದ ಭಾರತದ ಜೊತೆ ಸ್ನೇಹಿತನಂತೆ ರಷ್ಯಾ ನಿಂತಿದೆ. ಆ ದೇಶದ ಜೊತೆಗಿನ ಸಂಬಂಧ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭಾರತ ಹೆಜ್ಜೆ ಇಟ್ಟಿದೆ.

ಟ್ರಂಪ್ ಅವರ ಮಾತುಗಳು ಮತ್ತು ಕಾರ್ಯಗಳು, ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ಅವರ ಮಾತುಗಳು ಸತ್ಯ ಎಂಬುದನ್ನು ಸಾಬೀತುಪಡಿಸುವಂತಿದೆ. ಅಮೆರಿಕದ ಶತ್ರುವಾಗುವುದು ಅಪಾಯಕಾರಿ, ಆದರೆ ಸ್ನೇಹಿತನಾಗಿರುವುದು ಮಾರಕವಾಗಬಹುದು ಎಂದು ಹೆನ್ರಿ ಹೇಳಿದ್ದರು. ಒಟ್ಟಾರೆಯಾಗಿ ಹೇಳುವುದಾದರೆ, ಟ್ರಂಪ್ ಅವರನ್ನು ನಿಭಾಯಿಸುವುದು 1998 ರ ನಂತರದ ಭಾರತೀಯ ರಾಜತಾಂತ್ರಿಕತೆಗೆ ಇರುವ ದೊಡ್ಡ ಸವಾಲಾಗಿದೆ.

TAGGED:donald trumpindiaPM ModirussiaTariffUSಅಮೆರಿಕಟ್ಯಾರಿಫ್ಡೊನಾಲ್ಡ್ ಟ್ರಂಪ್ಪಿಎಂ ಮೋದಿಭಾರತರಷ್ಯಾ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

T20 India Team India champion
Cricket

ಭಾರತ ಟಿ20 ವಿಶ್ವಕಪ್‌ ಗೆದ್ದ ಖುಷಿಗೆ ಉದ್ಯೋಗಿಗಳಿಗೆ ತಲಾ 2,000 ರೂ. ಗಿಫ್ಟ್‌ ಕೊಟ್ಟ ಕೇರಳ ಉದ್ಯಮಿ

Public TV
By Public TV
5 minutes ago
BY Vijayendra 1
Bagalkot

ಬಾಗಲಕೋಟೆ-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ: ವಿಜಯೇಂದ್ರ

Public TV
By Public TV
51 minutes ago
United States Air Force KC 135
Latest

ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುವ ವಿಮಾನ ಪತನ – ನಾಲ್ವರು ಸಾವು, ಇಬ್ಬರಿಗೆ ಗಾಯ

Public TV
By Public TV
1 hour ago
SUDHAKAR
Latest

HN ವ್ಯಾಲಿ, KC ವ್ಯಾಲಿಯಲ್ಲಿ ತೃತೀಯ ಹಂತದ ಸಂಸ್ಕರಣೆ ಯೋಜನೆ ತರಬೇಕು, ಇಲ್ಲದಿದ್ರೆ ಸರ್ಕಾರದ ವಿರುದ್ಧ ಪಾದಯಾತ್ರೆ: ಸಂಸದ ಸುಧಾಕರ್‌

Public TV
By Public TV
2 hours ago
POCSO Special Court
Bengaluru City

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್

Public TV
By Public TV
2 hours ago
chikkamagaluru court sentences man to death for killing couple
Chikkamagaluru

ಎನ್‌.ಆರ್‌ಪುರ | ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?